AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆಲುವು, ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿಕೆಶಿ

ನಿಯಮಾವಳಿ ಉಲ್ಲಂಘಿಸಿದರೆ ದೂರು ದಾಖಲಿಸಬಹುದು. ಹಾಗಾಗಿ ಯಾವುದೇ ಸಂಭ್ರಮಾಚರಣೆ ಮಾಡ ಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜ‌ನ ಬದಲಾವಣೆ ಬಯಸಿದ್ದಾರೆ. ಏನೇ ಫಲಿತಾಂಶ ಆಗಲಿ ರಾಜ್ಯಕ್ಕೆ ಒಳ್ಳೆ ವಾತಾವರಣ ಬಯಸ್ತಿದ್ದಾರೆ. ಮತದಾರರು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆಲುವು, ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಆಯೇಷಾ ಬಾನು
|

Updated on:May 02, 2021 | 1:58 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆದ್ದಿದ್ದೇವೆ. ಕಾಂಗ್ರೆಸ್ನ ಬಸನಗೌಡ ತುರವಿಹಾಳ ಗೆಲುವು ಸಾಧಿಸಿದ್ದಾರೆ. ಆದ್ರೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡದಂತೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಕೊವಿಡ್ ನಿಯಮಾವಳಿ ಉಲ್ಲಂಘಿಸದಂತೆ ಡಿಕೆಶಿ ಕೇಳಿಕೊಂಡಿದ್ದಾರೆ.

ನಿಯಮಾವಳಿ ಉಲ್ಲಂಘಿಸಿದರೆ ದೂರು ದಾಖಲಿಸಬಹುದು. ಹಾಗಾಗಿ ಯಾವುದೇ ಸಂಭ್ರಮಾಚರಣೆ ಮಾಡ ಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜ‌ನ ಬದಲಾವಣೆ ಬಯಸಿದ್ದಾರೆ. ಏನೇ ಫಲಿತಾಂಶ ಆಗಲಿ ರಾಜ್ಯಕ್ಕೆ ಒಳ್ಳೆ ವಾತಾವರಣ ಬಯಸ್ತಿದ್ದಾರೆ. ಮತದಾರರು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋತಿದೆ ಅಂತನೂ ಸಂಭ್ರಮಾಚರಣೆ ಮಾಡಬೇಡಿ. ಕೆಪಿಸಿಸಿ ಕಚೇರಿಗೂ ಯಾರು ಬರಬಾರದು. ಡಿಎಂಕೆ ಗೆದ್ದಿದೆ ಅಂತನೂ ಯಾರೂ ಸಂಭ್ರಮಿಸಬಾರದು. ರಾಜ್ಯದಲ್ಲೂ ಚುನಾವಣೆ ಮುಂದೂಡಿ ಅಂತ ನಾವು ಸಾಕಷ್ಟು ಬಾರಿ ಕೇಳಿಕೊಂಡ್ವಿ. ಆದ್ರೂ ಮಾತು ಕೇಳಲಿಲ್ಲ. ಈಗ ಅನುಭವಿಸ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳಗೆ ಡಿ.ಕೆ.ಶಿವಕುಮಾರ್ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೂ ಕರೆ ಮಾಡಿ ಬೆಳಗಾವಿ ಕ್ಷೇತ್ರದ ಮಾಹಿತಿ ಪಡೆದಿದ್ದಾರೆ.

ಮಸ್ಕಿ ಉಪಚುನಾವಣೆಯ 9 ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಹೊತ್ತಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 29, 325 ಮತಗಳಿಂದ ಮುಂದಿದ್ದಾರೆ. ಹಾಗೇ ಬಿಜೆಪಿಯ ಪ್ರತಾಪ್ಗೌಡ ಪಾಟೀಲ್ 19014 ಮತ ಪಡೆದಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಸುಮಾರು 10,311 ಮತಗಳಿಂದ ಮುಂಚೂಣಿಯಲ್ಲಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಈಗಲೇ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಇದನ್ನೂ ಓದಿ: Maski By Election Results 2021: ಮಸ್ಕಿಯಲ್ಲಿ ಕ್ಲಿಕ್​ ಆಗದ ಸಿಎಂ ಪುತ್ರನ ತಂತ್ರ !; ಈಗಲೇ ಸೊಲೊಪ್ಪಿಕೊಂಡು ನಡೆದ ಪ್ರತಾಪ ಗೌಡ ಪಾಟೀಲ್​

Published On - 1:57 pm, Sun, 2 May 21

ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಸನ್ಮಾನಿಸಿದ ಪ್ರಧಾನಿ ಮೋದಿ
ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಸನ್ಮಾನಿಸಿದ ಪ್ರಧಾನಿ ಮೋದಿ
ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಟೋದಲ್ಲಿ 120 ಮೀಟರ್ ಎಳೆದೊಯ್ದ ಚಾಲಕ
ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಟೋದಲ್ಲಿ 120 ಮೀಟರ್ ಎಳೆದೊಯ್ದ ಚಾಲಕ
Carlos Alcaraz: ಹೊಸ ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
Carlos Alcaraz: ಹೊಸ ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಇನ್ಮುಂದೆ ಕಾಲುಂಗರ ಹಾಕಿಕೊಳ್ಳಲಿದ್ದಾರೆ ರಜತ್; ಕಾರಣ ಏನು?
ಇನ್ಮುಂದೆ ಕಾಲುಂಗರ ಹಾಕಿಕೊಳ್ಳಲಿದ್ದಾರೆ ರಜತ್; ಕಾರಣ ಏನು?
ಶಾಲಾ ನಾಟಕ, ಬುರ್ಖಾ ಧರಿಸಿದವರನ್ನು ಉಗ್ರರೆಂದು ಬಿಂಬಿಸಿದ ಮಕ್ಕಳು
ಶಾಲಾ ನಾಟಕ, ಬುರ್ಖಾ ಧರಿಸಿದವರನ್ನು ಉಗ್ರರೆಂದು ಬಿಂಬಿಸಿದ ಮಕ್ಕಳು
ರಾಯಚೂರಿನಲ್ಲಿ ಮಳೆ ಅಬ್ಬರ: ಜಿಲ್ಲಾಧಿಕಾರಿ ಕಚೇರಿ ರಸ್ತೆ ಸಂಪೂರ್ಣ ಜಲಾವೃತ
ರಾಯಚೂರಿನಲ್ಲಿ ಮಳೆ ಅಬ್ಬರ: ಜಿಲ್ಲಾಧಿಕಾರಿ ಕಚೇರಿ ರಸ್ತೆ ಸಂಪೂರ್ಣ ಜಲಾವೃತ
ಶೂ ಧರಿಸಿ ಹವನದಲ್ಲಿ ಪಾಲ್ಗೊಂಡು ಜನರ ಕೆಂಗಣ್ಣಿಗೆ ಗುರಿಯಾದ ಲಾಲು ಪ್ರಸಾದ್
ಶೂ ಧರಿಸಿ ಹವನದಲ್ಲಿ ಪಾಲ್ಗೊಂಡು ಜನರ ಕೆಂಗಣ್ಣಿಗೆ ಗುರಿಯಾದ ಲಾಲು ಪ್ರಸಾದ್
ತುಂಗಭದ್ರಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ​ ನೀರು ಬಿಡುಗಡೆ
ತುಂಗಭದ್ರಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ​ ನೀರು ಬಿಡುಗಡೆ
ಝೆಲೆನ್ಸ್ಕಿ ಬಟ್ಟೆ ನೋಡಿ ಹೀಯಾಳಿಸಿದ್ದ ಪತ್ರಕರ್ತನಿಂದ ಇಂದು ಹೊಗಳಿಕೆಯ ಮಾತು
ಝೆಲೆನ್ಸ್ಕಿ ಬಟ್ಟೆ ನೋಡಿ ಹೀಯಾಳಿಸಿದ್ದ ಪತ್ರಕರ್ತನಿಂದ ಇಂದು ಹೊಗಳಿಕೆಯ ಮಾತು
Daily devotional: ನಿಂತು ಊಟ ಮಾಡಬಾರದು ಯಾಕೆ ಅಂತ ತಿಳಿದುಕೊಳ್ಳಿ!
Daily devotional: ನಿಂತು ಊಟ ಮಾಡಬಾರದು ಯಾಕೆ ಅಂತ ತಿಳಿದುಕೊಳ್ಳಿ!