AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಕಿ ರಾಜಕಾರಣ, ಆರೋಪಿಗಳ ಬಂಧಿಸದಿದ್ರೆ ಮುಖ್ಯಮಂತ್ರಿಗೆ ಮುಹೂರ್ತ ಇಡಬೇಕಾಗುತ್ತೆ’

ಬೆಂಗಳೂರು: ಸರ್ಕಾರದ ಅಕ್ಕಿಯನ್ನು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಫೋಟೋಗಳನ್ನು ಹಾಕಿ ಹಂಚಿಕೆ ಮಾಡಿದ್ದಾರೆ. ಅಕ್ಕಿ ಹಂಚಿಕೆ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಕೊರೊನಾ ವಿಚಾರದಲ್ಲಿ ರಾಜಕಾರಣ ಮಾಡಬಾರದು ಅಂತ ಸುಮ್ಮನಿದ್ದೇನೆ. ಮನವಿ ಮಾಡೋದು ಹೋಯ್ತು, ಈ ಕ್ಷಣದಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬಿಎಸ್​ವೈ ವಿರುದ್ಧ ವಾಗ್ದಾಳಿ: ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಊರುಗಳಿಗೆ ಕಳುಹಿಸಿಕೊಡಿ. ಅವರಿಗೆ ಕೂಲಿ ಇಲ್ಲ, ದುಡ್ಡು ಎಲ್ಲಿಂದ ತರಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ರಸ್ತೆಯಲ್ಲಿ ಭಿಕ್ಷೆ […]

‘ಅಕ್ಕಿ ರಾಜಕಾರಣ, ಆರೋಪಿಗಳ ಬಂಧಿಸದಿದ್ರೆ ಮುಖ್ಯಮಂತ್ರಿಗೆ ಮುಹೂರ್ತ ಇಡಬೇಕಾಗುತ್ತೆ’
ಸಾಧು ಶ್ರೀನಾಥ್​
|

Updated on: May 02, 2020 | 3:00 PM

Share

ಬೆಂಗಳೂರು: ಸರ್ಕಾರದ ಅಕ್ಕಿಯನ್ನು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಫೋಟೋಗಳನ್ನು ಹಾಕಿ ಹಂಚಿಕೆ ಮಾಡಿದ್ದಾರೆ. ಅಕ್ಕಿ ಹಂಚಿಕೆ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಕೊರೊನಾ ವಿಚಾರದಲ್ಲಿ ರಾಜಕಾರಣ ಮಾಡಬಾರದು ಅಂತ ಸುಮ್ಮನಿದ್ದೇನೆ. ಮನವಿ ಮಾಡೋದು ಹೋಯ್ತು, ಈ ಕ್ಷಣದಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬಿಎಸ್​ವೈ ವಿರುದ್ಧ ವಾಗ್ದಾಳಿ: ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಊರುಗಳಿಗೆ ಕಳುಹಿಸಿಕೊಡಿ. ಅವರಿಗೆ ಕೂಲಿ ಇಲ್ಲ, ದುಡ್ಡು ಎಲ್ಲಿಂದ ತರಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ರಸ್ತೆಯಲ್ಲಿ ಭಿಕ್ಷೆ ಬೇಡಿ ನಾನು ಕೊಡುತ್ತೇನೆ. ಯಡಿಯೂರಪ್ಪ ಈ ಕೆಲಸ ಮಾಡಲಿಲ್ಲ ಅಂದ್ರೆ ಅವರು ಬದುಕಿದ್ದು ಸತ್ತಂಗೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆಶಿ, ಆನೇಕಲ್​ನಲ್ಲಿ ನಡೆದ ಅಕ್ಕಿ, ಸಕ್ಕರೆ ಮರು ಪ್ಯಾಕಿಂಗ್ ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಕರಣವನ್ನು ನ್ಯಾಯಧೀಶರಿಂದ ತನಿಖೆಗೆ ಒತ್ತಾಯಿಸಿದರು. ಆರೋಪಿಗಳನ್ನು ಬಂಧಿಸಲಿಲ್ಲ ಅಂದ್ರೆ ನಿಮಗೆ ಮುಹೂರ್ತ ಇಡಬೇಕಾಗುತ್ತೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ರೆ ಹೋರಾಟ: ಡಿಡಿ ಉಷಾ ಹಾಗೂ ಸಿಡಿಪಿಒ ಇಬ್ಬರೂ ಒಪ್ಪಿಕೊಂಡು ದೂರು ದಾಖಲಿಸಿದ್ದಾರೆ. ಮುಖ್ಯಮಂತ್ರಿಗಳೇ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮಾಡುತ್ತೇನೆ. ಇಡೀ ರಾಜ್ಯಾದ್ಯಂತ ಬೀದಿಗಿಳಿಯುವುದು ಅನಿವಾರ್ಯ ಸೃಷ್ಟಿಯಾಗಿದೆ. ಪ್ರತೀ ಜಿಲ್ಲೆಯಿಂದ ಸಚಿವರಿಗೆ ಅಕ್ಕಿ ಬರಬೇಕಂತೆ. ಅಕ್ಕಿಯನ್ನು ರೀ ಪ್ಯಾಕ್ ಮಾಡಿ ಹಂಚಿಕೆ ಮಾಡುವಂತೆ ಸೂಚನೆ ನೀಡಿದ್ದಾರೆ. ಅವರನ್ನು ಬಂಧಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದರು.

ಸಿಡಿಪಿಒ, ಶಾಸಕರು, ವಕ್ತಾರರು ಇಡೀ ತಂಡವನ್ನು ಕರೆದುಕೊಂಡು ಹೋಗಿ ಸಕ್ಕರೆ, ಬೇಳೆ, ಗರ್ಭಿಣಿಯರ ಆಹಾರ, ಅಂಗನವಾಡಿ ಕೇಂದ್ರಗಳಿಗೆ ನೀಡುವ ಆಹಾರವನ್ನು ಬಿಜೆಪಿ ಹೆಸರಿನಲ್ಲಿ ಮರು ಪ್ಯಾಕಿಂಗ್ ಮಾಡಿ ಹಂಚಿದ್ದಾರೆ. ಆದರೆ ಈವರೆಗೆ ಯಾವ ತಪ್ಪಿತಸ್ಥರನ್ನು ಬಂಧಿಸಿಯೂ ಇಲ್ಲ. ಪ್ರಕರಣವನ್ನು ಸಹ ದಾಖಲು ಮಾಡಿಲ್ಲ. ಯಾವುದಕ್ಕೆ ಎಷ್ಟು ಕೊಟ್ಟು ಖರೀದಿಸಿದ್ದಾರೆಂದು ಗೊತ್ತಿದೆ. ಸಚಿವರು ಎಷ್ಟು ಕಮೀಷನ್ ಪಡೆದಿದ್ದಾರೆಂಬ ಮಾಹಿತಿಯೂ ಇದೆ. ಕೆಲವೇ ಕ್ಷಣಗಳಲ್ಲಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದರು.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು