AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’

ಬೆಂಗಳೂರು: CBI ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸುದ್ದಿಗೋಷ್ಠಿ ನಡೆಸಿದರು. ಸದಾಶಿವನಗರದ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಮಾತನಾಡಿದರು. 2017ರಲ್ಲೂ ಇದೇ ಮನೆ ಮೇಲೆ ಐಟಿ ದಾಳಿ ನಡೆದಿತ್ತು. 2017ರಲ್ಲಿ ಗುಜರಾತ್ ಚುನಾವಣೆ ವೇಳೆ ಪ್ರಕರಣ ನಡೆದಿತ್ತು. 2019ರಲ್ಲಿ ಇಡಿ ಕೇಸ್​ ಹಾಕಿ ಜೈಲಿಗೆ ಹಾಕಿದರು. 48 ದಿನ ತಿಹಾರ್ ಜೈಲಿಗೆ ಹಾಕಿದ್ದರು. ಆ ವೇಳೆಯೂ ಸಹ ಸೋನಿಯಾಗಾಂಧಿ ಸೇರಿದಂತೆ, ಎಲ್ಲ ಪಕ್ಷಗಳ ಮುಖಂಡರು ನನ್ನನ್ನು ಬೆಂಬಲಿಸಿದರು. ಡಿಕೆಶಿಗೆ ಅನ್ಯಾಯ ಆಗಿದೆ ಎಂದು ಪ್ರತಿಭಟನೆ ಮಾಡಿದರು. […]

‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’
KUSHAL V
|

Updated on:Oct 05, 2020 | 7:24 PM

Share

ಬೆಂಗಳೂರು: CBI ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸುದ್ದಿಗೋಷ್ಠಿ ನಡೆಸಿದರು. ಸದಾಶಿವನಗರದ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಮಾತನಾಡಿದರು.

2017ರಲ್ಲೂ ಇದೇ ಮನೆ ಮೇಲೆ ಐಟಿ ದಾಳಿ ನಡೆದಿತ್ತು. 2017ರಲ್ಲಿ ಗುಜರಾತ್ ಚುನಾವಣೆ ವೇಳೆ ಪ್ರಕರಣ ನಡೆದಿತ್ತು. 2019ರಲ್ಲಿ ಇಡಿ ಕೇಸ್​ ಹಾಕಿ ಜೈಲಿಗೆ ಹಾಕಿದರು. 48 ದಿನ ತಿಹಾರ್ ಜೈಲಿಗೆ ಹಾಕಿದ್ದರು. ಆ ವೇಳೆಯೂ ಸಹ ಸೋನಿಯಾಗಾಂಧಿ ಸೇರಿದಂತೆ, ಎಲ್ಲ ಪಕ್ಷಗಳ ಮುಖಂಡರು ನನ್ನನ್ನು ಬೆಂಬಲಿಸಿದರು. ಡಿಕೆಶಿಗೆ ಅನ್ಯಾಯ ಆಗಿದೆ ಎಂದು ಪ್ರತಿಭಟನೆ ಮಾಡಿದರು. ಆದರೆ, ಕಮಿಷನರ್​ ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ್ರು ಎಂದು ಹೇಳಿದರು.

ನಮ್ಮ ಜನ ತೋರಿಸಿದ ಪ್ರೀತಿ ಇದು. ಎಷ್ಟೋ ಮಠಮಾನ್ಯರು, ಧರ್ಮದ ಹಿರಿಯರು ಶಕ್ತಿ ಕೊಟ್ಟರು. ಇದೆಲ್ಲವನ್ನೂ ನಾನು ಮರೆಯಲು ಸಾಧ್ಯವೇ ಇಲ್ಲ. ತಿಹಾರ್ ಜೈಲಿನಿಂದ ಹೊರ ಬಂದ ಬಳಿಕವೂ ರಾಷ್ಟ್ರ, ರಾಜ್ಯದ ಮುಖಂಡರು, ಕಾರ್ಯಕರ್ತರ ಬೆಂಬಲ ಸಿಕ್ಕಿತು. ಜೈಲಿಂದ ಬಂದ ಬಳಿಕ ಮೆರವಣಿಗೆ ಬೇಕಾ ಎಂದು ಪ್ರಶ್ನಿಸಿದರು. ಅದೇ ಪರಪ್ಪನ ಅಗ್ರಹಾರದಿಂದ ಬಂದವರು ಹೇಗೆ ಬಂದರು ನೋಡಿ ಎಂದುರ. ಆದರೆ, ನಾನು ವಿಕ್ಟರಿ ಸಿಂಬಲ್ ತೋರಿಸಿಕೊಂಡು ಬರಲಿಲ್ಲ. ಜನರಿಗೆ ಕೈ ಮುಗಿದುಕೊಂಡು ನಾನು ಬಂದಿದ್ದೆ ಎಂದು ಶಿವಕುಮಾರ್​ ಹೇಳಿದ್ದಾರೆ.

ಅದಾದ ಬಳಿಕ ಕೆಪಿಸಿಸಿ ಅಧ್ಯಕ್ಷನಾಗಿ ಮಾಡಿದರು. ನಮ್ಮ ಜನ ಕೊರೊನಾದಿಂದ ಬಳಲುತ್ತಿದ್ದಾರೆ. ಏಕಾಏಕಿ ಲಾಕ್​ಡೌನ್​ ಮಾಡಿದಾಗ ಒಪ್ಪಿಕೊಂಡೆವು. ಆಗಲೂ ನಾವು ಎಲ್ಲ ರೀತಿಯ ಸಹಕಾರ ಕೊಟ್ಟೆವು. ರೈತರು, ಕೃಷಿಕರು, ಬೀದಿ ಬದಿ ವ್ಯಾಪಾರಿಗಳು. ಸೇರಿದಂತೆ ಬಹುತೇಕರು ಹಸಿವಿನಿಂದ ಬಳಲುತ್ತಿದ್ದರು.20 ಲಕ್ಷ ಕೋಟಿ ಪ್ಯಾಕೇಜ್​ ಎಂದು ಘೋಷಿಸಿದರು. ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ಹಣ ಎಲ್ಲಿ ಹೋಯ್ತು. ರಾಜ್ಯ ಸರ್ಕಾರದ 1,700 ಕೋಟಿ ಹಣ ಜನರಿಗೆ ತಲುಪಿಲ್ಲ. ಸರ್ಕಾರದ ಹಣ ಬಳಸಿಕೊಂಡು ಬಿಜೆಪಿ ಪಕ್ಷ ಕಟ್ಟುತ್ತಿದೆ ಅಂತಾ ಹೇಳಿದರು.

‘ನಾನು ಕದ್ದು ಓಡಿ ಹೋಗುವುದಿಲ್ಲ’ ಸಿಬಿಐನವರು ಯಾವಾಗ ಕರೆದರೂ ವಿಚಾರಣೆಗೆ ಹಾಜರು. ತನಿಖೆ ಮಾಡಲಿ, ಕೇಳಲಿ. ಉತ್ತರ ನೀಡಲು ಸಮರ್ಥನಿದ್ದೇನೆ. ನಾನು ಕದ್ದು ಓಡಿ ಹೋಗುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದರು. ಸಿಬಿಐ ತನಿಖೆಗೆ ಅನುಮತಿ ಕೊಟ್ಟಿರುವುದು ರಾಜ್ಯದ ಸಿಎಂ. ಎಜಿ ಹೇಳಿದರೂ ಕೇಳದ ಸಿಎಂ ಅನುಮತಿ ಕೊಟ್ಟಿದ್ದಾರೆ. ನನ್ನ ಮೇಲಿನ ಸಿಬಿಐ ದಾಳಿ ರಾಜಕೀಯಪ್ರೇರಿತವಾಗಿದೆ. ಉತ್ತರ ಪ್ರದೇಶದ ಘಟನೆ ಬಗ್ಗೆ ಇವರು ತುಟಿ ಬಿಚ್ಚಲ್ಲ. ಚುನಾವಣೆ ವೇಳೆ ಗಮನ ಬೇರೆಡೆ ಸೆಳೆಯಲು ದಾಳಿ ನಡೆಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದರು. ಕುತಂತ್ರಕ್ಕೆ ಹೆದರುವ ಮಗ ನಾನಲ್ಲ -ದಾಳಿ ಬಳಿಕ DK ಶಿವಕುಮಾರ್ ಘರ್ಜನೆ ಡಿ.ಕೆ ಶಿವಕುಮಾರ್​, ಕುಟುಂಬಸ್ಥರ ವಿರುದ್ಧ 74.93 ಕೋಟಿ ಅಕ್ರಮ ಆಸ್ತಿ ಗಳಿಕೆ ಕೇಸ್: CBI

Published On - 7:11 pm, Mon, 5 October 20

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ