AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಬೇಕೋ, ಜೈಲುವಾಸ ಬೇಕೋ? ಬಿಜೆಪಿಯಿಂದ ಬಂದಿತ್ತು ಆಫರ್, ಪಕ್ಷನಿಷ್ಠೆಗಾಗಿ ಜೈಲಿಗೋಗಿದ್ದೆ: ಸತ್ಯ ಬಿಚ್ಚಿಟ್ಟ ಡಿಕೆಶಿ

ಕಾಂಗ್ರೆಸ್ ಪಾಳಯದ ಟ್ರಬಲ್ ಶೂಟರ್, ಕರ್ನಾಟಕ ರಾಜಕೀಯದ ಪವರ್‌ಫುಲ್ ನಾಯಕ, ರಾಜಕೀಯ ತಂತ್ರಗಾರಿಕೆಯ ಮಾಸ್ಟರ್‌, ಸಿಎಂ ರೇಸ್‌ನಲ್ಲಿರುವ ನಾಯಕ ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿಯಿಂದ ಡಿಸಿಎಂ ಬೇಕೋ, ಜೈಲುವಾಸ ಬೇಕೋ ಎಂಬ ಆಫರ್ ಬಂದಿದ್ದಾಗ ಪಕ್ಷನಿಷ್ಠೆಗಾಗಿ ಜೈಲುವಾಸ ಆಯ್ಕೆ ಮಾಡಿಕೊಂಡಿದ್ದೆ ಎಂದು ಅವರು ಹೇಳಿದ್ದಾರೆ.

ಡಿಸಿಎಂ ಬೇಕೋ, ಜೈಲುವಾಸ ಬೇಕೋ? ಬಿಜೆಪಿಯಿಂದ ಬಂದಿತ್ತು ಆಫರ್, ಪಕ್ಷನಿಷ್ಠೆಗಾಗಿ ಜೈಲಿಗೋಗಿದ್ದೆ: ಸತ್ಯ ಬಿಚ್ಚಿಟ್ಟ ಡಿಕೆಶಿ
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on:Oct 16, 2025 | 9:23 AM

Share

ಬೆಂಗಳೂರು, ಅಕ್ಟೋಬರ್ 16: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜೀವನಪಯಣದ ಕುರಿತು ಹೊರಬಂದಿರುವ ಪುಸ್ತಕ ಡೈರೆಕ್ಟರ್ ಕೆಎಂ ರಘು ರಚಿಸಿರುವ ‘‘ಎ ಸಿಂಬಲ್ ಆಫ್ ಲಾಯಲ್ಟಿ ಡಿಕೆಶಿವಕುಮಾರ್’’ ಪುಸ್ತಕ ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಯಾಗಿದೆ. ಈ ಪುಸ್ತಕದ ಮೂಲಕ ಡಿಕೆ ಶಿವಕುಮಾರ್ ಹಲವು ಸ್ಫೋಟಕ ವಿಚಾರಗಳನ್ನು ಬಿಚ್ಟಿಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಹಿಂದೊಮ್ಮೆ ಬಿಜೆಪಿಯ ಬಾಗಿಲು ತಟ್ಟಿದ್ದರು ಎನ್ನುವುದು ಬಿಜೆಪಿಗರ ಮಾತು ಹಾಗೂ ಆರೋಪ. ಕೆಲ ದಿನಗಳ ಹಿಂದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಬಗ್ಗೆ ಹೇಳಿದ್ದರು. ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇದ್ದಿದ್ದರೆ ಬಿಜೆಪಿಗೆ ಸ್ವಾಗತ ಮಾಡಲಾಗುತ್ತಿತ್ತು ಎಂದಿದ್ದರು. ಇಂಥದ್ದೊಂದು ಪ್ರಯತ್ನ ಈಗಿನದ್ದಲ್ಲ. 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿಯೇ ಡಿಕೆಶಿಯವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನಗಳಾಗಿತ್ತು ಎಂಬುದು ಈಗ ಗೊತ್ತಾಗಿದೆ. ಇದನ್ನು ಖುದ್ದು ಡಿಕೆ ಶಿವಕುಮಾರ್ ಅವರೇ ಈಗ ಬಹಿರಂಗಪಡಿಸಿದ್ದಾರೆ.

ಇನ್‌ಕಮ್ ಟ್ಯಾಕ್ಸ್ ಆಡಿಟರ್‌ರಿಂದ ಫೋನ್ ಮಾಡಿಸಿ ಬಿಜೆಪಿಗೆ ಆಫರ್: ಸತ್ಯ ಬಿಚ್ಚಿಟ್ಟ ಬಂಡೆ

ಬೆಂಗಳೂರಿನ ಮೂವರು ಕಾಂಗ್ರೆಸ್ ಶಾಸಕರು ಸೇರಿ ಹಲವು ಮಂದಿ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆ ಮುಖ ಮಾಡಿದ್ದರು. ಅವತ್ತು ಕನಕಪುರದಲ್ಲಿದ್ದ ನಾನು ಓಡೋಡಿ ಬಂದು ನಮ್ಮ 5-6 ಶಾಸಕರನ್ನು ಕ್ವಾರ್ಟರ್ಸ್‌ಗೆ ಕರೆದುಕೊಂಡು ಬಂದಿದ್ದೆ. ಆಗ ದೆಹಲಿಯಿಂದ ನನಗೆ ಫೋನ್ ಬಂದಿತ್ತು. ಇನ್‌ಕಮ್ ಟ್ಯಾಕ್ಸ್ ಆಡಿಟರ್‌ರಿಂದ ಫೋನ್ ಮಾಡಿ ಮಾತನಾಡಿಸಿದ್ದರು. ಅಲ್ಲಿ ಒಬ್ಬ ಡಿಜಿ ಸಹ ಇದ್ದ. ಅವನು ಮಾತನಾಡಿದ. ಡಿಸಿಎಂ‌ ಆಗುತ್ತೀರಾ? ಅಥವಾ ಜೈಲಿಗೆ ಹೋಗುತ್ತೀರಾ? ಎರಡರಲ್ಲಿ ಒಂದು ಆಯ್ಕೆ ಮಾಡಬೇಕು ಎಂದ. ಜೊತೆಗಿದ್ದ ಶಾಸಕರನ್ನು ವಾಪಸ್ ಕಳುಹಿಸಲು ಹೇಳಿದರು. ಆದರೆ ನಾನು ಪಕ್ಷನಿಷ್ಠೆಗಾಗಿ ಡಿಸಿಎಂ ಬೇಡ ಎಂದು ಜೈಲುವಾಸವನ್ನೇ ಆಯ್ಕೆಮಾಡ್ಕೊಂಡೆ. ನಾನು ಮನಸ್ಸು ಮಾಡಿದ್ದರೆ ಅಂದೇ ಡಿಸಿಎಂ ಆಗಬಹುದಿತ್ತು ಎಂದು ಡಿಕೆ ಶಿವಕುಮಾರ್ ರಹಸ್ಯ ಬಿಚ್ಚಿಟ್ಟಿದ್ದಾರೆ.

ಮುಂದಿನ 8-10 ವರ್ಷ ಮಾತ್ರ ನನ್ನ ರಾಜಕಾರಣ: ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಯಾವುದೂ ನಿಂತ ನೀರಲ್ಲ ಎಂದ ಡಿಕೆ ಶಿವಕುಮಾರ್, A Symbol Of Loyalty ಪುಸ್ತಕದಲ್ಲಿ ನನ್ನ ಬದುಕಿನ ಶೇ 99 ರಷ್ಟು ಅಂಶಗಳು ಸತ್ಯ ಇವೆ ಎಂದು ತಿಳಿಸಿದ್ದಾರೆ. ನಾನು ಮುಂದಿನ 8-10 ವರ್ಷ ರಾಜಕಾರಣ ಮಾಡಬಹುದು. ಹೊಸಬರಿಗೆ ಅವಕಾಶಗಳು ಸಿಗಬೇಕು ಎಂದರು.

ನಾನು ಹೆಚ್​ಡಿ ದೇವೇಗೌಡರ ಕುಟುಂಬದ ವಿರುದ್ಧವಾಗಿ ರಾಜಕಾರಣ ಮಾಡಿದ್ದೇನೆ. ಆದರೆ ಪಕ್ಷದ ನಿಷ್ಠೆಗಾಗಿ ನಾನು ಹೆಚ್​ಡಿ ಕುಮಾರಸ್ವಾಮಿ ಜೊತೆಗೆ ಕೈಜೋಡಿಸಿದ್ದೇನೆ. ನನ್ನ ವಿರೋಧಿಗಳು ಕಥೆ ಕಟ್ಟಿ ಆರೋಪ‌ ಮಾಡುತ್ತಾರೆ. ಆದರೆ ನಾನು ಅದನ್ನೂ ಸ್ವಾಗತಿಸ್ತೇನೆ ಎಂದರು.

RSS ಬಗ್ಗೆ ಮಾತನಾಡಿದಕ್ಕೆ ಕ್ಷಮಾಪಣೆ ಕೇಳಲು ಯಾರೂ ಹೇಳಿಲ್ಲ: ಡಿಕೆಶಿ

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಹಾಡು ಹೇಳಿದ್ದನ್ನು ವಿವಾದ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, RSS ಬಗ್ಗೆ ನಾನು ಸದನದಲ್ಲಿ ಮಾತನಾಡಿದ್ದಕ್ಕೆ ಕ್ಷಮಾಪಣೆ ಕೇಳು ಎಂದು ನನಗೆ ಯಾರೂ ಹೇಳಲಿಲ್ಲ. ನನ್ನ ಕಾರ್ಯಕರ್ತರಿಗೆ ನೋವು ಆಗಬಾರದು ಎಂದು ಕ್ಷಮೆ ಕೇಳಿದೆ. ‘‘ನೀರಿನ ಮೇಲಿನ ಹೆಜ್ಜೆ’’ ಎಂಬ ನನ್ನ ಜೀವನದ ಕುರಿತ ಮತ್ತೊಂದು ಪುಸ್ತಕ ನವೆಂಬರ್ 6ಕ್ಕೆ ಬಿಡುಗಡೆಯಾಗಲಿದೆ. ಸಿಎಂ ಸಿದ್ದರಾಮಯ್ಯ ಅವರೇ ಇದನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಒಬ್ಬರು ಧರ್ಮಾಧಿಕಾರಿ ಭಾಷಣದಿಂದ ಪ್ರಭಾವಿತನಾಗಿ ನಾನು ಸಂಸ್ಕೃತ ಕಲಿತಿದ್ದೇನೆ ಎಂದ ಡಿ.ಕೆ.ಶಿವಕುಮಾರ್, ಕಾರ್ಯಕ್ರಮದಲ್ಲೂ ಶ್ಲೋಕ ಪಠಿಸಿ ಸಭಿಕರಿಂದ ಚಪ್ಪಾಳೆಗಿಟ್ಟಿಸಿದರು.

ಇದನ್ನೂ ಓದಿ: ಡಿಸಿಎಂ ಆಗ್ತೀರಾ ಅಥವಾ ಜೈಲಿಗೆ ಹೋಗ್ತೀರಾ: ಡಿಕೆ ಶಿವಕುಮಾರ್​​ ಆಯ್ಕೆ ಮಾಡಿಕೊಂಡಿದ್ದೇನು ಗೊತ್ತಾ?

ಕಾಂಗ್ರೆಸ್ ಪಾಳಯದಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿಕೆ ಶಿವಕುಮಾರ್ ಪಕ್ಷನಿಷ್ಠೆಯನ್ನ ಕಾಂಗ್ರೆಸ್‌ ಪ್ರತಿಯೊಬ್ಬ ಕಾರ್ಯಕರ್ತರು ಹಾಡಿಹೊಗಳುತ್ತಾರೆ. ಎಂಥದ್ದೇ ಸಂದರ್ಭ ಬಂದರೂ ಡಿಕೆ ಶಿವಕುಮಾರ್ ಪಕ್ಷಕ್ಕೆ ವಿರುದ್ಧವಾಗಿ ಹೋಗುವುದಿಲ್ಲ ಎಂಬುದನ್ನು ಅವರ ಆಪ್ತರು ಆಗಾಗ ನೆನಪಿಸುತ್ತಲೇ ಇರುತ್ತಾರೆ. ಇದೀಗ ಈ ಸಿಂಬಲ್ ಆಫ್ ಲಾಯಲ್ಟಿ ಎಂಬ ಪುಸ್ತಕ ಬಿಡುಗಡೆಯ ಸಂದರ್ಭದಲ್ಲೂ ಡಿಕೆ ಶಿವಕುಮಾರ್ ಅವರ ಬಾಯಿಂದಲೇ ಹಲವು ರಹಸ್ಯಗಳು ಬಯಲಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Thu, 16 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ