AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ: ವಿವಿಧ ಕಾರ್ಯಕ್ರಮಗಳ ಬಗ್ಗೆ ಡಿಕೆ ಶಿವಕುಮಾರ್ ಮಾಹಿತಿ

DK Shivakumar: ನವೆಂಬರ್​ನಲ್ಲಿ ಯುವಜನರಿಗೆ, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮ ಆಯೊಜಿಸಲಾಗ್ತಿದೆ‌. ಪ್ರತಿ ಜಿಲ್ಲೆಯಲ್ಲಿ ಜವಾಬ್ದಾರಿ ವಹಿಸಲಾಗ್ತಿದೆ‌. ಇದು ಪಕ್ಷದ ಸಂಘಟನೆಯ ವರ್ಷ. ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ: ವಿವಿಧ ಕಾರ್ಯಕ್ರಮಗಳ ಬಗ್ಗೆ ಡಿಕೆ ಶಿವಕುಮಾರ್ ಮಾಹಿತಿ
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 17, 2021 | 9:55 PM

Share

ರಾಯಚೂರು: ಕಾಂಗ್ರೆಸ್ ಸಂಸ್ಥಾಪನಾ ದಿನ ಹಿನ್ನೆಲೆ ಕರ್ನಾಟಕ ಕಾಂಗ್ರೆಸ್ ಪಕ್ಷ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಇರಲಿದ್ದು, ಅಂದಿನ ವಿವಿಧ ವಿಶೇಷ ಕಾರ್ಯಕ್ರಮಗಳ ಬಗ್ಗೆ ಇಂದು (ಆಗಸ್ಟ್ 17) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಯಚೂರಿನಲ್ಲಿ ಮಾಹಿತಿ ನೀಡಿದ್ದಾರೆ. ಆ ದಿನದಂದು, ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡುತ್ತೇವೆ. ಪ್ರತಿ ಪಂಚಾಯಿತಿಯಲ್ಲಿ ಸಭೆ ನಡೆಸಲು ಸಲಹೆ ಬಂದಿದೆ. ಕೇಂದ್ರದ ಧೋರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತೆ ಎಂದು ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸ್ಥಾಪನಾ ದಿನ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಏಕೆ ಸಿಎಂ ಬದಲಾವಣೆ ಮಾಡಿದರೆಂದು ಬಿಜೆಪಿ ಪಕ್ಷ ಹೇಳಲಿ. ಕೇಂದ್ರ ಆರೋಗ್ಯ ಸಚಿವರನ್ನು ಏಕೆ ತೆಗೆದರು ಎಂದೂ ಅವರು ಹೇಳಬೇಕು ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ದೇಶಾದ್ಯಂತ ಬಿಜೆಪಿ ಜನಾಶೀರ್ವಾದ ಯಾತ್ರೆ ವಿಚಾರವಾಗಿ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇವರು ಕೊರೊನಾಗೆ ಬಲಿಯಾದವರ ಮನೆಗೆ ಹೋಗಲಿಲ್ಲ. ದೇಶದಲ್ಲಿ ಕೊರೊನಾಗೆ 4 ಲಕ್ಷ ಜನರು ಬಲಿಯಾಗಿದ್ದಾರೆ. ಜನರಿಗಾಗಿ ಏನು ಮಾಡಿದ್ದಾರೆಂದು ಈಗ ಯಾತ್ರೆ ಹೋಗುತ್ತಿದ್ದಾರೆ ಎಂದು ಬಿಜೆಪಿ ಜನಾಶೀರ್ವಾದ ಯಾತ್ರೆಯನ್ನು ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸಂಸ್ಥಾಪನ ದಿನ ಇರಲಿದೆ. ನವೆಂಬರ್​ನಲ್ಲಿ ಯುವಜನರಿಗೆ, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮ ಆಯೊಜಿಸಲಾಗ್ತಿದೆ‌. ಪ್ರತಿ ಜಿಲ್ಲೆಯಲ್ಲಿ ಜವಾಬ್ದಾರಿ ವಹಿಸಲಾಗ್ತಿದೆ‌. ಇದು ಪಕ್ಷದ ಸಂಘಟನೆಯ ವರ್ಷ. ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್​ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ

ಕಾಂಗ್ರೆಸ್ ಕಣ್ಣುಮುಚ್ಚಿಕೊಂಡು ಮುಂದೆ ಹೋಗುತ್ತಿದೆ: ಸುಶ್ಮಿತಾ ದೇವ್ ರಾಜೀನಾಮೆ ಬೆನ್ನಲ್ಲೇ ಕಪಿಲ್ ಸಿಬಲ್ ಟೀಕೆ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ