AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್ ಗೂಂಡಾ ರೀತಿ ವರ್ತಿಸುತ್ತಿದ್ದಾರೆ -ಅಶ್ವತ್ಥ್ ನಾರಾಯಣ್

ರಾಮನಗರ: ಡಿ.ಕೆ ಸುರೇಶ್ ಅವರು ತಮ್ಮ ಮಾನಸಿಕ ಸ್ಥಿತಿ ಕಳೆದುಕೊಂಡು ಮಾತನಾಡಿದ್ದಾರೆ. ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಾಗಿ ಕೆಲಸ‌ ಮಾಡಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಹಿಡಿತಕ್ಕೆ ಬರುತ್ತಿಲ್ಲ ಎಂದು ಕೂಗಾಡಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಬ್ಬಾಳಮ್ಮ ದೇವಾಲಯದಲ್ಲಿ ಎಸ್ಪಿ ಅನೂಪ್ ಶೆಟ್ಟಿ ವಿರುದ್ಧ ಹೀಗೆ ಮಾತನಾಡಿದ್ದರು. ಎಸ್ಪಿ ಅನೂಪ್ ಶೆಟ್ಟಿ ಹಾಗೂ ಅಧಿಕಾರಿಗಳ ವಿರುದ್ಧ ಸಂಸದ ಡಿ‌ಕೆ ಸುರೇಶ್ ಗರಂ ಆದ ವಿಚಾರ ಸಂಬಂಧಿಸಿ ರಾಮನಗರದಲ್ಲಿ ಬಿಜೆಪಿ ಮುಖಂಡರು ಇಂದು ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ […]

ಡಿಕೆ ಸುರೇಶ್ ಗೂಂಡಾ ರೀತಿ ವರ್ತಿಸುತ್ತಿದ್ದಾರೆ -ಅಶ್ವತ್ಥ್ ನಾರಾಯಣ್
ಸಾಧು ಶ್ರೀನಾಥ್​
|

Updated on: Dec 02, 2019 | 4:39 PM

Share

ರಾಮನಗರ: ಡಿ.ಕೆ ಸುರೇಶ್ ಅವರು ತಮ್ಮ ಮಾನಸಿಕ ಸ್ಥಿತಿ ಕಳೆದುಕೊಂಡು ಮಾತನಾಡಿದ್ದಾರೆ. ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಾಗಿ ಕೆಲಸ‌ ಮಾಡಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಹಿಡಿತಕ್ಕೆ ಬರುತ್ತಿಲ್ಲ ಎಂದು ಕೂಗಾಡಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಬ್ಬಾಳಮ್ಮ ದೇವಾಲಯದಲ್ಲಿ ಎಸ್ಪಿ ಅನೂಪ್ ಶೆಟ್ಟಿ ವಿರುದ್ಧ ಹೀಗೆ ಮಾತನಾಡಿದ್ದರು. ಎಸ್ಪಿ ಅನೂಪ್ ಶೆಟ್ಟಿ ಹಾಗೂ ಅಧಿಕಾರಿಗಳ ವಿರುದ್ಧ ಸಂಸದ ಡಿ‌ಕೆ ಸುರೇಶ್ ಗರಂ ಆದ ವಿಚಾರ ಸಂಬಂಧಿಸಿ ರಾಮನಗರದಲ್ಲಿ ಬಿಜೆಪಿ ಮುಖಂಡರು ಇಂದು ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣ್ ಡಿ.ಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಾಮಾಣಿಕವಾಗಿ ಕೆಲಸ‌ ಮಾಡುವ ಅಧಿಕಾರಿ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ. ದಂಧೆಗಳಿಗೆ ಸಹಕಾರ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳ ವಿರುದ್ದ ಡಿ.ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳನ್ನ ಹಿಡಿತದಲ್ಲಿ ಇಟ್ಟುಕೊಳ್ಳೋದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಡಿಕೆ ಬ್ರದರ್ಸ್ ವಿರುದ್ಧ ಹರಿಹಾಯ್ದಿದ್ದಾರೆ.

ಡಿ.ಕೆ.ಸುರೇಶ್ ಅಧಿಕಾರಿಗಳ ಕ್ಷಮೆ ಕೋರಬೇಕು: ಡಿಕೆ ಬ್ರದರ್ಸ್ ಹತಾಶೆಗೆ ಒಳಗಾಗಿದ್ದಾರೆ. ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಡಿಕೆ ಬ್ರದರ್ಸ್ ಮಾಡುವ ಅಕ್ರಮ ದಂಧೆಗೆ ಸಹಕಾರ ನೀಡದ ಹಿನ್ನೆಲೆ ಪ್ರಾಮಾಣಿಕ ಅಧಿಕಾರಿಗಳಿಗೆ ಸಭೆಯಲ್ಲಿ ಧಮ್ಕಿ ಹಾಕುತ್ತಿದ್ದಾರೆ. ಗೂಂಡಾ ರೀತಿ ಡಿಕೆ ಸುರೇಶ್ ವರ್ತಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಡಿಕೆ ಬ್ರದರ್ಸ್ ಹೇಳಿದ ಹಾಗೆ ಕೇಳಬೇಕು. ಇಲ್ಲ ಅಂದ್ರೆ ಅವರ ವಿರುದ್ಧ ಹೇಳಿಕೆ ನೀಡುತ್ತಾರೆ. ಈ ಕೂಡಲೆ ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳ ಕ್ಷಮೆ ಕೋರಬೇಕು. ಎಸ್ಪಿ ಅನೂಪ್ ಶೆಟ್ಟಿ ವರ್ಗಾವಣೆ ಮಾಡಿಸಿದ್ರೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ