AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

ಬೆಂಗಳೂರು: ಇಷ್ಟು ದಿನ ಡಿಸಿಎಂ ಎಂದು ಗೌರವ ಕೊಟ್ಟು ನಾನು ಸುಮ್ನಿದ್ದೆ. ಅವನು ನಾಲಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್‌ರನ್ನ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ಮೀರ್‌ ಸಾದಿಕ್‌ಗೆ ಹೋಲಿಕೆ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರ ಸಹೋದರ ಸಂಸದ ಡಿ.ಕೆ.ಸುರೇಶ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಯಾರೇ ಆದ್ರೂ ಬೈಎಲೆಕ್ಷನ್​ ವಿಚಾರದ ಬಗ್ಗೆ ಮಾತಾಡಬೇಕು. ಮೀರ್ ಸಾದಿಕ್ ಯಾರೆಂದು ಬಿಜೆಪಿಯ ಎಲ್ಲರಿಗೂ ಗೊತ್ತಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸ್ಥಾನದಿಂದ ಬಿಎಸ್​ವೈನ […]

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?
KUSHAL V
|

Updated on:Oct 20, 2020 | 5:41 PM

Share

ಬೆಂಗಳೂರು: ಇಷ್ಟು ದಿನ ಡಿಸಿಎಂ ಎಂದು ಗೌರವ ಕೊಟ್ಟು ನಾನು ಸುಮ್ನಿದ್ದೆ. ಅವನು ನಾಲಗೆ ಬಿಗಿ ಹಿಡಿದು ಮಾತನಾಡಲಿ ಎಂದು ಡಿ.ಕೆ.ಶಿವಕುಮಾರ್‌ರನ್ನ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ಮೀರ್‌ ಸಾದಿಕ್‌ಗೆ ಹೋಲಿಕೆ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರ ಸಹೋದರ ಸಂಸದ ಡಿ.ಕೆ.ಸುರೇಶ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಯಾರೇ ಆದ್ರೂ ಬೈಎಲೆಕ್ಷನ್​ ವಿಚಾರದ ಬಗ್ಗೆ ಮಾತಾಡಬೇಕು. ಮೀರ್ ಸಾದಿಕ್ ಯಾರೆಂದು ಬಿಜೆಪಿಯ ಎಲ್ಲರಿಗೂ ಗೊತ್ತಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸ್ಥಾನದಿಂದ ಬಿಎಸ್​ವೈನ ಇಳಿಸಲು ಹಿಂಬಾಗಿಲಿಂದ ಯತ್ನ ನಡೆಸಲಾಗುತ್ತಿದೆ. ಯಾರು ಯಾರ ಮನೆ ಬಾಗಿಲು ತಟ್ಟುತ್ತಿದ್ದಾರೆಂದು ಗೊತ್ತಿದೆ. ಹಾಗಾಗಿ, ಮೀರ್ ಸಾದಿಕ್ ಯಾರೆಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಸುರೇಶ್​ ತಿರುಗೇಟು ನೀಡಿದ್ದಾರೆ.

‘ಮಿತ್ರ ಮಂಡಳಿ’ ಜನ ಏನೆಲ್ಲ ಲೂಟಿ ಮಾಡಿದ್ದಾರೆಂದು ಗೊತ್ತು ‘ಮಿತ್ರ ಮಂಡಳಿ’ ಜನ ಏನೆಲ್ಲ ಲೂಟಿ ಮಾಡಿದ್ದಾರೆಂದು ಗೊತ್ತು. ಅಷ್ಟ ದಿಕ್ಪಾಲಕರು, ಪಾಂಡವರಿಂದ ಕೋಟಿ ಕೋಟಿ ಲೂಟಿ ಆಗಿದೆ. 2 ಸಾವಿರ ಕೋಟಿ ಲೂಟಿ ಹೊಡೆದಿರುವ ಬಗ್ಗೆ ಮೊದಲು ಉತ್ತರ ಕೊಡಲಿ. ಇದು ಲೂಟಿಕೋರರ ಸರ್ಕಾರವೇ ಹೊರತು ಬೇರೆ ಏನಿಲ್ಲ ಎಂದು ಖಾರವಾಗಿ ಮಾತನಾಡಿದರು.

ಮೀರ್ ಸಾದಿಕ್​ತನದ ನಾಯಕತ್ವ ವಹಿಸಿರುವವನೇ ಇವನು. ನಾನು ಅವನ ಹೆಸರು ಹೇಳುವುದಿಲ್ಲವೆಂದು ಎಂದು ಸುರೇಶ್ ನೇರವಾಗಿ ವಾಗ್ದಾಳಿ ನಡೆಸಿದರು. ಅದೇನೋ ಆಡಿಯೋ ಅಂತೆ, ನಾಳೆಯೇ ಬಿಡುಗಡೆ ಮಾಡಲಿ. ಇವನಿಗೆ ಡಿಕೆಶಿ ಬಳಿ ಪ್ರಮಾಣ ಮಾಡಿಸುವ ಯೋಗ್ಯತೆ ಏನಿದೆ. ಚಿಕ್ಕವಯಸ್ಸಿಗೆ ಬಿಜೆಪಿಯವರು ಏನೋ ಅವಕಾಶ ನೀಡಿದ್ದಾರೆ ಎಂದು ಸುರೇಶ್​ಗೆ ಡಿಸಿಎಂಗೆ ಏಕವಚನದಲ್ಲೇ ಉದ್ದೇಶಿಸಿದ್ದಾರೆ.

ಮೀರ್ ಸಾದಿಕ್​ತನ ಬಿಜೆಪಿಯವರಿಗೆ ಸಂಬಂಧಿಸಿರುವುದು. ಸಿಎಂ ಬಿಎಸ್​ವೈರನ್ನು ಇಳಿಸಲು ಮೀರ್ ಸಾದಿಕ್​ತನ ಮಾಡಿ ಮೀಡಿಯಾ ಮುಂದೆ ಪ್ರಾಮಾಣಿಕನಂತೆ ಪೋಸ್​ ಕೊಡೋದು ಅವನು. ಬೆಂಗಳೂರಿನ ಅಭಿವೃದ್ಧಿ ಮೀಸಲಿಟ್ಟ ಹಣ ಲೂಟಿ ಮಾಡಿದ್ದಾರೆ.

ಕೊರೊನಾ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದು ಬೇಕಿದ್ರೆ ನಿಮ್ಮ ಜೀವ ನೀವೇ ಉಳಿಸಿಕೊಳ್ಳಿರೆಂದು ಹೇಳುತ್ತಾರೆ. ಇವರಿಗೆ ಕೇಂದ್ರದಿಂದ ಪರಿಹಾರ ತರುವ ಯೋಗ್ಯತೆಯೇ ಇಲ್ಲ. ಸಾರ್ವಜನಿಕರ ತೆರಿಗೆ ಹಣ ಲೂಟಿ ಹೊಡೆಯುವುದೇ ಕಾಯಕ. ಇದೊಂದು ಲೂಟಿಕೋರರ ಸರ್ಕಾರವೆಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

Published On - 4:16 pm, Tue, 20 October 20

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ