AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belgavi Lok Sabha By-Election: ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು; ಸೆಕ್ಸ್​ ಸಿಡಿ ಹುಟ್ಟಿಸಿದ ಆತಂಕ ! 

ಸಿದ್ದರಾಮಯ್ಯನವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ. ಹಾಗೇ, ಡಿ.ಕೆ.ಶಿವಕುಮಾರ್ ತಾವೂ ಬರುವುದಾಗಿ ಹೇಳಿದ್ದು, ನಾಳೆ (ಭಾನುವಾರ)ಸಂಜೆ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಹೋಗುವುದಾಗಿ ಹೇಳಿಕೊಂಡಿದ್ದಾರೆ.

Belgavi Lok Sabha By-Election: ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು; ಸೆಕ್ಸ್​ ಸಿಡಿ ಹುಟ್ಟಿಸಿದ ಆತಂಕ ! 
ಸತೀಶ್ ಜಾರಕಿಹೊಳಿ-ಡಿ.ಕೆ.ಶಿವಕುಮಾರ್​
Lakshmi Hegde
|

Updated on: Mar 27, 2021 | 1:33 PM

Share

ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್​ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್​ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್​ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್​​ನಿಂದ ಸತೀಶ್​ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್​ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರೂ ಬಲವಾಗಿ ಕೇಳಿಬರುತ್ತಿರುವುದು ಇನ್ನಷ್ಟು ಗೊಂದಲಕ್ಕೆ ಕಾರಣವಾಗುತ್ತಿದೆ.

ಸತೀಶ್ ಜಾರಕಿಹೊಳಿಯವರು ಸೋಮವಾರ (ಮಾರ್ಚ್​ 29) ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಡಿ.ಕೆ.ಶಿವಕುಮಾರ್ ತಾವೂ ಹಾಜರು ಇರುವುದಾಗಿ ಹೇಳಿದ್ದಾರೆ. ಆದರೆ ಸಿಡಿ ಪ್ರಕರಣ ಸಿಕ್ಕಾಪಟೆ ಚರ್ಚೆಯಾಗುತ್ತಿರುವ ಹೊತ್ತಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರುವುದು ಬೇಡ ಎಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಹೇಳುತ್ತಿದ್ದಾರೆ. ಅಷ್ಟಕ್ಕೂ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರುವುದು ಬೇಡ ಎಂದು ಕಾಂಗ್ರೆಸ್​ನ ಕೆಲವು ಶಾಸಕರು, ಕಾರ್ಯಕರ್ತರು ಹೇಳುತ್ತಿರುವುದಕ್ಕೆ ಒಂದು ಬಲವಾದ ಕಾರಣವೂ ಇದೆ.

ಸಿದ್ದರಾಮಯ್ಯನವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ. ಹಾಗೇ, ಡಿ.ಕೆ.ಶಿವಕುಮಾರ್ ತಾವೂ ಬರುವುದಾಗಿ ಹೇಳಿದ್ದು, ನಾಳೆ (ಭಾನುವಾರ)ಸಂಜೆ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಹೋಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಸಿಡಿ ವಿಚಾರದಲ್ಲಿ ಡಿಕೆಶಿ ಹೆಸರು ಕೇಳಿಬಂದಿರುವುದರಿಂದ ರಮೇಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಡಿ.ಕೆ.ಶಿವಕುಮಾರ್​ ಬೆಂಬಲಿಗರ ಮಧ್ಯೆ ಗಲಾಟೆ ನಡೆಯಬಹುದು ಎಂಬುದು ಕೈನ ಹಲವು ಶಾಸಕರು, ಮುಖಂಡರು, ಸತೀಶ್​ ಜಾರಕಿಹೊಳಿ ಬೆಂಬಲಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸಿಡಿ ಯುವತಿಯ ಆಡಿಯೋವೊಂದು ನಿನ್ನೆ ಬಿಡುಗಡೆಯಾಗಿದ್ದು, ಅದರಲ್ಲಿ ಆಕೆ ಡಿ.ಕೆ.ಶಿವಕುಮಾರ್ ಹೆಸರನ್ನು ಹೇಳಿದ್ದಾಳೆ. ಇದರಿಂದ ಸಹಜವಾಗಿಯೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಕೆರಳಿರುತ್ತಾರೆ. ಈ ಹೊತ್ತಲ್ಲಿ ಡಿಕೆಶಿ ಇಲ್ಲಿಗೆ ಬಂದರೆ, ರಮೇಶ್ ಬೆಂಬಲಿಗರು ಬೇಕೆಂದೇ ಗಲಾಟೆ ಸೃಷ್ಟಿಸಬಹುದು ಎಂಬ ಬಗ್ಗೆ ಕೈ ಪಾಳಯದಲ್ಲಿ ಚರ್ಚೆಯಾಗುತ್ತಿರುವ ವಿಷಯ ಎನ್ನಲಾಗಿದೆ.

ಇದನ್ನೂ ಓದಿ: ‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’

ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ