AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belgavi Lok Sabha By-Election: ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು; ಸೆಕ್ಸ್​ ಸಿಡಿ ಹುಟ್ಟಿಸಿದ ಆತಂಕ ! 

ಸಿದ್ದರಾಮಯ್ಯನವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ. ಹಾಗೇ, ಡಿ.ಕೆ.ಶಿವಕುಮಾರ್ ತಾವೂ ಬರುವುದಾಗಿ ಹೇಳಿದ್ದು, ನಾಳೆ (ಭಾನುವಾರ)ಸಂಜೆ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಹೋಗುವುದಾಗಿ ಹೇಳಿಕೊಂಡಿದ್ದಾರೆ.

Belgavi Lok Sabha By-Election: ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು; ಸೆಕ್ಸ್​ ಸಿಡಿ ಹುಟ್ಟಿಸಿದ ಆತಂಕ ! 
ಸತೀಶ್ ಜಾರಕಿಹೊಳಿ-ಡಿ.ಕೆ.ಶಿವಕುಮಾರ್​
Lakshmi Hegde
|

Updated on: Mar 27, 2021 | 1:33 PM

Share

ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್​ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್​ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್​ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್​​ನಿಂದ ಸತೀಶ್​ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್​ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರೂ ಬಲವಾಗಿ ಕೇಳಿಬರುತ್ತಿರುವುದು ಇನ್ನಷ್ಟು ಗೊಂದಲಕ್ಕೆ ಕಾರಣವಾಗುತ್ತಿದೆ.

ಸತೀಶ್ ಜಾರಕಿಹೊಳಿಯವರು ಸೋಮವಾರ (ಮಾರ್ಚ್​ 29) ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಡಿ.ಕೆ.ಶಿವಕುಮಾರ್ ತಾವೂ ಹಾಜರು ಇರುವುದಾಗಿ ಹೇಳಿದ್ದಾರೆ. ಆದರೆ ಸಿಡಿ ಪ್ರಕರಣ ಸಿಕ್ಕಾಪಟೆ ಚರ್ಚೆಯಾಗುತ್ತಿರುವ ಹೊತ್ತಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರುವುದು ಬೇಡ ಎಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಹೇಳುತ್ತಿದ್ದಾರೆ. ಅಷ್ಟಕ್ಕೂ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರುವುದು ಬೇಡ ಎಂದು ಕಾಂಗ್ರೆಸ್​ನ ಕೆಲವು ಶಾಸಕರು, ಕಾರ್ಯಕರ್ತರು ಹೇಳುತ್ತಿರುವುದಕ್ಕೆ ಒಂದು ಬಲವಾದ ಕಾರಣವೂ ಇದೆ.

ಸಿದ್ದರಾಮಯ್ಯನವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ. ಹಾಗೇ, ಡಿ.ಕೆ.ಶಿವಕುಮಾರ್ ತಾವೂ ಬರುವುದಾಗಿ ಹೇಳಿದ್ದು, ನಾಳೆ (ಭಾನುವಾರ)ಸಂಜೆ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಹೋಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಸಿಡಿ ವಿಚಾರದಲ್ಲಿ ಡಿಕೆಶಿ ಹೆಸರು ಕೇಳಿಬಂದಿರುವುದರಿಂದ ರಮೇಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಡಿ.ಕೆ.ಶಿವಕುಮಾರ್​ ಬೆಂಬಲಿಗರ ಮಧ್ಯೆ ಗಲಾಟೆ ನಡೆಯಬಹುದು ಎಂಬುದು ಕೈನ ಹಲವು ಶಾಸಕರು, ಮುಖಂಡರು, ಸತೀಶ್​ ಜಾರಕಿಹೊಳಿ ಬೆಂಬಲಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸಿಡಿ ಯುವತಿಯ ಆಡಿಯೋವೊಂದು ನಿನ್ನೆ ಬಿಡುಗಡೆಯಾಗಿದ್ದು, ಅದರಲ್ಲಿ ಆಕೆ ಡಿ.ಕೆ.ಶಿವಕುಮಾರ್ ಹೆಸರನ್ನು ಹೇಳಿದ್ದಾಳೆ. ಇದರಿಂದ ಸಹಜವಾಗಿಯೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಕೆರಳಿರುತ್ತಾರೆ. ಈ ಹೊತ್ತಲ್ಲಿ ಡಿಕೆಶಿ ಇಲ್ಲಿಗೆ ಬಂದರೆ, ರಮೇಶ್ ಬೆಂಬಲಿಗರು ಬೇಕೆಂದೇ ಗಲಾಟೆ ಸೃಷ್ಟಿಸಬಹುದು ಎಂಬ ಬಗ್ಗೆ ಕೈ ಪಾಳಯದಲ್ಲಿ ಚರ್ಚೆಯಾಗುತ್ತಿರುವ ವಿಷಯ ಎನ್ನಲಾಗಿದೆ.

ಇದನ್ನೂ ಓದಿ: ‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’

ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ

ಈ ರಾಶಿಯವರು ಅತಿಯಾದ ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ
ಈ ರಾಶಿಯವರು ಅತಿಯಾದ ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ
ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ