AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಜಯಂತಿಗೆ ಕುಮಾರಸ್ವಾಮಿ, ದೇವೇಗೌಡ ಆಹ್ವಾನಿಸದ ವಿಚಾರ: ಡಿಕೆ ಶಿವಕುಮಾರ್​​ ಹೇಳಿದ್ದಿಷ್ಟು

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರನ್ನು ಆಹ್ವಾನಿಸಿಲ್ಲ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಪ್ರತಿಕ್ರಿಯಿಸಿದ್ದಾರೆ.

ಕೆಂಪೇಗೌಡ ಜಯಂತಿಗೆ ಕುಮಾರಸ್ವಾಮಿ, ದೇವೇಗೌಡ ಆಹ್ವಾನಿಸದ ವಿಚಾರ: ಡಿಕೆ ಶಿವಕುಮಾರ್​​ ಹೇಳಿದ್ದಿಷ್ಟು
ಡಿಸಿಎಂ ಡಿಕೆ ಶಿವಕುಮಾರ್​
Anil Kalkere
| Edited By: ವಿವೇಕ ಬಿರಾದಾರ|

Updated on: Jun 27, 2024 | 2:57 PM

Share

ಬೆಂಗಳೂರು, ಜೂನ್​​ 27: ಕರ್ನಾಟಕ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರನ್ನು ಆಹ್ವಾನಿಸದೆ ಇದ್ದಿದ್ದು, ಒಕ್ಕಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಮಾತನಾಡಿ, ಶಿಷ್ಟಾಚಾರ ಪ್ರಕಾರ ಕರೆಯಬೇಕಿತ್ತು, ಆದರೆ, ಕರೆಯದಿದ್ದದ್ದು ತಪ್ಪಾಗಿದೆ. ಮುಂದೆ ಈ ರೀತಿ ಆಗಲ್ಲ ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್​, ಕೆಂಪೇಗೌಡ ಜಯಂತಿಯನ್ನ ಪ್ರಾರಂಭ ಮಾಡಲು ಮತ್ತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಿದ್ದರಾಮಯ್ಯನವರು ಕಾರಣ ಎಂದು ಹೇಳಿದರು.

ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಇದ್ದ ಕಾರಣ ಬೇಗ ಕಾರ್ಯಕ್ರಮ ಮಾಡಲು, ಶ್ರಮ ವಹಿಸಲು ಆಗಲಿಲ್ಲ, ಕ್ಷಮಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಂಪೇಡಗೌಡ ಜಯಂತಿಗೆ ಒತ್ತು ನೀಡಿದ್ದಾರೆ. ಮಾಗಡಿಯ ಸುಮ್ಮನಹಳ್ಳಿ‌ ಬಳಿಕ ಐದು ಎಕರೆ ಜಮೀನನ್ನು ಪ್ರಾಧಿಕಾರಕ್ಕೆ ನೀಡಿದ್ದಾರೆ. ಮುಂದಿನ ವರ್ಷ ಅಲ್ಲಿ ಕಟ್ಟಡ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆಂಪೇಗೌಡರ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ, ಎಚ್​ಡಿಕೆಗೆ ಕೋಕ್: ಸರ್ಕಾರದ ವಿರುದ್ಧಒಕ್ಕಲಿಗರ ಸಂಘ ಕಿಡಿ

ಕೆಂಪೇಗೌಡ ಅವರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು. ಅವರು ಒಕ್ಕಲಿಗ ಸಮುದಾಯಕ್ಕೆ‌ ಸೇರಿದರೂ, ಎಲ್ಲ ಜಾತಿ ವರ್ಗಕ್ಕೆ‌ ಸೀಮಿತರಾದವರು. ಈ ವರ್ಷದಿಂದ ರಾಜ್ಯದ ಉದ್ದಗಲಕ್ಕೂ ಶಿಕ್ಷಣ ಇಲಾಖೆ ವತಿಯಿಂದ ಕೆಂಪೇಗೌಡ ಬಗ್ಗೆ ಚರ್ಚಾ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತದೆ. ಪ್ರತಿ ತಾಲೂಕಿಗೂ ‌1 ಲಕ್ಷ ರೂ. ಹಣ ಬಿಬಿಎಂಪಿ ವತಿಯಿಂದ ನೀಡಲಾಗಿದೆ. ಸರ್ಕಾರದಿಂದ ನಾವು ನೀಡುವ ಹಣ ಸಾಕಾಗುತ್ತಿಲ್ಲ. ಹೀಗಾಗಿ, ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಬಿಬಿಎಂಪಿ ಪ್ರತಿ ತಾಲೂಕಿಗೆ 1 ಲಕ್ಷ ಹಣ ನೀಡುತ್ತೇವೆ ಎಂದರು.

ಬೆಂಗಳೂರಿಗೆ ಹೊಸ ರೂಪ ಕೊಡಲು ಬ್ರ್ಯಾಂಡ್​ ಬೆಂಗಳೂರು ರೂಪಿಸಿದ್ದೇವೆ. ಪೆರಿಫೆರಲ್ ರಿಂಗ್ ರೋಡ್​ಗೆ ಹೊಸ ರೂಪ ಕೊಡಲಿದ್ದೇವೆ. 150 ಕಿ.ಮೀ ರಸ್ತೆಗಳನ್ನು ಸಿಗ್ನಲ್ ಫ್ರೀ ಮಾಡಬೇಕು. ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ ಕೊಡಬೇಕು ಅಂತಾ ಯೋಚನೆ ಮಾಡಿದ್ದೇವೆ. ಕೆಂಪೇಗೌಡರ ಆದರ್ಶ ಇಟ್ಟುಕೊಂಡು ಕೆಲಸಗಳನ್ನ ಮಾಡುತ್ತಿದ್ದೇವೆ. ಇಡೀ ವಿಶ್ವ ಕೆಂಪೇಗೌಡರ ನಾಡನ್ನು ಗಮನಿಸುತ್ತಿದೆ ಎಂದು ನುಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್