AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯ ಸಮಾಧಿ ಆಗ್ತೀರೆಂದು.. ಈಗ ನೋಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ: ಡಿಕೆಶಿ

ಬಿಜೆಪಿ ಸಚಿವರ ಅಸಮಾಧಾನದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೂತನ ಸಚಿವರ ಕಾಲೆಳೆದಿದ್ದಾರೆ. ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿರುವ ವಿಚಾರವಾಗಿ ಮಾತನಾಡುತ್ತ.. ನಾನು ವಿಧಾನಸಭೆಯಲ್ಲಿ ಈ ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯವಾಗಿ ಸಮಾಧಿ ಆಗ್ತೀರೆಂದು ಎಂದಿದ್ದಾರೆ.

ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯ ಸಮಾಧಿ ಆಗ್ತೀರೆಂದು.. ಈಗ ನೋಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಆಯೇಷಾ ಬಾನು
|

Updated on:Jan 22, 2021 | 2:33 PM

Share

ಬೆಂಗಳೂರು: ನೂತನ ಸಪ್ತ ಸಚಿವರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದ 10 ಸಚಿವರು ಸೇರಿ ಒಟ್ಟು 17 ಸಚಿವರ ಖಾತೆ ಹಂಚಿಕೆ ಮತ್ತು ಬದಲಾವಣೆ ಮಾಡಲಾಗಿದೆ. ಆದರೆ ಕೆಲ ಸಚಿವರು ತಮಗೆ ಸಿಕ್ಕ ಖಾತೆಗಳಿಂದ ಅಸಮಾಧಾನರಾಗಿದ್ದಾರೆ. ಸಚಿವರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೀಗಾಗಿ ಮೂವರ ಖಾತೆ ಬದಲಾವಣೆಗೆ ಸಿಎಂ ಚಿಂತಿಸುತ್ತಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಬಿಜೆಪಿ ಸಚಿವರ ಅಸಮಾಧಾನದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೂತನ ಸಚಿವರ ಕಾಲೆಳೆದಿದ್ದಾರೆ. ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿರುವ ವಿಚಾರವಾಗಿ ಮಾತನಾಡುತ್ತ.. ನಾನು ವಿಧಾನಸಭೆಯಲ್ಲಿ ಈ ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯವಾಗಿ ಸಮಾಧಿ ಆಗ್ತೀರೆಂದು. ಈಗ ನೋಡಿ ಯಾವ್ಯಾವ ಖಾತೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಐಸಿಯು, ವೆಂಟಿಲೇಟರ್​ನಲ್ಲಿ ನಡೆಯುತ್ತಿದೆ ಎಂದು ಡಿಕೆಶಿ ವ್ಯಂಗ್ಯವಾಡಿದ್ದಾರೆ.

ಗೋಪಾಲಯ್ಯ, ಎಂಟಿಬಿ ನಾಗರಾಜ್, ನಾರಾಯಣಗೌಡ, ರೋಷನ್ ಬೇಗ್ ಅವರ ಕಥೆ ಈಗ ಏನಾಗಿದೆ ನೋಡಿ. ಎಂಟಿಬಿ ನಾಗರಾಜ್​ಗೆ ಈ ಮೊದಲು ವಸತಿ ಖಾತೆ ಇತ್ತು. ಪಾಪ ಈಗ ಅಬಕಾರಿ ಖಾತೆ ಕೊಟ್ಟಿದ್ದಾರೆ. ವಲಸಿಗರನ್ನೆಲ್ಲ ಯೂಸ್  ಅಂಡ್ ಥ್ರೋ ಮಾಡಿದ್ದಾರೆ. ವಲಸಿಗರನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಭುಗಿಲೆದ್ದ ಅಸಮಾಧಾನ.. ಇಂದು ಮತ್ತೆ ಬದಲಾಗಲಿವೆ ಕೆಲವು ಸಚಿವರ ಖಾತೆಗಳು?

Published On - 1:43 pm, Fri, 22 January 21

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ