Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಪಡೆದ ಅಂಧ ವಿದ್ಯಾರ್ಥಿನಿಗೆ ಆಸರೆಯಾದ ಡಿಸಿಎಂ ಡಿಕೆ ಶಿವಕುಮಾರ್​

ಯಲಹಂಕದ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ದಿವ್ಯಾಂಜಲಿ ಎಂಬ ಅಂಧ ವಿದ್ಯಾರ್ಥಿನಿಗೆ ಸ್ಥಳದಲ್ಲೇ ಕೆಲಸ ಕೊಡಿಸುವ ಮೂಲಕ ಆಕೆಯ ಬಾಳಿಗೆ ಬೆಳಕಾಗಿದ್ದಾರೆ. ಏನಿದು ಅಂತೀರಾ? ಈ ಸ್ಟೋರಿ ಓದಿ.

ಪದವಿ ಪಡೆದ ಅಂಧ ವಿದ್ಯಾರ್ಥಿನಿಗೆ ಆಸರೆಯಾದ ಡಿಸಿಎಂ ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​​
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 05, 2024 | 3:27 PM

ಬೆಂಗಳೂರು, ಜ.05: ಬಿಎ ಪದವಿ ಪಡೆದ ಅಂಧ ವಿದ್ಯಾರ್ಥಿನಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar)​ ಆಸರೆ ಆಗಿದ್ದಾರೆ. ಸುಂಕದಕಟ್ಟೆ(Sunkadkatte) ಶಾಂತಿಧಾಮ ಸಂಸ್ಥೆಯ ಅಂಧ ವಿದ್ಯಾರ್ಥಿನಿ(Blind Student) ಯಾಗಿರುವ ದಿವ್ಯಾಂಜಲಿ ಎಂಬುವವರಿಗೆ ಸ್ವಾವಲಂಭಿ ಜೀವನ ನಡೆಸುವ ಉದ್ದೇಶದಿಂದ ಕೆಲಸವೊಂದನ್ನು ಕೊಡಿಸುವ ಮೂಲಕ ಅಂಧ ವಿದ್ಯಾರ್ಥಿನಿ ಬಾಳಿಗೆ ಬೆಳಕಾಗಿದ್ದಾರೆ.

ಅಂಧ ವಿದ್ಯಾರ್ಥಿನಿ ದಿವ್ಯಾಂಜಲಿಗೆ ಸ್ಥಳದಲ್ಲೇ ಬಿಬಿಎಂಪಿ ಕೆಲಸ ಕೊಡಿಸಿದ ಡಿಕೆಶಿ

ಯಲಹಂಕದ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ದಿವ್ಯಾಂಜಲಿ ಅವರು, ‘ನನಗೆ ಕಣ್ಣು ಕಾಣಲ್ಲ, ಹಾಗಾಗಿ ಎಲ್ಲೂ ಕೆಲಸ ಸಿಗುತ್ತಿಲ್ಲ. ಹೀಗಾಗಿ ಕೆಲಸ ಕೊಡಿಸುವಂತೆ ಡಿಕೆ ಶಿವಕುಮಾರ್​ ಅವರಿಗೆ ಮನವಿ ಮಾಡಿಕೊಂಡಿದ್ದರು. ಕೂಡಲೇ ಮನವಿಗೆ ಸ್ಪಂಧಿಸಿದ ಡಿಸಿಎಂ, ಸ್ಥಳದಲ್ಲಿಯೇ ದಿವ್ಯಾಂಜಲಿಗೆ BBMP ಕೆಲಸ ಕೊಡಿಸಿದ್ದಾರೆ. ಹೌದು, ದಿವ್ಯಾಂಜಲಿ ಅವರ ಪದವಿ ಸರ್ಟಿಫಿಕೇಟ್ ಪರಿಶೀಲಿಸಿ, ಬಿಬಿಎಂಪಿ ಅಧಿಕಾರಿಗಳಿಗೆ ಕೆಲಸಕೊಡುವಂತೆ ತಾಕೀತು ಮಾಡಿದ್ದಲ್ಲದೆ, ಕಾಲ್ ಸೆಂಟರ್ ಅಥವಾ ಕೂತು ಮಾಡುವ ಕೆಲಸವನ್ನೇ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಜನಸ್ಪಂದನ: ಜನರು ಕೊಟ್ಟ ಅರ್ಜಿಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ: ಡಿಕೆ ಶಿವಕುಮಾರ್

ಇದೇ ಜನವರಿ.03 ರಿಂದ ಬೆಂಗಳೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಿಬಿಎಂಪಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ‘ಸುಮಾರು 10 ದಿನ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ನಾನು, ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದೇವೆ ಎಂದಿದ್ದರು. ಅದರಂತೆ ಜನರ ಸಮಸ್ಯೆಗಳಿಗೆ ಸ್ಪಂಧಿಸಿದ ಅವರು ಸ್ಥಳದಲ್ಲೇ ಆದಷ್ಟು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Fri, 5 January 24

ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ