AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ. ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಜೊತೆಗೆ, […]

KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್​ಗೆ ಮೊದಲ ಸವಾಲ್​ ಎದುರಾಗಿದೆ, ಯಾವುದದು?
KUSHAL V
| Edited By: |

Updated on: Aug 25, 2020 | 2:28 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿ​ವಕುಮಾರ್ ಸದ್ಯ ಕೊರೊನಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಈ ನಡುವೆ ಅಧ್ಯಕ್ಷರಾದ ಬಳಿಕ ಶಿವಕುಮಾರ್​ರಿಗೆ ಮೊದಲನೇ ಚುನಾವಣೆಯ ಸವಾಲ್​ ಎದುರಾಗಿದೆ.

ಹೌದು, ಬಿಬಿಎಂಪಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು ಈ ಬಾರಿ ಬೆಂಗಳೂರನ್ನು ಬಿಜೆಪಿಯ ತೆಕ್ಕೆಯಿಂದ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸವಾಲ್​ ಡಿ.ಕೆ.ಶಿ​ವಕುಮಾರ್​ರಿಗೆ ಎದುರಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿರುವ ಹಿನ್ನೆಲೆಯಲ್ಲಿ ಇದು ಶಿವಕುಮಾರ್​ಗೆ ಚಾಲೆಂಜ್ ಆಗಿ ಪರಿಣಮಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಜೊತೆಗೆ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಗಳಲ್ಲಿ ನಡೆದ ಗಲಭೆಯ ಪ್ರಕರಣವೂ ಸಹ ನೇರ ಪರಿಣಾಮ ಬೀರಲಿದೆ. ಗಲಭೆ ಪ್ರಕರಣವನ್ನೇ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಜೊತೆಗೆ, ಗಲಭೆ ಕೇಸ್​ನಲ್ಲಿ ‘ಕೈ’ ಕಾರ್ಪೊರೇಟರ್​ಗಳ ಹೆಸರು ತಳುಕು ಹಾಕಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ಹೊತ್ತಿಗೆ ಮತ್ತಷ್ಟು ಜಿದ್ದಾಜಿದ್ದಿ ಏರ್ಪಡಾಗುವ ಸಾಧ್ಯತೆಯಿದೆ.

ಇದಲ್ಲದೆ, ವಾರ್ಡ್​ಗಳ ಮರುವಿಂಗಡನೆ ಕೂಡ ಕಾಂಗ್ರೆಸ್​ಗೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ, ಕೇವಲ ಕಾಂಗ್ರೆಸ್​ಗೆ ಮಾತ್ರವಲ್ಲ, ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೂ ಇದೇ ಚಾಲೆಂಜ್ ಆಗಿದೆ. ಆದ್ದರಿಂದ, ಬಿಬಿಎಂಪಿ ಸವಾಲನ್ನು ಡಿಕೆ ಶಿವಕುಮಾರ್​ ಹೇಗೆ ಬಗೆಹರಿಸ್ತಾರೆ ಎನ್ನೋದೇ ಕುತೂಹಲ ಕೆರಳಿಸಿದೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ