AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಡಿ.ಕೆ.ಶಿವಕುಮಾರ್​ ​ಪುತ್ರಿ ಐಶ್ವರ್ಯ ಹಾಗೂ ಅಮರ್ತ್ಯ ಹೆಗ್ಡೆ

Amartya Hegde Aishwarya Marriage | ಶಿವಕುಮಾರ್​ ಹಾಗೂ ಎಸ್​.ಎಂ. ಕೃಷ್ಣ ಇಬ್ಬರೂ ರಾಜಕೀಯ ಬಣದಲ್ಲಿ ಅತ್ಯಂತ ಪ್ರಭಾವಿಗಳಾಗಿದ್ದಾರೆ. ಹೀಗಾಗಿ, ರಾಜಕೀಯ ವಲಯದ ದಿಗ್ಗಜರು ಮದುವೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಇಂದು ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಡಿ.ಕೆ.ಶಿವಕುಮಾರ್​ ​ಪುತ್ರಿ ಐಶ್ವರ್ಯ ಹಾಗೂ ಅಮರ್ತ್ಯ ಹೆಗ್ಡೆ
ಕಾಂಗ್ರೆಸ್​ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯಾಗೆ ಮದುವೆ ಸಂಭ್ರಮ
ರಾಜೇಶ್ ದುಗ್ಗುಮನೆ
| Edited By: |

Updated on: Feb 14, 2021 | 7:06 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಜೊತೆ ಇಂದು (ಫೆ.14) ಹಸೆಮಣೆ ಏರಲಿದ್ದಾರೆ. ಬೆಳಗ್ಗೆ 9.45 ರ ಮುಹೂರ್ತದಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇಂದು ಪ್ರೇಮಿಗಳ ದಿನಾಚರಣೆ. ಈ ದಿನದಂದೇ ಐಶ್ವರ್ಯಾ ಮದುವೆ ನೆರವೇರುತ್ತಿರುವುದು ವಿಶೇಷ.

ಶಿವಕುಮಾರ್​ ಹಾಗೂ ಎಸ್​.ಎಂ. ಕೃಷ್ಣ ಇಬ್ಬರೂ ರಾಜಕೀಯ ಬಣದಲ್ಲಿ ಅತ್ಯಂತ ಪ್ರಭಾವಿಗಳು. ಹೀಗಾಗಿ, ರಾಜಕೀಯ ವಲಯದ ದಿಗ್ಗಜರು ಮದುವೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಎಐಸಿಸಿ ನಾಯಕ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಭಾಗಿಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಐಷಾರಾಮಿ ಹೋಟೆಲ್​ಗಳಲ್ಲಿ ಒಂದಾದ ವೈಟ್ ಫೀಲ್ಡ್ ಬಳಿಯ ಶೆರಟಾನ್​ನಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 17ರಂದು ಪ್ರೆಸ್ಟೀಜ್​ ಗಾಲ್ಫ್​​ಶೈರ್​ ರೆಸಾರ್ಟ್​ನಲ್ಲಿ ಆರತಕ್ಷತೆ ಕಾರ್ಯಕ್ರಮ ನೆರವೇರಲಿದೆ. ಫೆ.8ರಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಬೀಗರ ಊಟ ನಡೆಯಲಿದೆ.

ಇದನ್ನೂ ಓದಿ: ಐಶ್ವರ್ಯ ಶಿವಕುಮಾರ್​ಗೆ ಅರಿಶಿಣ ಶಾಸ್ತ್ರದ ಸಂಭ್ರಮ

ಇನ್ನು, ಮದುವೆ ಫೆಬ್ರವರಿ 14ಕ್ಕೆ ಆದರೂ, ಮದುವೆ ಕಾರ್ಯಕ್ರಮ ಫೆ.5ರಿಂದಲೇ ಆರಂಭಗೊಂಡಿತ್ತು. ಸಂಗೀತ ಕಾರ್ಯಕ್ರಮಗಳು ರಸವತ್ತಾಗಿ ಏರ್ಪಟ್ಟಿದ್ದವು. ಫೆಬ್ರವರಿ 10ರಂದು ಅರಿಶಿಣ ಕಾರ್ಯಕ್ರಮ ನೆರವೇರಿದೆ. ಕಳೆದ ನವೆಂಬರ್​ 18ರಂದು ಬೆಂಗಳೂರಿನ ಹೊರ ವಲಯದಲ್ಲಿ ಸಿಂಪಲ್​ ಆಗಿ ನಿಶ್ಚಿತಾರ್ಥ ಕಾರ್ಯ ನೆರವೇರಿತ್ತು.

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?