ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ

ಅಮೆರಿಕದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯಿಸಿದ್ದು, ಸಿಎಂ ಆಗುವ ಉದ್ದೇಶದಿಂದ ರಾಹುಲ್​ಯನ್ನು ಡಿಕೆ ಶಿವಕುಮಾರ್​ ಭೇಟಿಯಾಗಿದ್ದಾರೆ ಎಂದಿದ್ದಾರೆ.

ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ
ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 11, 2024 | 9:31 PM

ಹುಬ್ಬಳ್ಳಿ, ಸೆಪ್ಟೆಂಬರ್​​ 11: ಸಿಎಂ ಆಗುವ ಉದ್ದೇಶದಿಂದ ರಾಹುಲ್ ಗಾಂಧಿಯನ್ನು ಡಿಸಿಎಂ ಡಿಕೆ ಶಿವಕುಮಾರ್​​ (DK Shivakumar) ಭೇಟಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಅಮೆರಿಕದಲ್ಲಿ ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್​ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿ ಮಾತಾಡಿದರೆ ಗೊತ್ತಾಗುತ್ತೆಂದು ಅಲ್ಲಿ ಭೇಟಿ ಆಗಿದ್ದಾರೆ. ಅದಕ್ಕೆ ಅಲ್ಲಿ ಒಂದು ಫೋಟೋ ಬಿಟ್ಟಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕ್ತಿದಾರೆ: ಜೋಶಿ ವಾಗ್ದಾಳಿ

ವಿದೇಶದಲ್ಲಿ ರಾಹುಲ್ ಗಾಂಧಿಯಿಂದ ಅಪ್ರಬುದ್ಧ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದಾರೆ. ಕಾಂಗ್ರೆಸ್ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿ. ನೆಹರು, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಕಾಂಗ್ರೆಸ್​ ಸಾಮಾಜಿಕ ವಿರೋಧಿ ಅನ್ನೋದು ಸ್ಪಷ್ಟವಾಗುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ

ಅಂಬೇಡ್ಕರ್​ಗೆ ಅಪಮಾನ ಮಾಡಿದವರು ಕಾಂಗ್ರೆಸ್​ನವರು. ಬಾಬು ಜಗಜೀವನ್​ ರಾಮ್​ಗೆ ಕಾಂಗ್ರೆಸ್​ನಿಂದ ಅನ್ಯಾಯವಾಗಿದೆ. ದಲಿತರು, ಅಲ್ಪಸಂಖ್ಯಾತರನ್ನ ಮತಬ್ಯಾಂಕ್​ ಮಾಡ್ಕೊಂಡಿದೆ. ರಾಹುಲ್ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತೇನೆ. ರಾಜಕೀಯ ಟೀಕೆ ಭರದಲ್ಲಿ ಇಂಥ ಮಾತು ಸರಿಯಲ್ಲ. ದೇಶದ ಪ್ರತಿಷ್ಠೆಗೆ ರಾಹುಲ್​​ ಗಾಂಧಿ ಮಸಿ ಬಳಿಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹ

ಕಾಮಗಾರಿ ವೇಳೆ ಕಬ್ಬಿಣದ ರಾಡ್ ​ಬಿದ್ದು ಎಎಸ್​ಐಗೆ ಗಾಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ದುರ್ದೈವದ ಘಟನೆ, ಈ ರೀತಿ ಆಗಬಾರದಿತ್ತು. ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿತ್ತು. ಈ ಕಾಮಗಾರಿಗೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಇದನ್ನ ರಾಜ್ಯ ಸರ್ಕಾರ ಜಾರಿಗೆ ತರ್ತಾ ಇದ್ದಾರೆ. ಇಂತಹ ಯೋಜನೆಗಳಿಗೆ ಕೇಂದ್ರ ಅನುದಾನವನ್ನ ಕೊಟ್ಟಿಲ್ಲ ಆದರೆ, ಈ ಕಾಮಗಾರಿಗೆ ಅನುದಾನವನ್ನು ಕೊಡಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಇಲಾಖೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಓಟ್ ಬ್ಯಾಂಕ್​ಗಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆ

ಬಿಜೆಪಿ ಕಚೇರಿ ಟಾರ್ಗೆಟ್ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಕಚೇರಿ ಟಾರ್ಗೆಟ್ ಮಾಡಿದ್ದರು ಎಂದ ಎನ್.ಐ.ಎ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಸರ್ಕಾರದವರು ಸಹ ಹೇಗೆ ನಡೆದು ಕೊಳುತ್ತಿದ್ದಾರೆ. ಕೆಲವು ಮಂತ್ರಿಗಳು ಇದನ್ನ ಸುಳ್ಳು ಅಂತಾರೆ. ಭಯೋತ್ಪಾದಕರನ್ನು ಬೆಂಬಲಿಸಿ ಮಾತನಾಡುವ ಪ್ರವೃತ್ತಿಯಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ, ಸಿದ್ದರಾಮಯ್ಯ ಸ್ಪಷ್ಟನೆ

ಗಡಿ ರಾಜ್ಯದಲ್ಲಿನ ಘಟನೆಗಳ ಬಗ್ಗೆ ಕ್ರಮ ಕೈಗೊಳ್ತಿರೋದ್ರಿಂದ ಯಾವುದೇ ರೀತಿಯ ಅನಾಹುತ ನಡೆದಿಲ್ಲ. ಕರ್ನಾಟಕದಲ್ಲಿ ಕುಕ್ಕರ್, ಬಾಂಬ್ ಬ್ಲಾಸ್ಟ್ ಆದಾಗ ನಮ್ಮ ಸಹೋದರ ಅಂತಾರೆ. ವಿ ಆರ್ ಮೈ ಬ್ರದರ್ಸ್ ಅಂತಾರೆ. ರಾಮೇಶ್ವರ ಕೆಫೆ ಘಟನೆ ಆದಾಗ ಸಿಲೆಂಡರ್ ಬ್ಲಾಸ್ಟ್ ಅಂತಾರೆ. ಓಟ್ ಬ್ಯಾಂಕ್​ಗಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸರಯೂ ನದಿಯಲ್ಲಿ ಮುಳುಗಿದ ಸರ್ಕಾರಿ ಶಾಲೆ; ಶಾಕಿಂಗ್ ವಿಡಿಯೋ ವೈರಲ್
ಸರಯೂ ನದಿಯಲ್ಲಿ ಮುಳುಗಿದ ಸರ್ಕಾರಿ ಶಾಲೆ; ಶಾಕಿಂಗ್ ವಿಡಿಯೋ ವೈರಲ್
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್