AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

ಬೆಂಗಳೂರು: ಇಷ್ಟು ದಿನ ಡಿಸಿಎಂ ಎಂದು ಗೌರವ ಕೊಟ್ಟು ನಾನು ಸುಮ್ನಿದ್ದೆ. ಅವನು ನಾಲಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್‌ರನ್ನ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ಮೀರ್‌ ಸಾದಿಕ್‌ಗೆ ಹೋಲಿಕೆ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರ ಸಹೋದರ ಸಂಸದ ಡಿ.ಕೆ.ಸುರೇಶ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಯಾರೇ ಆದ್ರೂ ಬೈಎಲೆಕ್ಷನ್​ ವಿಚಾರದ ಬಗ್ಗೆ ಮಾತಾಡಬೇಕು. ಮೀರ್ ಸಾದಿಕ್ ಯಾರೆಂದು ಬಿಜೆಪಿಯ ಎಲ್ಲರಿಗೂ ಗೊತ್ತಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸ್ಥಾನದಿಂದ ಬಿಎಸ್​ವೈನ […]

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?
KUSHAL V
|

Updated on:Oct 20, 2020 | 5:41 PM

Share

ಬೆಂಗಳೂರು: ಇಷ್ಟು ದಿನ ಡಿಸಿಎಂ ಎಂದು ಗೌರವ ಕೊಟ್ಟು ನಾನು ಸುಮ್ನಿದ್ದೆ. ಅವನು ನಾಲಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್‌ರನ್ನ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ಮೀರ್‌ ಸಾದಿಕ್‌ಗೆ ಹೋಲಿಕೆ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರ ಸಹೋದರ ಸಂಸದ ಡಿ.ಕೆ.ಸುರೇಶ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಯಾರೇ ಆದ್ರೂ ಬೈಎಲೆಕ್ಷನ್​ ವಿಚಾರದ ಬಗ್ಗೆ ಮಾತಾಡಬೇಕು. ಮೀರ್ ಸಾದಿಕ್ ಯಾರೆಂದು ಬಿಜೆಪಿಯ ಎಲ್ಲರಿಗೂ ಗೊತ್ತಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸ್ಥಾನದಿಂದ ಬಿಎಸ್​ವೈನ ಇಳಿಸಲು ಹಿಂಬಾಗಿಲಿಂದ ಯತ್ನ ನಡೆಸಲಾಗುತ್ತಿದೆ. ಯಾರು ಯಾರ ಮನೆ ಬಾಗಿಲು ತಟ್ಟುತ್ತಿದ್ದಾರೆಂದು ಗೊತ್ತಿದೆ. ಹಾಗಾಗಿ, ಮೀರ್ ಸಾದಿಕ್ ಯಾರೆಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಸುರೇಶ್​ ತಿರುಗೇಟು ನೀಡಿದ್ದಾರೆ.

‘ಮಿತ್ರ ಮಂಡಳಿ’ ಜನ ಏನೆಲ್ಲ ಲೂಟಿ ಮಾಡಿದ್ದಾರೆಂದು ಗೊತ್ತು ‘ಮಿತ್ರ ಮಂಡಳಿ’ ಜನ ಏನೆಲ್ಲ ಲೂಟಿ ಮಾಡಿದ್ದಾರೆಂದು ಗೊತ್ತು. ಅಷ್ಟ ದಿಕ್ಪಾಲಕರು, ಪಾಂಡವರಿಂದ ಕೋಟಿ ಕೋಟಿ ಲೂಟಿ ಆಗಿದೆ. 2 ಸಾವಿರ ಕೋಟಿ ಲೂಟಿ ಹೊಡೆದಿರುವ ಬಗ್ಗೆ ಮೊದಲು ಉತ್ತರ ಕೊಡಲಿ. ಇದು ಲೂಟಿಕೋರರ ಸರ್ಕಾರವೇ ಹೊರತು ಬೇರೆ ಏನಿಲ್ಲ ಎಂದು ಖಾರವಾಗಿ ಮಾತನಾಡಿದರು.

ಮೀರ್ ಸಾದಿಕ್​ತನದ ನಾಯಕತ್ವ ವಹಿಸಿರುವವನೇ ಇವನು. ನಾನು ಅವನ ಹೆಸರು ಹೇಳುವುದಿಲ್ಲವೆಂದು ಎಂದು ಸುರೇಶ್ ನೇರವಾಗಿ ವಾಗ್ದಾಳಿ ನಡೆಸಿದರು. ಅದೇನೋ ಆಡಿಯೋ ಅಂತೆ, ನಾಳೆಯೇ ಬಿಡುಗಡೆ ಮಾಡಲಿ. ಇವನಿಗೆ ಡಿಕೆಶಿ ಬಳಿ ಪ್ರಮಾಣ ಮಾಡಿಸುವ ಯೋಗ್ಯತೆ ಏನಿದೆ. ಚಿಕ್ಕವಯಸ್ಸಿಗೆ ಬಿಜೆಪಿಯವರು ಏನೋ ಅವಕಾಶ ನೀಡಿದ್ದಾರೆ ಎಂದು ಸುರೇಶ್​ಗೆ ಡಿಸಿಎಂಗೆ ಏಕವಚನದಲ್ಲೇ ಉದ್ದೇಶಿಸಿದ್ದಾರೆ.

ಮೀರ್ ಸಾದಿಕ್​ತನ ಬಿಜೆಪಿಯವರಿಗೆ ಸಂಬಂಧಿಸಿರುವುದು. ಸಿಎಂ ಬಿಎಸ್​ವೈರನ್ನು ಇಳಿಸಲು ಮೀರ್ ಸಾದಿಕ್​ತನ ಮಾಡಿ ಮೀಡಿಯಾ ಮುಂದೆ ಪ್ರಾಮಾಣಿಕನಂತೆ ಪೋಸ್​ ಕೊಡೋದು ಅವನು. ಬೆಂಗಳೂರಿನ ಅಭಿವೃದ್ಧಿ ಮೀಸಲಿಟ್ಟ ಹಣ ಲೂಟಿ ಮಾಡಿದ್ದಾರೆ.

ಕೊರೊನಾ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದು ಬೇಕಿದ್ರೆ ನಿಮ್ಮ ಜೀವ ನೀವೇ ಉಳಿಸಿಕೊಳ್ಳಿರೆಂದು ಹೇಳುತ್ತಾರೆ. ಇವರಿಗೆ ಕೇಂದ್ರದಿಂದ ಪರಿಹಾರ ತರುವ ಯೋಗ್ಯತೆಯೇ ಇಲ್ಲ. ಸಾರ್ವಜನಿಕರ ತೆರಿಗೆ ಹಣ ಲೂಟಿ ಹೊಡೆಯುವುದೇ ಕಾಯಕ. ಇದೊಂದು ಲೂಟಿಕೋರರ ಸರ್ಕಾರವೆಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

Published On - 4:16 pm, Tue, 20 October 20

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ