AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

ಬೆಂಗಳೂರು: ಇಷ್ಟು ದಿನ ಡಿಸಿಎಂ ಎಂದು ಗೌರವ ಕೊಟ್ಟು ನಾನು ಸುಮ್ನಿದ್ದೆ. ಅವನು ನಾಲಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್‌ರನ್ನ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ಮೀರ್‌ ಸಾದಿಕ್‌ಗೆ ಹೋಲಿಕೆ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರ ಸಹೋದರ ಸಂಸದ ಡಿ.ಕೆ.ಸುರೇಶ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಯಾರೇ ಆದ್ರೂ ಬೈಎಲೆಕ್ಷನ್​ ವಿಚಾರದ ಬಗ್ಗೆ ಮಾತಾಡಬೇಕು. ಮೀರ್ ಸಾದಿಕ್ ಯಾರೆಂದು ಬಿಜೆಪಿಯ ಎಲ್ಲರಿಗೂ ಗೊತ್ತಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸ್ಥಾನದಿಂದ ಬಿಎಸ್​ವೈನ […]

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?
KUSHAL V
|

Updated on:Oct 20, 2020 | 5:41 PM

Share

ಬೆಂಗಳೂರು: ಇಷ್ಟು ದಿನ ಡಿಸಿಎಂ ಎಂದು ಗೌರವ ಕೊಟ್ಟು ನಾನು ಸುಮ್ನಿದ್ದೆ. ಅವನು ನಾಲಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್‌ರನ್ನ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ಮೀರ್‌ ಸಾದಿಕ್‌ಗೆ ಹೋಲಿಕೆ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರ ಸಹೋದರ ಸಂಸದ ಡಿ.ಕೆ.ಸುರೇಶ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಯಾರೇ ಆದ್ರೂ ಬೈಎಲೆಕ್ಷನ್​ ವಿಚಾರದ ಬಗ್ಗೆ ಮಾತಾಡಬೇಕು. ಮೀರ್ ಸಾದಿಕ್ ಯಾರೆಂದು ಬಿಜೆಪಿಯ ಎಲ್ಲರಿಗೂ ಗೊತ್ತಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸ್ಥಾನದಿಂದ ಬಿಎಸ್​ವೈನ ಇಳಿಸಲು ಹಿಂಬಾಗಿಲಿಂದ ಯತ್ನ ನಡೆಸಲಾಗುತ್ತಿದೆ. ಯಾರು ಯಾರ ಮನೆ ಬಾಗಿಲು ತಟ್ಟುತ್ತಿದ್ದಾರೆಂದು ಗೊತ್ತಿದೆ. ಹಾಗಾಗಿ, ಮೀರ್ ಸಾದಿಕ್ ಯಾರೆಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಸುರೇಶ್​ ತಿರುಗೇಟು ನೀಡಿದ್ದಾರೆ.

‘ಮಿತ್ರ ಮಂಡಳಿ’ ಜನ ಏನೆಲ್ಲ ಲೂಟಿ ಮಾಡಿದ್ದಾರೆಂದು ಗೊತ್ತು ‘ಮಿತ್ರ ಮಂಡಳಿ’ ಜನ ಏನೆಲ್ಲ ಲೂಟಿ ಮಾಡಿದ್ದಾರೆಂದು ಗೊತ್ತು. ಅಷ್ಟ ದಿಕ್ಪಾಲಕರು, ಪಾಂಡವರಿಂದ ಕೋಟಿ ಕೋಟಿ ಲೂಟಿ ಆಗಿದೆ. 2 ಸಾವಿರ ಕೋಟಿ ಲೂಟಿ ಹೊಡೆದಿರುವ ಬಗ್ಗೆ ಮೊದಲು ಉತ್ತರ ಕೊಡಲಿ. ಇದು ಲೂಟಿಕೋರರ ಸರ್ಕಾರವೇ ಹೊರತು ಬೇರೆ ಏನಿಲ್ಲ ಎಂದು ಖಾರವಾಗಿ ಮಾತನಾಡಿದರು.

ಮೀರ್ ಸಾದಿಕ್​ತನದ ನಾಯಕತ್ವ ವಹಿಸಿರುವವನೇ ಇವನು. ನಾನು ಅವನ ಹೆಸರು ಹೇಳುವುದಿಲ್ಲವೆಂದು ಎಂದು ಸುರೇಶ್ ನೇರವಾಗಿ ವಾಗ್ದಾಳಿ ನಡೆಸಿದರು. ಅದೇನೋ ಆಡಿಯೋ ಅಂತೆ, ನಾಳೆಯೇ ಬಿಡುಗಡೆ ಮಾಡಲಿ. ಇವನಿಗೆ ಡಿಕೆಶಿ ಬಳಿ ಪ್ರಮಾಣ ಮಾಡಿಸುವ ಯೋಗ್ಯತೆ ಏನಿದೆ. ಚಿಕ್ಕವಯಸ್ಸಿಗೆ ಬಿಜೆಪಿಯವರು ಏನೋ ಅವಕಾಶ ನೀಡಿದ್ದಾರೆ ಎಂದು ಸುರೇಶ್​ಗೆ ಡಿಸಿಎಂಗೆ ಏಕವಚನದಲ್ಲೇ ಉದ್ದೇಶಿಸಿದ್ದಾರೆ.

ಮೀರ್ ಸಾದಿಕ್​ತನ ಬಿಜೆಪಿಯವರಿಗೆ ಸಂಬಂಧಿಸಿರುವುದು. ಸಿಎಂ ಬಿಎಸ್​ವೈರನ್ನು ಇಳಿಸಲು ಮೀರ್ ಸಾದಿಕ್​ತನ ಮಾಡಿ ಮೀಡಿಯಾ ಮುಂದೆ ಪ್ರಾಮಾಣಿಕನಂತೆ ಪೋಸ್​ ಕೊಡೋದು ಅವನು. ಬೆಂಗಳೂರಿನ ಅಭಿವೃದ್ಧಿ ಮೀಸಲಿಟ್ಟ ಹಣ ಲೂಟಿ ಮಾಡಿದ್ದಾರೆ.

ಕೊರೊನಾ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದು ಬೇಕಿದ್ರೆ ನಿಮ್ಮ ಜೀವ ನೀವೇ ಉಳಿಸಿಕೊಳ್ಳಿರೆಂದು ಹೇಳುತ್ತಾರೆ. ಇವರಿಗೆ ಕೇಂದ್ರದಿಂದ ಪರಿಹಾರ ತರುವ ಯೋಗ್ಯತೆಯೇ ಇಲ್ಲ. ಸಾರ್ವಜನಿಕರ ತೆರಿಗೆ ಹಣ ಲೂಟಿ ಹೊಡೆಯುವುದೇ ಕಾಯಕ. ಇದೊಂದು ಲೂಟಿಕೋರರ ಸರ್ಕಾರವೆಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

Published On - 4:16 pm, Tue, 20 October 20

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!