AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಿಕ್ಷೆ ಬೇಡಿದರೂ ಅವತ್ತು ಅವರು ನನ್ನನ್ನು ಬಿಡಲಿಲ್ಲ, ಇವತ್ತು ಋಣ ತೀರಿಸ್ತಿದ್ದೇನೆ’

ರಾಮನಗರ: ಡಿಕೆ ಶಿವಕುಮಾರ್ ಇಂದು ತಮ್ಮ ಸ್ವಗ್ರಾಮವಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿರುವ ತನ್ನ ಅಜ್ಜಿ ಹಾಗೂ ತಂದೆ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು,ಕಾರ್ಯಕರ್ತರು ಡಿಕೆಶಿ ಅವರನ್ನ ಅದ್ಧೂರಿಯಾಗಿ ಬರಮಾಡಿಕೊಂಡರು. ಸ್ವಗ್ರಾಮಕ್ಕೆ ಬಂದು ಇಳಿದ ನಂತರ ಡಿಕೆಶಿ ದೊಡ್ಡ ಆಲಹಳ್ಳಿಯಲ್ಲಿರುವ ತಮ್ಮ ಅಜ್ಜಿ ಪಾರ್ವತಮ್ಮ ಹಾಗೂ ತಂದೆ ಕೆಂಪೇಗೌಡ ಸಮಾಧಿಗೆ ಪೂಜೆ ಸಲ್ಲಿಸಿದರು. ಪೂಜೆಯಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್, ತಾಯಿ ಗೌರಮ್ಮ, ಡಿಕೆಶಿ ಪತ್ನಿ ಉಷಾ ಹಾಗೂ ಪುತ್ರಿಯರಾದ ಐಶ್ವರ್ಯ, ಆಭರಣ ಸೇರಿ […]

'ಭಿಕ್ಷೆ ಬೇಡಿದರೂ ಅವತ್ತು ಅವರು ನನ್ನನ್ನು ಬಿಡಲಿಲ್ಲ, ಇವತ್ತು ಋಣ ತೀರಿಸ್ತಿದ್ದೇನೆ'
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 28, 2019 | 6:21 PM

Share

ರಾಮನಗರ: ಡಿಕೆ ಶಿವಕುಮಾರ್ ಇಂದು ತಮ್ಮ ಸ್ವಗ್ರಾಮವಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿರುವ ತನ್ನ ಅಜ್ಜಿ ಹಾಗೂ ತಂದೆ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಅಭಿಮಾನಿಗಳು,ಕಾರ್ಯಕರ್ತರು ಡಿಕೆಶಿ ಅವರನ್ನ ಅದ್ಧೂರಿಯಾಗಿ ಬರಮಾಡಿಕೊಂಡರು. ಸ್ವಗ್ರಾಮಕ್ಕೆ ಬಂದು ಇಳಿದ ನಂತರ ಡಿಕೆಶಿ ದೊಡ್ಡ ಆಲಹಳ್ಳಿಯಲ್ಲಿರುವ ತಮ್ಮ ಅಜ್ಜಿ ಪಾರ್ವತಮ್ಮ ಹಾಗೂ ತಂದೆ ಕೆಂಪೇಗೌಡ ಸಮಾಧಿಗೆ ಪೂಜೆ ಸಲ್ಲಿಸಿದರು. ಪೂಜೆಯಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್, ತಾಯಿ ಗೌರಮ್ಮ, ಡಿಕೆಶಿ ಪತ್ನಿ ಉಷಾ ಹಾಗೂ ಪುತ್ರಿಯರಾದ ಐಶ್ವರ್ಯ, ಆಭರಣ ಸೇರಿ ಕುಟುಂಬ ಸಮೇತ ಭಾಗಿಯಾಗಿ ಪೂಜೆ ನೆರವೇರಿಸಿದ್ದಾರೆ.

ಇಡಿ ದಿನಗಳನ್ನು ನೆನೆದ ಡಿಕೆಶಿ: ತಂದೆ ಕಾರ್ಯ ಮಾಡುವ ಭಾಗ್ಯ ನನಗೆ ಇಂದು ಸಿಕ್ಕಿದೆ, ಇವತ್ತು ನನಗೆ ಪವಿತ್ರವಾದ ದಿನ. ಇಡಿಯವರು ಅವತ್ತು ತಂದೆ ಕಾರ್ಯ ಮಾಡಲು ನನ್ನನ್ನು ಬಿಟ್ಟಿರಲಿಲ್ಲ. ನಾನು ಅಂದು ಇಡಿಯವರ ಬಳಿ ವಿನಂತಿ ಮಾಡಲಿಲ್ಲ, ಭಿಕ್ಷೆ ಬೇಡಿದೆ. ನಾನು ಭಿಕ್ಷೆ ಬೇಡಿದರೂ ಅವರು ನನಗೆ ಅನುಮತಿ ಕೊಟ್ಟಿರಲಿಲ್ಲ. ಇಂದು ನಾನು, ನನ್ನ ಕುಟುಂಬ ಸೇರಿ ತಂದೆ ಕಾರ್ಯ ಮಾಡಿದ್ದೇವೆ. ಇಡಿಯವರ ವ್ಯಾಪಾರ ನಡೆದ ಬಗ್ಗೆ ನಾನು ಯಾವುದೇ ವ್ಯಾಖ್ಯಾನ ಮಾಡಲ್ಲ. ನಾನು ಕೆಂಪೇಗೌಡರಿಗೆ ಹುಟ್ಟಿರಬಹುದು ಅಷ್ಟೆ, ಜನ ನನ್ನನ್ನು ಸಾಕಿದ್ದಾರೆ, ಬೆಳೆಸಿದ್ದಾರೆ, ನಾನು ಅವರ ಋಣ ತೀರಿಸುತ್ತೇನೆ. ಮುಂದೆ ರಾಜಕೀಯ ಇದೆ. ರಾಜಕಾರಣ ಮಾಡೋಣ ಎಂದು ಪೂಜೆಯ ನಂತರ ಡಿಕೆಶಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.

Published On - 5:24 pm, Mon, 28 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?