AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್​ನತ್ತ 14 ಕಾಂಗ್ರೆಸ್ ಶಾಸಕರು!

ಒಂದೆಡೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮತ್ತೆ ಮುನ್ನೆಲೆಗೆ ಬರುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಬಂಬಲಿಗರು ರಹಸ್ಯ ಸಭೆಗಳನ್ನು ನಡೆಸಿ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇವುಗಳ ಮಧ್ಯದಲ್ಲೇ ಕಾಂಗ್ರೆಸ್ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿಕೆ ಶಿವಕುಮಾರ್ 14 ಮಂದಿ ಕಾಂಗ್ರೆಸ್ ಶಾಸಕರನ್ನು ಬಿಡದಿಯ ವಂಡರ್ ಲಾ ರೆಸಾರ್ಟ್​​ಗೆ ಕಳುಹಿಸಿದ್ದಾರೆ! ಯಾಕೆ ಗೊತ್ತೇ? ತಿಳಿಯಲು ಓದಿ.

ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್​ನತ್ತ 14 ಕಾಂಗ್ರೆಸ್ ಶಾಸಕರು!
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶಾಸಕರುImage Credit source: tv9
ಗಣಪತಿ ಶರ್ಮಾ
|

Updated on:Mar 13, 2026 | 7:20 AM

Share

ಬೆಂಗಳೂರು, ಮಾರ್ಚ್ 13: ಒಡಿಶಾದಲ್ಲಿ (Odisha) ನಡೆಯಲಿರುವ ರಾಜ್ಯಸಭಾ ಚುನಾವಣೆಯ (Rajyasabha Election) ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ (Congress) ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಬಂದ ಶಾಸಕರನ್ನು ಡಿಕೆ ಶಿವಕುಮಾರ್ ಆಪ್ತರು ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಪೊಲೀಸ್ ಬಂದೋಬಸ್ತ್ ಮತ್ತು ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಶಾಸಕರನ್ನು ನೇರವಾಗಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ವಿಶೇಷ ವಸತಿ ವ್ಯವಸ್ಥೆ ಮಾಡಲಾಗಿದೆ.

ಈ ತಂಡದಲ್ಲಿ ಶಾಸಕರಾದ ಮಂಗು ಖಿಲಾ, ಅಪ್ಪಲ ಸ್ವಾಮಿ, ರಾಜನ್ ಎಕ್ಕಾ, ಅಶೋಕ್ ಕುಮಾರ್ ಸೇರಿದಂತೆ ಹಲವು ನಾಯಕರು ಇದ್ದಾರೆ. ಜೊತೆಗೆ ಮಾಜಿ ಸಂಸದ ಭಕ್ತ ಚರಣ್ ದಾಸ್ ಹಾಗೂ ಕಾಂಗ್ರೆಸ್ ವಕ್ತಾರ ದುರ್ಗಾ ಪ್ರಸಾದ್ ಪಾಂಡಾ ಸೇರಿ ಒಟ್ಟು ಸುಮಾರು 14 ಮಂದಿ ಬೆಂಗಳೂರಿಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಸಭೆ ಚುನಾವಣೆ: ಅಖಾಡಕ್ಕಿಳಿದ ಟ್ರಬಲ್ ಶೂಟರ್ ಡಿಕೆಶಿ

ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬಿಜೆಪಿಯ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯಲು ಈ ತಂತ್ರ ರೂಪಿಸಲಾಗಿದೆ.

ಒಡಿಶಾ ವಿಧಾನಸಭೆ ಬಲಾಬಲ ಹೀಗಿದೆ

147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಿಜೆಡಿ 50 ಸ್ಥಾನಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಬಳಿ 14 ಶಾಸಕರು ಇದ್ದಾರೆ. ಬಿಜೆಡಿ ಅಧಿಕೃತ ಅಭ್ಯರ್ಥಿಯಾಗಿ ಡಾ. ಸ್ಯಾಂಟ್ರಪ್ಟ್ ಮಿಶ್ರಾ ಅವರನ್ನು ನಾಮನಿರ್ದೇಶನ ಮಾಡಿದೆ ಮತ್ತು ನಾಲ್ಕನೇ ರಾಜ್ಯಸಭಾ ಸ್ಥಾನಕ್ಕೆ ಡಾ. ದತ್ತೇಶ್ವರ್ ಹೋಟಾ ಅವರನ್ನು ಸಾಮಾನ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ, ಕಾಂಗ್ರೆಸ್ ಅವರ ಉಮೇದುವಾರಿಕೆಗೆ ಬೆಂಬಲ ನೀಡಿದೆ. ಮತ್ತೊಂದೆಡೆ, ಆಡಳಿತಾರೂಢ ಬಿಜೆಪಿ 79 ಶಾಸಕರ ಬೆಂಬಲ ಹೊಂದಿದ್ದು, ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜೊತೆಗೆ ಸ್ವತಂತ್ರ ಅಭ್ಯರ್ಥಿ ದಿಲೀಪ್ ರೇ ಅವರಿಗೆ ಸಹ ಬೆಂಬಲ ನೀಡಿದೆ.

ಅಡ್ಡ ಮತದಾನ ನಿರ್ಣಾಯಕವೇಕೆ?

ರಾಜ್ಯಸಭಾ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗೆಲ್ಲಲು ಕನಿಷ್ಠ 30 ಪ್ರಥಮ ಪ್ರಾಶಸ್ತ್ಯದ ಮತಗಳು ಅಗತ್ಯವಿದೆ. ಬಿಜೆಡಿ ತನ್ನ ಅಧಿಕೃತ ಅಭ್ಯರ್ಥಿ ಡಾ. ಸಂತ್ರಪ್ಟ್ ಮಿಶ್ರಾ ಗೆಲುವನ್ನು ಖಚಿತಪಡಿಸಿಕೊಳ್ಳಲು ಅನುಕೂಲಕರ ಸ್ಥಾನದಲ್ಲಿದೆ. ಆದಾಗ್ಯೂ, ಡಾ. ದತ್ತೇಶ್ವರ್ ಹೋಟಾ ಗೆಲುವು ಕಾಂಗ್ರೆಸ್ ಶಾಸಕರ ಬೆಂಬಲವನ್ನು ಅವಲಂಬಿಸಿರುತ್ತದೆ. ಮತ್ತೊಂದೆಡೆ, ಬಿಜೆಪಿ ಬೆಂಬಲಿಸಿರುವ ಸ್ವತಂತ್ರ ಅಭ್ಯರ್ಥಿ ದಿಲೀಪ್ ರೇ, ಎದುರಾಳಿಗಳಿಂದ ಕನಿಷ್ಠ ಎಂಟು ಶಾಸಕರ ಬೆಂಬಲವನ್ನು ಪಡೆದರೆ ಮಾತ್ರ ಗೆಲುವು ಸಾಧಿಸಬಹುದು. ಇದು ಸ್ಪರ್ಧೆಯಲ್ಲಿ ಅಡ್ಡ ಮತದಾನವನ್ನು ನಿರ್ಣಾಯಕ ಅಂಶವಾಗಿಸುತ್ತದೆ.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಈ ಹಿನ್ನೆಲೆ ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟಿಗೆ ಇರಿಸಿ ಪಕ್ಷದ ನಿರ್ಧಾರಕ್ಕೆ ಬದ್ಧರಾಗುವಂತೆ ಮಾಡಲು ಬೆಂಗಳೂರಿಗೆ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ರಾಜ್ಯಸಭಾ ಚುನಾವಣೆಗೆ ಮುನ್ನ ರಾಜಕೀಯ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿವೆ.

ಪೂರಕ ಮಾಹಿತಿ: ನವೀನ್ ಕುಮಾರ್, ಟಿವಿ9 ದೇವನಹಳ್ಳಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Fri, 13 March 26

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು