AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಗಳವಾರ ರೋಡ್ ಶೋ ವೇಳೆ ಜನರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರವಾಗಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 29, 2023 | 6:29 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮಂಗಳವಾರ ರೋಡ್ ಶೋ ವೇಳೆ ಜನರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರವಾಗಿ ಬಿಜೆಪಿಯು (BJP) ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ವೇಳೆ ತೆರೆದ ಬಸ್​​ನಲ್ಲಿ ರೋಡ್​ಶೋ ನಡೆಸಿದ್ದ ಡಿಕೆಶಿ ಕಲಾವಿದರತ್ತ ಹಣ ಎಸೆದಿದ್ದರು. ಈ ಬಗ್ಗೆ ಬಿಜೆಪಿ ಎಂಎಲ್​ಸಿ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜತೆಗೆ, ಎಸ್​ಡಿಪಿಐ ಮುಖಂಡರೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರವಾಗಿಯೂ ದೂರು ಸಲ್ಲಿಸಲಾಗಿದೆ.

ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಒಂದು ಬದಿಯಲ್ಲಿ ಕಲಾವಿದರ ತಂಡ ವಿವಿಧ ಪ್ರದರ್ಶನಗಳನ್ನು ನಡೆಸುತ್ತಿತ್ತು. ಅವರತ್ತ ಡಿಕೆಶಿ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದಿದ್ದರು. ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುವ ಮಂಡ್ಯದಲ್ಲಿ ಕಾಂಗ್ರೆಸ್‌ನ ಒಕ್ಕಲಿಗ ನಾಯಕ, ಕಾಂಗ್ರೆಸ್​ ಮತ ಗಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಈ ಮಧ್ಯೆ, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತುಕೊಳ್ಳಲು ಆಶೀರ್ವದಿಸಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನೀವು ಮಾಡಿದ್ದೆಲ್ಲ ಸಹಿಸಿಕೊಂಡು ಬಿರಿಯಾನಿ ಹಾಕುವ ದೇಶ ಇದಲ್ಲ; ಎಸ್​ಡಿಪಿಐ ಮುಖಂಡಗೆ ಸಿಟಿ ರವಿ ತಿರುಗೇಟು

ಎಸ್​ಡಿಪಿಐ ಮುಖಂಡರ ವಿರುದ್ಧ ಯಾಕೆ ದೂರು?

ಮುಸ್ಲಿಮರ ಮೀಸಲಾತಿ ವಾಪಸ್ ಕೊಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಡ್ಡಿ ಬಿಚ್ಚಿಸುತ್ತೇವೆ ಎಂದು ಚಿತ್ರದುರ್ಗ ಎಸ್​​ಡಿಪಿಐ ಮುಖಂಡರೊಬ್ಬರು ಇತ್ತೀಚೆಗೆ ಹೇಳಿದ್ದರು. ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸುವ ಬಗ್ಗೆ ಕಳೆದ ವಾರ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್​ಡಿಪಿಐ ಮುಖಂಡರು ಬಿಜೆಪಿ ಹಾಗೂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್