AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belgavi Lok Sabha By-Election: ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು; ಸೆಕ್ಸ್​ ಸಿಡಿ ಹುಟ್ಟಿಸಿದ ಆತಂಕ ! 

ಸಿದ್ದರಾಮಯ್ಯನವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ. ಹಾಗೇ, ಡಿ.ಕೆ.ಶಿವಕುಮಾರ್ ತಾವೂ ಬರುವುದಾಗಿ ಹೇಳಿದ್ದು, ನಾಳೆ (ಭಾನುವಾರ)ಸಂಜೆ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಹೋಗುವುದಾಗಿ ಹೇಳಿಕೊಂಡಿದ್ದಾರೆ.

Belgavi Lok Sabha By-Election: ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು; ಸೆಕ್ಸ್​ ಸಿಡಿ ಹುಟ್ಟಿಸಿದ ಆತಂಕ ! 
ಸತೀಶ್ ಜಾರಕಿಹೊಳಿ-ಡಿ.ಕೆ.ಶಿವಕುಮಾರ್​
Follow us
Lakshmi Hegde
|

Updated on: Mar 27, 2021 | 1:33 PM

ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್​ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್​ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್​ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್​​ನಿಂದ ಸತೀಶ್​ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್​ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರೂ ಬಲವಾಗಿ ಕೇಳಿಬರುತ್ತಿರುವುದು ಇನ್ನಷ್ಟು ಗೊಂದಲಕ್ಕೆ ಕಾರಣವಾಗುತ್ತಿದೆ.

ಸತೀಶ್ ಜಾರಕಿಹೊಳಿಯವರು ಸೋಮವಾರ (ಮಾರ್ಚ್​ 29) ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಡಿ.ಕೆ.ಶಿವಕುಮಾರ್ ತಾವೂ ಹಾಜರು ಇರುವುದಾಗಿ ಹೇಳಿದ್ದಾರೆ. ಆದರೆ ಸಿಡಿ ಪ್ರಕರಣ ಸಿಕ್ಕಾಪಟೆ ಚರ್ಚೆಯಾಗುತ್ತಿರುವ ಹೊತ್ತಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರುವುದು ಬೇಡ ಎಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಹೇಳುತ್ತಿದ್ದಾರೆ. ಅಷ್ಟಕ್ಕೂ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರುವುದು ಬೇಡ ಎಂದು ಕಾಂಗ್ರೆಸ್​ನ ಕೆಲವು ಶಾಸಕರು, ಕಾರ್ಯಕರ್ತರು ಹೇಳುತ್ತಿರುವುದಕ್ಕೆ ಒಂದು ಬಲವಾದ ಕಾರಣವೂ ಇದೆ.

ಸಿದ್ದರಾಮಯ್ಯನವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ. ಹಾಗೇ, ಡಿ.ಕೆ.ಶಿವಕುಮಾರ್ ತಾವೂ ಬರುವುದಾಗಿ ಹೇಳಿದ್ದು, ನಾಳೆ (ಭಾನುವಾರ)ಸಂಜೆ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಹೋಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಸಿಡಿ ವಿಚಾರದಲ್ಲಿ ಡಿಕೆಶಿ ಹೆಸರು ಕೇಳಿಬಂದಿರುವುದರಿಂದ ರಮೇಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಡಿ.ಕೆ.ಶಿವಕುಮಾರ್​ ಬೆಂಬಲಿಗರ ಮಧ್ಯೆ ಗಲಾಟೆ ನಡೆಯಬಹುದು ಎಂಬುದು ಕೈನ ಹಲವು ಶಾಸಕರು, ಮುಖಂಡರು, ಸತೀಶ್​ ಜಾರಕಿಹೊಳಿ ಬೆಂಬಲಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸಿಡಿ ಯುವತಿಯ ಆಡಿಯೋವೊಂದು ನಿನ್ನೆ ಬಿಡುಗಡೆಯಾಗಿದ್ದು, ಅದರಲ್ಲಿ ಆಕೆ ಡಿ.ಕೆ.ಶಿವಕುಮಾರ್ ಹೆಸರನ್ನು ಹೇಳಿದ್ದಾಳೆ. ಇದರಿಂದ ಸಹಜವಾಗಿಯೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಕೆರಳಿರುತ್ತಾರೆ. ಈ ಹೊತ್ತಲ್ಲಿ ಡಿಕೆಶಿ ಇಲ್ಲಿಗೆ ಬಂದರೆ, ರಮೇಶ್ ಬೆಂಬಲಿಗರು ಬೇಕೆಂದೇ ಗಲಾಟೆ ಸೃಷ್ಟಿಸಬಹುದು ಎಂಬ ಬಗ್ಗೆ ಕೈ ಪಾಳಯದಲ್ಲಿ ಚರ್ಚೆಯಾಗುತ್ತಿರುವ ವಿಷಯ ಎನ್ನಲಾಗಿದೆ.

ಇದನ್ನೂ ಓದಿ: ‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’

ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ

ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ