AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ ನಡೆದ CBI ಅಧಿಕಾರಿಗಳ ದಾಳಿ ಬಳಿಕ ಇಂದು ನಂಜಾವಧೂತ ಶ್ರೀಗಳು ಶಿವಕುಮಾರ್​ರ ಸದಾಶಿವನಗರದ ನಿವಾಸಕ್ಕೆ ಭೇಟಿಕೊಟ್ಟರು. ಸ್ವಾಮೀಜಿಯವರನ್ನು ಬರಮಾಡಿಕೊಂಡ ಡಿ.ಕೆ ಶಿವಕುಮಾರ್​ ಶ್ರೀಗಳ ಜೊತೆ ಬಹಳ ಹೊತ್ತು ಮಾತುಕತೆ ನಡೆಸಿದರು. ಇದೇ ವೇಳೆ ಡಿಕೆಶಿಗೆ ನಂಜಾವಧೂತ ಸ್ವಾಮೀಜಿ ಧೈರ್ಯ ತುಂಬಿದರು ಎಂದು ತಿಳಿದುಬಂದಿದೆ. ಶಿವಕುಮಾರ್ ಜೊತೆ ಮಾತನಾಡಿದ ಶ್ರೀಗಳ ಕಳೆದ ವರ್ಷವೂ ನಿಮ್ಮ ವಿರುದ್ಧ ದಾಳಿ ಆಗಿದೆ. ED, IT ನೋಡಿದ್ದೀರಿ. ಒಳ್ಳೆಯದು ಆಗಬೇಕು ಅಂದ್ರೆ […]

ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ
KUSHAL V
|

Updated on:Oct 06, 2020 | 1:54 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ ನಡೆದ CBI ಅಧಿಕಾರಿಗಳ ದಾಳಿ ಬಳಿಕ ಇಂದು ನಂಜಾವಧೂತ ಶ್ರೀಗಳು ಶಿವಕುಮಾರ್​ರ ಸದಾಶಿವನಗರದ ನಿವಾಸಕ್ಕೆ ಭೇಟಿಕೊಟ್ಟರು.

ಸ್ವಾಮೀಜಿಯವರನ್ನು ಬರಮಾಡಿಕೊಂಡ ಡಿ.ಕೆ ಶಿವಕುಮಾರ್​ ಶ್ರೀಗಳ ಜೊತೆ ಬಹಳ ಹೊತ್ತು ಮಾತುಕತೆ ನಡೆಸಿದರು. ಇದೇ ವೇಳೆ ಡಿಕೆಶಿಗೆ ನಂಜಾವಧೂತ ಸ್ವಾಮೀಜಿ ಧೈರ್ಯ ತುಂಬಿದರು ಎಂದು ತಿಳಿದುಬಂದಿದೆ. ಶಿವಕುಮಾರ್ ಜೊತೆ ಮಾತನಾಡಿದ ಶ್ರೀಗಳ ಕಳೆದ ವರ್ಷವೂ ನಿಮ್ಮ ವಿರುದ್ಧ ದಾಳಿ ಆಗಿದೆ. ED, IT ನೋಡಿದ್ದೀರಿ. ಒಳ್ಳೆಯದು ಆಗಬೇಕು ಅಂದ್ರೆ ಕಷ್ಟ ದಾಟಿಕೊಂಡು ಹೋಗಬೇಕು. ಸ್ವಲ್ಪ ದಿನ ಕಷ್ಟ ಸಹಜ ಅಂತಾ ಸ್ವಾಮೀಜಿ ಡಿಕೆಶಿಗೆ ಧೈರ್ಯ ತುಂಬಿದರಂತೆ.

ಆಗ, ಶಿವಕುಮಾರ್​ ನಾನು ಕೆಪಿಸಿಸಿ ಅಧ್ಯಕ್ಷನಾದ ಬಳಿಕ ಆಕ್ಟೀವ್ ಆಗಿದ್ದೇ ತಪ್ಪಾಯಿತು. ಬಿಜೆಪಿ ಬೈ ಎಲೆಕ್ಷನ್ ಅಂತಾ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ. ಎಲ್ಲವನ್ನೂ ನೋಡಿದ್ದೀನಿ. ಇದು ಅದರ ಒಂದು ಭಾಗ ಎಂದು ಶಿವಕುಮಾರ್​ ಹೇಳದರಂತೆ.

ನನ್ನ ಮೇಲೆ ರೇಡ್ ಬೇಸರವಿಲ್ಲ. ಎಲ್ಲದಕ್ಕೂ ನನ್ನ ಬಳಿ ದಾಖಲೆ ಇದೆ. ಆದರೆ, ಮಗಳ ಮದುವೆಗೆ ತಂದ ಚಿನ್ನವನ್ನು ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು ಎಂದು ಸ್ವಾಮೀಜಿ ಮುಂದೆ ಡಿ.ಕೆ ಶಿವಕುಮಾರ್​ ಅಲವತ್ತುಕೊಂಡರಂತೆ.

‘CBI ಅಧಿಕಾರಿಗಳು ಕಿರುಕುಳ ಕೊಟ್ಟರು’ ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು. ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆಂದು ಡಿಕೆ ಶಿವಕುಮಾರ್​ ನಂಜಾವಧೂತ ಶ್ರೀಗಳ ಜೊತೆ ಚರ್ಚೆ ವೇಳೆ ಮಾಹಿತಿ ನೀಡಿದರು. CBI ರೇಡ್​ ಬಳಿಕ.. ಸಂಸದ DK ಸುರೇಶ್​ಗೆ ಕೊರೊನಾ ಪಾಸಿಟಿವ್

Published On - 10:49 am, Tue, 6 October 20

ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ