ಡಿಕೆ ಶಿವಕುಮಾರ್ ಶೀಘ್ರವೇ ಬೆಳಗಾವಿಗೆ ಬರ್ತಾರೆ, ಯಾಕೆ ಗೊತ್ತಾ?

ಬೆಳಗಾವಿ: ಜೈಲಿನಿಂದ ಹೊರಬಂದಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಜಿ ಸಚಿವ ಡಿಕೆಶಿಗೆ ಬೇಲ್ ಸಿಗುವಂತೆ ಬೆಳಗಾವಿಯ ಕಾರ್ಯಕರ್ತರು, ಅಭಿಮಾನಿಗಳು ಪ್ರಾರ್ಥನೆ, ಪೂಜೆ ಜತೆಗೆ ಹರಕೆ ಹೊತ್ತಿಕೊಂಡಿದ್ದರು. ಹರಕೆ ತೀರಿಸಲು ಶೀಘ್ರವೇ ಮಾಜಿ ಸಚಿವ ಡಿಕೆಶಿ ಬರಲಿದ್ದಾರೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಡಿಕೆಶಿ ಬಿಡುಗಡೆಯಿಂದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ. ಅವರು ಹೋದಲೆಲ್ಲ ಸಿಗುತ್ತಿರುವ ರೆಸ್ಪಾನ್ಸ್ […]

ಡಿಕೆ ಶಿವಕುಮಾರ್ ಶೀಘ್ರವೇ ಬೆಳಗಾವಿಗೆ ಬರ್ತಾರೆ, ಯಾಕೆ ಗೊತ್ತಾ?
ಸಾಧು ಶ್ರೀನಾಥ್​

Updated on: Nov 08, 2019 | 3:06 PM

ಬೆಳಗಾವಿ: ಜೈಲಿನಿಂದ ಹೊರಬಂದಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಾಜಿ ಸಚಿವ ಡಿಕೆಶಿಗೆ ಬೇಲ್ ಸಿಗುವಂತೆ ಬೆಳಗಾವಿಯ ಕಾರ್ಯಕರ್ತರು, ಅಭಿಮಾನಿಗಳು ಪ್ರಾರ್ಥನೆ, ಪೂಜೆ ಜತೆಗೆ ಹರಕೆ ಹೊತ್ತಿಕೊಂಡಿದ್ದರು. ಹರಕೆ ತೀರಿಸಲು ಶೀಘ್ರವೇ ಮಾಜಿ ಸಚಿವ ಡಿಕೆಶಿ ಬರಲಿದ್ದಾರೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಡಿಕೆಶಿ ಬಿಡುಗಡೆಯಿಂದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ. ಅವರು ಹೋದಲೆಲ್ಲ ಸಿಗುತ್ತಿರುವ ರೆಸ್ಪಾನ್ಸ್ ನೋಡಿದ್ರೆ ಗೊತ್ತಾಗುತ್ತೆ. ಶೀಘ್ರವೇ ಮಾಜಿ‌ ಸಚಿವ ಡಿಕೆಶಿ ಬೆಳಗಾವಿಗೂ ಆಗಮಿಸಲಿದ್ದಾರೆ ಎಂದು ಹೆಬ್ಬಾಳ್ಕರ್ ಸುದ್ದಿಗಾರರಿಗೆ ತಿಳಿಸಿದರು.

ಉಪಚುನಾವಣೆಯಲ್ಲಿ ಅಥಣಿ ಕ್ಷೇತ್ರದ ‌ಉಸ್ತುವಾರಿ ವಹಿಸಿದ್ದಾರೆ. ಪಕ್ಷವು ವಹಿಸಿದ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಕ್ಷೇತ್ರದಲ್ಲಿ ಸಂಚರಿಸಿ ನಾನು ನನ್ನ ರೋಲ್ ಪ್ಲೇ ಮಾಡುತ್ತೇನೆ ಎಂದು ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಇದೇ ಸಂದರ್ಭದಲ್ಲಿ ಹೇಳಿದರು.

Published On - 2:57 pm, Fri, 8 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us