AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಕಿ ರಾಜಕಾರಣ, ಆರೋಪಿಗಳ ಬಂಧಿಸದಿದ್ರೆ ಮುಖ್ಯಮಂತ್ರಿಗೆ ಮುಹೂರ್ತ ಇಡಬೇಕಾಗುತ್ತೆ’

ಬೆಂಗಳೂರು: ಸರ್ಕಾರದ ಅಕ್ಕಿಯನ್ನು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಫೋಟೋಗಳನ್ನು ಹಾಕಿ ಹಂಚಿಕೆ ಮಾಡಿದ್ದಾರೆ. ಅಕ್ಕಿ ಹಂಚಿಕೆ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಕೊರೊನಾ ವಿಚಾರದಲ್ಲಿ ರಾಜಕಾರಣ ಮಾಡಬಾರದು ಅಂತ ಸುಮ್ಮನಿದ್ದೇನೆ. ಮನವಿ ಮಾಡೋದು ಹೋಯ್ತು, ಈ ಕ್ಷಣದಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬಿಎಸ್​ವೈ ವಿರುದ್ಧ ವಾಗ್ದಾಳಿ: ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಊರುಗಳಿಗೆ ಕಳುಹಿಸಿಕೊಡಿ. ಅವರಿಗೆ ಕೂಲಿ ಇಲ್ಲ, ದುಡ್ಡು ಎಲ್ಲಿಂದ ತರಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ರಸ್ತೆಯಲ್ಲಿ ಭಿಕ್ಷೆ […]

‘ಅಕ್ಕಿ ರಾಜಕಾರಣ, ಆರೋಪಿಗಳ ಬಂಧಿಸದಿದ್ರೆ ಮುಖ್ಯಮಂತ್ರಿಗೆ ಮುಹೂರ್ತ ಇಡಬೇಕಾಗುತ್ತೆ’
ಸಾಧು ಶ್ರೀನಾಥ್​
|

Updated on: May 02, 2020 | 3:00 PM

Share

ಬೆಂಗಳೂರು: ಸರ್ಕಾರದ ಅಕ್ಕಿಯನ್ನು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಫೋಟೋಗಳನ್ನು ಹಾಕಿ ಹಂಚಿಕೆ ಮಾಡಿದ್ದಾರೆ. ಅಕ್ಕಿ ಹಂಚಿಕೆ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಕೊರೊನಾ ವಿಚಾರದಲ್ಲಿ ರಾಜಕಾರಣ ಮಾಡಬಾರದು ಅಂತ ಸುಮ್ಮನಿದ್ದೇನೆ. ಮನವಿ ಮಾಡೋದು ಹೋಯ್ತು, ಈ ಕ್ಷಣದಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬಿಎಸ್​ವೈ ವಿರುದ್ಧ ವಾಗ್ದಾಳಿ: ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಊರುಗಳಿಗೆ ಕಳುಹಿಸಿಕೊಡಿ. ಅವರಿಗೆ ಕೂಲಿ ಇಲ್ಲ, ದುಡ್ಡು ಎಲ್ಲಿಂದ ತರಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ರಸ್ತೆಯಲ್ಲಿ ಭಿಕ್ಷೆ ಬೇಡಿ ನಾನು ಕೊಡುತ್ತೇನೆ. ಯಡಿಯೂರಪ್ಪ ಈ ಕೆಲಸ ಮಾಡಲಿಲ್ಲ ಅಂದ್ರೆ ಅವರು ಬದುಕಿದ್ದು ಸತ್ತಂಗೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆಶಿ, ಆನೇಕಲ್​ನಲ್ಲಿ ನಡೆದ ಅಕ್ಕಿ, ಸಕ್ಕರೆ ಮರು ಪ್ಯಾಕಿಂಗ್ ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಕರಣವನ್ನು ನ್ಯಾಯಧೀಶರಿಂದ ತನಿಖೆಗೆ ಒತ್ತಾಯಿಸಿದರು. ಆರೋಪಿಗಳನ್ನು ಬಂಧಿಸಲಿಲ್ಲ ಅಂದ್ರೆ ನಿಮಗೆ ಮುಹೂರ್ತ ಇಡಬೇಕಾಗುತ್ತೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ರೆ ಹೋರಾಟ: ಡಿಡಿ ಉಷಾ ಹಾಗೂ ಸಿಡಿಪಿಒ ಇಬ್ಬರೂ ಒಪ್ಪಿಕೊಂಡು ದೂರು ದಾಖಲಿಸಿದ್ದಾರೆ. ಮುಖ್ಯಮಂತ್ರಿಗಳೇ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮಾಡುತ್ತೇನೆ. ಇಡೀ ರಾಜ್ಯಾದ್ಯಂತ ಬೀದಿಗಿಳಿಯುವುದು ಅನಿವಾರ್ಯ ಸೃಷ್ಟಿಯಾಗಿದೆ. ಪ್ರತೀ ಜಿಲ್ಲೆಯಿಂದ ಸಚಿವರಿಗೆ ಅಕ್ಕಿ ಬರಬೇಕಂತೆ. ಅಕ್ಕಿಯನ್ನು ರೀ ಪ್ಯಾಕ್ ಮಾಡಿ ಹಂಚಿಕೆ ಮಾಡುವಂತೆ ಸೂಚನೆ ನೀಡಿದ್ದಾರೆ. ಅವರನ್ನು ಬಂಧಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದರು.

ಸಿಡಿಪಿಒ, ಶಾಸಕರು, ವಕ್ತಾರರು ಇಡೀ ತಂಡವನ್ನು ಕರೆದುಕೊಂಡು ಹೋಗಿ ಸಕ್ಕರೆ, ಬೇಳೆ, ಗರ್ಭಿಣಿಯರ ಆಹಾರ, ಅಂಗನವಾಡಿ ಕೇಂದ್ರಗಳಿಗೆ ನೀಡುವ ಆಹಾರವನ್ನು ಬಿಜೆಪಿ ಹೆಸರಿನಲ್ಲಿ ಮರು ಪ್ಯಾಕಿಂಗ್ ಮಾಡಿ ಹಂಚಿದ್ದಾರೆ. ಆದರೆ ಈವರೆಗೆ ಯಾವ ತಪ್ಪಿತಸ್ಥರನ್ನು ಬಂಧಿಸಿಯೂ ಇಲ್ಲ. ಪ್ರಕರಣವನ್ನು ಸಹ ದಾಖಲು ಮಾಡಿಲ್ಲ. ಯಾವುದಕ್ಕೆ ಎಷ್ಟು ಕೊಟ್ಟು ಖರೀದಿಸಿದ್ದಾರೆಂದು ಗೊತ್ತಿದೆ. ಸಚಿವರು ಎಷ್ಟು ಕಮೀಷನ್ ಪಡೆದಿದ್ದಾರೆಂಬ ಮಾಹಿತಿಯೂ ಇದೆ. ಕೆಲವೇ ಕ್ಷಣಗಳಲ್ಲಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದರು.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ