AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗರಲ್ಲಿ ಬಡವರಿಲ್ವಾ? ಲಿಂಗಾಯತರಲ್ಲಿ ಬಡವರಿಲ್ವಾ: ಜಾತಿ ಗಣತಿ ಚರ್ಚೆ ವೇಳೆ ಏರು ಧ್ವನಿಯಲ್ಲಿ ಪ್ರಶ್ನಿಸಿದ ಡಿಕೆ ಶಿವಕುಮಾರ್

ಜಾತಿ ವರ್ಗೀಕರಣಕ್ಕೆ ಡಿಕೆ ಶಿವಕುಮಾರ್ ಅಸಮಾಧಾನ: ಜಾತಿ ಗಣತಿ ವಿಚಾರವಾಗಿ ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ಒಕ್ಕಲಿಗ ಹಾಗೂ ಲಿಂಗಾಯತ ಸಚಿವರ ತೀವ್ರ ವಿರೋಧಕ್ಕೆ ಸಾಕ್ಷಿಯಾಯಿತು. ಇದೇ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಜಾತಿ ವರ್ಗೀಕರಣ ವಿಚಾರವಾಗಿ ಜೋರಾದ ದನಿಯಲ್ಲಿ ಮಾತನಾಡಿದರು.

ಒಕ್ಕಲಿಗರಲ್ಲಿ ಬಡವರಿಲ್ವಾ? ಲಿಂಗಾಯತರಲ್ಲಿ ಬಡವರಿಲ್ವಾ: ಜಾತಿ ಗಣತಿ ಚರ್ಚೆ ವೇಳೆ ಏರು ಧ್ವನಿಯಲ್ಲಿ ಪ್ರಶ್ನಿಸಿದ ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Apr 18, 2025 | 9:00 AM

Share

ಬೆಂಗಳೂರು, ಏಪ್ರಿಲ್ 18: ಕಳೆದೊಂದು ವಾರದಿಂದ ಕರ್ನಾಟಕದಾದ್ಯಂತ ದೊಡ್ಡ ಕೋಲಾಹಲ ಎಬ್ಬಿಸಿದ್ದ ಜಾತಿ ಗಣತಿ ವರದಿ (Caste Census Report) ವಿಚಾರವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)  ಸೇರಿದಂತೆ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳ (Vokkaligas and Lingayats) ಸಚಿವರು ಜೋರಾದ ದನಿಯಲ್ಲಿ ಮಾತನಾಡಿ ಆಕ್ಷೇಪ ವ್ಯಕ್ತಪಡಿಸಿದ್ದ ಕಂಡುಬಂತು. ಜಾತಿ ವರ್ಗೀಕರಣ ವಿಷಯ ಸಂಬಂಧ ಡಿಕೆ ಶಿವಕುಮಾರ್, ಜೋರಾದ ದನಿಯಲ್ಲೇ ಅಸಮಾಧಾನ ವ್ಯಕ್ತಪಡಿಸಿದರು. ನಮ್ಮಲ್ಲೂ ಬಡವರಿಲ್ಲವೇ ಎಂದು ಅವರು ಪ್ರಶ್ನಿಸಿದರು ಎಂದು ಮೂಲಗಳು ತಿಳಿಸಿವೆ.

ಕೆಲವು ನಿಗದಿತ ಜಾತಿಗಳನ್ನು ಮಾತ್ರ ಕೆಟಗರಿ 1ಕ್ಕೆ ಸೇರ್ಪಡೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್, ಒಕ್ಕಲಿಗರಲ್ಲಿ ಬಡವರಿಲ್ವಾ? ಲಿಂಗಾಯತರಲ್ಲಿ ಬಡವರಿಲ್ವಾ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದರು. ಇದೇ ವೇಳೆ, ಡಿಕೆ ಶಿವಕುಮಾರ್ ಮಾತಿಗೆ ಲಿಂಗಾಯತ ಸಚಿವರು ದನಿಗೂಡಿಸಿದರು. ನಮ್ಮವರೂ ಕೇವಲ ಒಂದೇ ದನ ಕಟ್ಟಿಕೊಂಡು ಜೀವನ ನಡೆಸುವವರಿದ್ದಾರೆ, ಅವರೆಲ್ಲ ಶ್ರೀಮಂತರಲ್ಲ ಎಂದರು.

ಜಾತಿಗಣತಿ ವರದಿಗೆ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ತೀವ್ರ ಆಕ್ಷೇಪ

ಜಾತಿಗಣತಿ ವರದಿಗೆ ಕ್ಯಾಬಿನೆಟ್​ನಲ್ಲಿ ಲಿಂಗಾಯತ ಸಚಿವರೂ ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವರದಿಯೇ ಸರಿಯಿಲ್ಲ, ನಮ್ಮ ಸಮುದಾಯದ ಉಪ ಪಂಗಡಗಳನ್ನು ವಿಭಜಿಸಲಾಗಿದೆ. ಲಿಂಗಾಯತ, ಉಪ ಪಂಗಡ ವಿಂಗಡಿಸಿ ನಮೂದಿಸಿರುವುದು ತಪ್ಪು ಎಂದು ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದರು. ಈ ವರದಿಯನ್ನು ಒಪ್ಪುವುದು ಹೇಗೆ ಎಂದು ಅವರು ಪ್ರಶ್ನಿಸಿದರು. ಇದೇ ವೇಳೆ, ಮಲ್ಲಿಕಾರ್ಜುನ ಮಾತಿಗೆ ದನಿಗೂಡಿಸಿದ ಸಚಿವ ಈಶ್ವರ ಖಂಡ್ರೆ, ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಯನ ವರದಿ ಉಲ್ಲೇಖಿಸಿದರು. ಆ ವರದಿಯನ್ನು ಸಂಪುಟ ಸಭೆಯಲ್ಲಿ ಉಲ್ಲೇಖಿಸಿದರು.

ಇದನ್ನೂ ಓದಿ
Image
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಕೋಲಾಹಲ: ಇಲ್ಲಿದೆ ಇನ್​ಸೈಡ್ ಡಿಟೇಲ್ಸ್
Image
ಜಾತಿ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ: ಜಾತಿ ಗಣತಿಯಲ್ಲಿ ಒಳಪಂಗಡ ಗೊಂದಲ
Image
ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಲಾರಿ ಮಾಲೀಕರ ಮುಷ್ಕರ ವಾಪಸ್​
Image
ಮುಸ್ಲಿಮರಲ್ಲಿಯೂ 93 ಉಪಜಾತಿಗಳಿವೆ: ಜಯಪ್ರಕಾಶ್ ಹೆಗ್ಡೆ

ಲಿಂಗಾಯತ ಸಮುದಾಯದ ಕಡಿಮೆ ತೋರಿಸಿರುವ ಬಗ್ಗೆ ಖಂಡ್ರೆ ಆಕ್ಷೇಪ ವ್ಯಕ್ತಪಡಿಸಿದರು. ಶೇಕಡಾ 94ರಷ್ಟು ನಿಖರತೆ ಇದೆ ಎಂದು ಕೆಲ ಸಚಿವರು ಆಕ್ಷೇಪ ತೆಗೆದರು. ಕೊನೆಯದಾಗಿ, ಎಲ್ಲವನ್ನು ನೋಡಿ ತೀರ್ಮಾನಿಸೋಣ ಬಿಡಿ ಎಂದ ಸಿಎಂ ಸಿದ್ದರಾಮಯ್ಯ, ಮೇ 2 ರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವಿಚಾರ ಮತ್ತೆ ಚರ್ಚಿಸೋಣ ಎಂದರು.

ಪ್ರತ್ಯೇಕ ಧರ್ಮ ವಿಚಾರದಲ್ಲಿ ಕೈಸುಟ್ಟುಕೊಂಡಿದ್ದೆವು: ಶಿವಾನಂದ ಪಾಟೀಲ್

ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಬಗ್ಗೆಯೂ ಪ್ರಸ್ತಾಪವಾಯಿತು. 2018ರಲ್ಲಿ ಪ್ರತ್ಯೇಕ ಧರ್ಮ‌ ವಿಚಾರ ಪ್ರಸ್ತಾಪಿಸಿ ಕೈಸುಟ್ಟುಕೊಂಡಿದ್ದೆವು. ಲಿಂಗಾಯತ ವಿಚಾರಕ್ಕೆ ಕೈಹಾಕಿ ಕೈಸುಟ್ಟುಕೊಂಡಿದ್ದೆವು. ಈಗ ಮತ್ತೆ ಅದೇ ರೀತಿಯಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ. ಹೀಗಾಗಿ ಜಾತಿ ಗಣತಿ ತೀರ್ಮಾನಿಸುವ ಮೊದಲು ಯೋಚಿಸಿ ಎಂದು ಶಿವಾನಂದ ಪಾಟೀಲ್ ಹೇಳಿದರು. ಇದಕ್ಕೆ ಸಚಿವ ಎಂಬಿ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕೋಲಾಹಲ: ಸಚಿವರ ಏರು ಧ್ವನಿ, ಇಲ್ಲಿದೆ ಇನ್​ಸೈಡ್ ಡಿಟೇಲ್ಸ್

ಆ ವಿಷಯಕ್ಕೂ ಇದಕ್ಕೂ ಏನು ಸಂಬಂಧವೆಂದು ಎಂಬಿ ಪಾಟೀಲ್ ಪ್ರಶ್ನಿಸಿದರು. ಲಿಂಗಾಯತ ಧರ್ಮ ವಿಚಾರ ಬೇರೆ, ಜಾತಿಗಣತಿಯೇ ಬೇರೆ. ಒಂದಕ್ಕೊಂದು ಸಂಬಂಧ ಇಲ್ಲದೆ ಇರುವುದನ್ನು ಮಾತಾಡಬಾರದು ಎಂದು ಅವರು ಆಕ್ಷೇಪಿಸಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ಆ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು