AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ. ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಜೊತೆಗೆ, […]

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?
KUSHAL V
| Updated By: ಸಾಧು ಶ್ರೀನಾಥ್​|

Updated on: Aug 25, 2020 | 2:28 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ.

ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಜೊತೆಗೆ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಗಳಲ್ಲಿ ನಡೆದ ಗಲಭೆಯ ಪ್ರಕರಣವೂ ಸಹ ನೇರ ಪರಿಣಾಮ ಬೀರಲಿದೆ. ಗಲಭೆ ಪ್ರಕರಣವನ್ನೇ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಜೊತೆಗೆ, ಗಲಭೆ ಕೇಸ್​ನಲ್ಲಿ ‘ಕೈ’ ಕಾರ್ಪೊರೇಟರ್​ಗಳ ಹೆಸರು ತಳುಕು ಹಾಕಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ಹೊತ್ತಿಗೆ ಮತ್ತಷ್ಟು ಜಿದ್ದಾಜಿದ್ದಿ ಏರ್ಪಡಾಗುವ ಸಾಧ್ಯತೆಯಿದೆ.

ಇದಲ್ಲದೆ, ವಾರ್ಡ್​ಗಳ ಮರುವಿಂಗಡನೆ ಕೂಡ ಕಾಂಗ್ರೆಸ್​ಗೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ, ಕೇವಲ ಕಾಂಗ್ರೆಸ್​ಗೆ ಮಾತ್ರವಲ್ಲ, ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೂ ಇದೇ ಚಾಲೆಂಜ್ ಆಗಿದೆ. ಆದ್ದರಿಂದ, ಬಿಬಿಎಂಪಿ ಸವಾಲನ್ನು ಡಿಕೆ ಶಿವಕುಮಾರ್​ ಹೇಗೆ ಬಗೆಹರಿಸ್ತಾರೆ ಎನ್ನೋದೇ ಕುತೂಹಲ ಕೆರಳಿಸಿದೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ