AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, […]

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?
ಡಿಕೆಶಿಗೆ ಟಾಂಗ್: ಸಿದ್ದರಾಮಯ್ಯ ಇಮೇಜ್​ ಬಿಲ್ಡಿಂಗ್​, ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ
ಸಾಧು ಶ್ರೀನಾಥ್​
|

Updated on: Jan 05, 2020 | 2:32 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, ನಿಮ್ಮ ಜೊತೆ ಸುದೀರ್ಘವಾದ ವಿಶ್ವಾಸದಿಂದ ಕೆಲಸ ಮಾಡುವುದಕ್ಕೆ ನಾನು ಸಿದ್ಧ ಎಂದು ಡಿಕೆಶಿ ಹೇಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ನಾನು ಯಾರೇ ಕೆಪಿಸಿಸಿ ಅಧ್ಯಕ್ಷರಾಗುವುದಕ್ಕೂ ನಾನು ಅಡ್ಡಿಪಡಿಸಿಲ್ಲ. ನೀವು ಅಧ್ಯಕ್ಷರಾಗುವುದಕ್ಕೂ ನಾನು ತಕರಾರು ಮಾಡಿಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆಯೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ನಾನು ಯಾವುದೇ ಹುದ್ದೆ ಕೇಳಲ್ಲ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ಅವರ ಕೈಕೆಳಗೆ ಕೆಲಸ ಮಾಡಿದ್ದೇನೆ. ಹೀಗಾಗಿ ಭೇಟಿ ಮಾಡಿ ಮಾತಾಡಿದ್ದೇನೆ. ಅದ್ರಲ್ಲಿ ಏನು ವಿಶೇಷ ಇಲ್ಲ ಎಂದು ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಹುದ್ದೆ ಕೇಳಲ್ಲ, ಕೇಳೋ ಕಾಲ ಹೋಗಿದೆ. ಯಾರು ಬೇಕಾದ್ರು ಯಾವ ಹುದ್ದೆ ಬೇಕಾದ್ರು ಕೇಳಲಿ. ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ. ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಏನು ತೀರ್ಮಾನ ಮಾಡ್ತಾರೋ ಅದಕ್ಕೆ ನಾನು ಬದ್ಧ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ