AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಡ್ಯಾಂ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವ ನಂಬಿಕೆ ಇದೆ; ಡಿ.ಕೆ.ಶಿವಕುಮಾರ್ ಟ್ವೀಟ್

ರಾಜ್ಯದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ನ ಭೇಟಿ ಮಾಡಿದ್ದಾರೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉಪಸ್ಥಿತರಿದ್ದಾರೆ.

ಮೇಕೆದಾಟು ಡ್ಯಾಂ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವ ನಂಬಿಕೆ ಇದೆ; ಡಿ.ಕೆ.ಶಿವಕುಮಾರ್ ಟ್ವೀಟ್
ಡಿ.ಕೆ. ಶಿವಕುಮಾರ್
TV9 Web
| Edited By: |

Updated on:Jul 13, 2021 | 11:06 AM

Share

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಇಂದು (ಜುಲೈ 13) ನಡೆಸಲಿರುವ ಸಭೆಯಲ್ಲಿ ಮೇಕೆದಾಟು ಅಣೆಕಟ್ಟೆ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಇದು ಇಡೀ ರಾಜ್ಯದ ಜನರ ನಂಬಿಕೆಯೂ ಹೌದು. ಮುಖ್ಯಮಂತ್ರಿ ಈ ನಿಟ್ಟಿನಲ್ಲಿ ಕೈ ಜೋಡಿಸ್ತಾರೆ ಎಂಬ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ನ ಭೇಟಿ ಮಾಡಿದ್ದಾರೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉಪಸ್ಥಿತರಿದ್ದಾರೆ.

ನ್ಯಾಯ ಸಿಗುವ ಭರವಸೆಯಿದೆ ಕೃಷಿಗಿಂತಲೂ ಕುಡಿಯುವ ನೀರಿಗೆ ಮೊದಲ ಆದ್ಯತೆಯಾದ್ದರಿಂದ ಕರ್ನಾಟಕಕ್ಕೆ ಮೇಕೆದಾಟು ಯೋಜನೆ ಜಾರಿಗೊಳಿಸಲು ಸಂಪೂರ್ಣ ಹಕ್ಕಿದೆ. ಕಾನೂನಿನ ಪ್ರಕಾರವಾಗಿ ನಾವು ಇಟ್ಟಿರುವ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿ, ನಮಗೆ ಮೇಕೆದಾಟು ಯೋಜನೆ ಪೂರ್ಣಗೊಳಿಸಲು ಅನುಮತಿ ನೀಡಬೇಕು. ಕೇಂದ್ರ ಸರ್ಕಾರದಿಂದ ನಮಗೆ ನ್ಯಾಯ ಸಿಗುವ ಭರವಸೆಯಿದೆ ಎಂದು ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

Mekedatu Project: ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು; ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡು ನಾಯಕರ ನಿರ್ಧಾರ

Mekedatu Project: ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ; ಗೃಹಸಚಿವ ಬೊಮ್ಮಾಯಿ ವಿಶ್ವಾಸ

(DK Shivakumar says he hopes Mekedatu dam construction works will starts soon)

Published On - 11:03 am, Tue, 13 July 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ