AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ: ವಿವಿಧ ಕಾರ್ಯಕ್ರಮಗಳ ಬಗ್ಗೆ ಡಿಕೆ ಶಿವಕುಮಾರ್ ಮಾಹಿತಿ

DK Shivakumar: ನವೆಂಬರ್​ನಲ್ಲಿ ಯುವಜನರಿಗೆ, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮ ಆಯೊಜಿಸಲಾಗ್ತಿದೆ‌. ಪ್ರತಿ ಜಿಲ್ಲೆಯಲ್ಲಿ ಜವಾಬ್ದಾರಿ ವಹಿಸಲಾಗ್ತಿದೆ‌. ಇದು ಪಕ್ಷದ ಸಂಘಟನೆಯ ವರ್ಷ. ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ: ವಿವಿಧ ಕಾರ್ಯಕ್ರಮಗಳ ಬಗ್ಗೆ ಡಿಕೆ ಶಿವಕುಮಾರ್ ಮಾಹಿತಿ
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Aug 17, 2021 | 9:55 PM

Share

ರಾಯಚೂರು: ಕಾಂಗ್ರೆಸ್ ಸಂಸ್ಥಾಪನಾ ದಿನ ಹಿನ್ನೆಲೆ ಕರ್ನಾಟಕ ಕಾಂಗ್ರೆಸ್ ಪಕ್ಷ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಇರಲಿದ್ದು, ಅಂದಿನ ವಿವಿಧ ವಿಶೇಷ ಕಾರ್ಯಕ್ರಮಗಳ ಬಗ್ಗೆ ಇಂದು (ಆಗಸ್ಟ್ 17) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಯಚೂರಿನಲ್ಲಿ ಮಾಹಿತಿ ನೀಡಿದ್ದಾರೆ. ಆ ದಿನದಂದು, ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡುತ್ತೇವೆ. ಪ್ರತಿ ಪಂಚಾಯಿತಿಯಲ್ಲಿ ಸಭೆ ನಡೆಸಲು ಸಲಹೆ ಬಂದಿದೆ. ಕೇಂದ್ರದ ಧೋರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತೆ ಎಂದು ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸ್ಥಾಪನಾ ದಿನ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಏಕೆ ಸಿಎಂ ಬದಲಾವಣೆ ಮಾಡಿದರೆಂದು ಬಿಜೆಪಿ ಪಕ್ಷ ಹೇಳಲಿ. ಕೇಂದ್ರ ಆರೋಗ್ಯ ಸಚಿವರನ್ನು ಏಕೆ ತೆಗೆದರು ಎಂದೂ ಅವರು ಹೇಳಬೇಕು ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ದೇಶಾದ್ಯಂತ ಬಿಜೆಪಿ ಜನಾಶೀರ್ವಾದ ಯಾತ್ರೆ ವಿಚಾರವಾಗಿ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇವರು ಕೊರೊನಾಗೆ ಬಲಿಯಾದವರ ಮನೆಗೆ ಹೋಗಲಿಲ್ಲ. ದೇಶದಲ್ಲಿ ಕೊರೊನಾಗೆ 4 ಲಕ್ಷ ಜನರು ಬಲಿಯಾಗಿದ್ದಾರೆ. ಜನರಿಗಾಗಿ ಏನು ಮಾಡಿದ್ದಾರೆಂದು ಈಗ ಯಾತ್ರೆ ಹೋಗುತ್ತಿದ್ದಾರೆ ಎಂದು ಬಿಜೆಪಿ ಜನಾಶೀರ್ವಾದ ಯಾತ್ರೆಯನ್ನು ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನ ದಿನ ಇರಲಿದೆ. ನವೆಂಬರ್​ನಲ್ಲಿ ಯುವಜನರಿಗೆ, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮ ಆಯೊಜಿಸಲಾಗ್ತಿದೆ‌. ಪ್ರತಿ ಜಿಲ್ಲೆಯಲ್ಲಿ ಜವಾಬ್ದಾರಿ ವಹಿಸಲಾಗ್ತಿದೆ‌. ಇದು ಪಕ್ಷದ ಸಂಘಟನೆಯ ವರ್ಷ. ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್​ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ

ಕಾಂಗ್ರೆಸ್ ಕಣ್ಣುಮುಚ್ಚಿಕೊಂಡು ಮುಂದೆ ಹೋಗುತ್ತಿದೆ: ಸುಶ್ಮಿತಾ ದೇವ್ ರಾಜೀನಾಮೆ ಬೆನ್ನಲ್ಲೇ ಕಪಿಲ್ ಸಿಬಲ್ ಟೀಕೆ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ