ಜಾತಿ ಗಣತಿ: ಕೇಂದ್ರ ಸರ್ಕಾರದ ನಿರ್ಧಾರವನ್ನು ತಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದ ಡಿಕೆ ಶಿವಕುಮಾರ್
ಕರ್ನಾಟಕ ಸರ್ಕಾರವೂ ಸೇರಿದಂತೆ ಕಾಂಗ್ರೆಸ್ ಆಡಳಿತದಲ್ಲಿರುವ ಇತರ ರಾಜ್ಯಗಳು ಸಹ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತವೆ ಮತ್ತು ರಾಜ್ಯಗಳಿಂದ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸುತ್ತವೆ ಎಂದು ಶಿವಕುಮಾರ್ ಹೇಳಿದರು. ಮಂಗಳೂರು ನಗರದಲ್ಲಿ ವ್ಯಕ್ತಿಯೊಬ್ಬನ್ನು ಒಂದು ಗುಂಪು ಕೊಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡದೆ ಅಲ್ಲಿಂದ ಮೌನವಾಗಿ ಸರಿದರು.
ಬೆಂಗಳೂರು, ಮೇ 1: ಮುಂದಿನ ಜನಗಣತಿಯ ಜೊತೆ ಜಾತಿ ಗಣತಿಯನ್ನು (Caste Census) ಸಹ ಮಾಡಲಾಗುವುದು ಅಂತ ಕೇಂದ್ರ ಸರ್ಕಾರ ಹೇಳಿರುವುದನ್ನು ತಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಜಾತಿ ಗಣತಿ ಮಾಡಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ, ಇದನ್ನು ಮಾಡಿಸುವುದರಿಂದ ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು ಸಾಧ್ಯವಾಗುತ್ತದೆ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹಲ್ ಗಾಂಧಿ ಜಾತಿಗಣತಿಗಾಗಿ ಅಗ್ರಹಿಸುತ್ತಿದ್ದರು ಎಂದು ಹೇಳಿದರು.
ಇದನ್ನೂ ಓದಿ: ಭಯೋತ್ಪಾದಕರನ್ನು ಸದೆಬಡಿಯುವ ಕೇಂದ್ರದ ಸಂಕಲ್ಪದೊಂದಿಗೆ ನಾವಿದ್ದೇವೆ: ಡಿಕೆ ಶಿವಕುಮಾರ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos