AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, […]

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?
ಡಿಕೆಶಿಗೆ ಟಾಂಗ್: ಸಿದ್ದರಾಮಯ್ಯ ಇಮೇಜ್​ ಬಿಲ್ಡಿಂಗ್​, ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 05, 2020 | 2:32 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, ನಿಮ್ಮ ಜೊತೆ ಸುದೀರ್ಘವಾದ ವಿಶ್ವಾಸದಿಂದ ಕೆಲಸ ಮಾಡುವುದಕ್ಕೆ ನಾನು ಸಿದ್ಧ ಎಂದು ಡಿಕೆಶಿ ಹೇಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ನಾನು ಯಾರೇ ಕೆಪಿಸಿಸಿ ಅಧ್ಯಕ್ಷರಾಗುವುದಕ್ಕೂ ನಾನು ಅಡ್ಡಿಪಡಿಸಿಲ್ಲ. ನೀವು ಅಧ್ಯಕ್ಷರಾಗುವುದಕ್ಕೂ ನಾನು ತಕರಾರು ಮಾಡಿಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆಯೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ನಾನು ಯಾವುದೇ ಹುದ್ದೆ ಕೇಳಲ್ಲ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ಅವರ ಕೈಕೆಳಗೆ ಕೆಲಸ ಮಾಡಿದ್ದೇನೆ. ಹೀಗಾಗಿ ಭೇಟಿ ಮಾಡಿ ಮಾತಾಡಿದ್ದೇನೆ. ಅದ್ರಲ್ಲಿ ಏನು ವಿಶೇಷ ಇಲ್ಲ ಎಂದು ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಹುದ್ದೆ ಕೇಳಲ್ಲ, ಕೇಳೋ ಕಾಲ ಹೋಗಿದೆ. ಯಾರು ಬೇಕಾದ್ರು ಯಾವ ಹುದ್ದೆ ಬೇಕಾದ್ರು ಕೇಳಲಿ. ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ. ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಏನು ತೀರ್ಮಾನ ಮಾಡ್ತಾರೋ ಅದಕ್ಕೆ ನಾನು ಬದ್ಧ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ