AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರಿಗೆ ಆಮಿಷ, ಬೆದರಿಕೆ ಆರೋಪ: ಎಫ್​ಐಆರ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್

ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ದಾಖಲಾಗಿರುವ ಎಫ್​ಐಆರ್ ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷವೊಡ್ಡಿರುವ ಬಗ್ಗೆ ಅವರ ವಿರುದ್ಧ ಬಿಜೆಪಿ ಆರೋಪ ಮಾಡಿತ್ತು. ಬಿಜೆಪಿ ನೀಡಿದ್ದ ದೂರಿನ ಆಧಾರದಲ್ಲಿ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಮತದಾರರಿಗೆ ಆಮಿಷ, ಬೆದರಿಕೆ ಆರೋಪ: ಎಫ್​ಐಆರ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Ramesha M
| Edited By: |

Updated on: Apr 23, 2024 | 2:45 PM

Share

ಬೆಂಗಳೂರು, ಏಪ್ರಿಲ್ 23: ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷವೊಡ್ಡಿರುವ ಆರೋಪದಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಂಗಳವಾರ ಹೈಕೋರ್ಟ್ (Karnataka High Court)​ ಮೆಟ್ಟಿಲೇರಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ರಾಜರಾಜೇಶ್ವರಿ ನಗರದ ಅಪಾರ್ಟ್​ಮೆಂಟೊಂದರಲ್ಲಿ ಮತಯಾಚನೆ ಮಾಡಿದ್ದ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿ ಅವರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿತ್ತು. ನಂತರ ಆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಡಿಕೆ ಶಿವಕುಮಾರ್ ವಿರುದ್ಧ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು.

ಹಕ್ಕುಪತ್ರ, ಕಾವೇರಿ ನೀರು ಬೇಕಿದ್ದರೆ ನಮಗೆ ಮತ ನೀಡಿ ಎಂದಿದ್ದ ಡಿಕೆಶಿ

ರಾಜರಾಜೇಶ್ವರಿ ನಗರದ ಅಪಾರ್ಟ್​ಮೆಂಟೊಂದರಲ್ಲಿ ಮತಯಾಚನೆ ಮಾಡಲು ತೆರಳಿದ್ದ ಡಿಕೆ ಶಿವಕುಮಾರ್, ನಾನು ಇಲ್ಲಿಗೆ ಬ್ಯುಸಿನೆಸ್ ಡೀಲ್​ ಮಾಡಲು ಬಂದಿದ್ದೇನೆ. ನಿಮಗೆ ಅಪಾರ್ಟ್​​ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುವ ವ್ಯವಸ್ಥೆ ಮಾಡುತ್ತೇನೆ ಎಂದು ಆಮಿಷವೊಡ್ಡಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲು

ಕಾವೇರಿ ನೀರು ಸಂಪರ್ಕ ದೊರೆಯದಿರುವುದು ನಿಮ್ಮ ಇನ್ನೊಂದು ಸಮಸ್ಯೆ. ಈ ಎರಡೂ ಸಮಸ್ಯೆಗಳನ್ನು ಬಗೆಹರಿಸಿಕೊಟ್ಟರೆ ನೀವೇನು ಕೊಡುತ್ತೀರಿ? ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಆಡಳಿತ, ಜಲ ಸಂಪನ್ಮೂಲ ಖಾತೆ ಎಲ್ಲವೂ ನನ್ನ ಕೈಯಲ್ಲೇ ಇದೆ. ಹೀಗಾಗಿ ನಾನೇ ಈ ಕೆಲಸವನ್ನು ನಿಮಗೆ ಮಾಡಿಕೊಡಬೇಕಾಗುತ್ತದೆ ಎಂದು ಡಿಕೆ ಶಿವಕುಮಾರ್ ಮತದಾರರನ್ನು ಉದ್ದೇಶಿಸಿ ಹೇಳಿರುವುದು ಬಿಜೆಪಿ ಟ್ವೀಟ್ ಮಾಡಿದ ವಿಡಿಯೋದಲ್ಲಿ ಕಂಡುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!