AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಮಂಜುನಾಥ್ H.D.ದೇವೇಗೌಡ ಕುಟುಂಬದ ಮತ್ತೊಂದು ಭಾಗ, JDS ಬಿಟ್ಟು ಅಳಿಯ ಬಿಜೆಪಿ ಸೇರಿದ್ದೇಕೋ? -ಡಿಕೆ ಸುರೇಶ್

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ, ಈಗಲೇ ರಂಗೇರಿದೆ. ಅದಕ್ಕೆ ಕಾರಣ, ಡಿ.ಕೆ.ಸುರೇಶ್ ವಿರುದ್ಧ ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ, ಹೃದಯವಂತ ಅಂತಾನೇ ಖ್ಯಾತಿ ಪಡೆದಿರೋ ಡಾ.ಸಿ.ಎನ್​.ಮಂಜುನಾಥ್ ಸ್ಪರ್ಧಿಸ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಕೆ ಸುರೇಶ್, ಡಾ.ಮಂಜುನಾಥ್​ H.D.ದೇವೇಗೌಡರ ಕುಟುಂಬದ ಮತ್ತೊಂದು ಭಾಗ. JDS ಪಕ್ಷ ಸರಿಯಿಲ್ಲ ಎಂದು ಅಳಿಯ ಬಿಜೆಪಿ ಸೇರಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಡಾ.ಮಂಜುನಾಥ್ H.D.ದೇವೇಗೌಡ ಕುಟುಂಬದ ಮತ್ತೊಂದು ಭಾಗ, JDS ಬಿಟ್ಟು ಅಳಿಯ ಬಿಜೆಪಿ ಸೇರಿದ್ದೇಕೋ? -ಡಿಕೆ ಸುರೇಶ್
ಡಿಕೆ ಸುರೇಶ್, ಡಾ.ಮಂಜುನಾಥ್
TV9 Web
| Edited By: |

Updated on:Mar 14, 2024 | 1:43 PM

Share

ಬೆಂಗಳೂರು, ಮಾರ್ಚ್​.14: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ. ಮಂಜುನಾಥ್ (Dr CN Manjunath) ಅವರಿಗೆ ಬಿಜೆಪಿ ಲೋಕ ಸಭಾ ಚುನಾವಣೆ ಟಿಕೆಟ್ ನೀಡಿದೆ. ಈ ಸಂಬಂಧ ಮಾತನಾಡಿದ ಸಂಸದ ಡಿಕೆ ಸುರೇಶ್ (DK Suresh), ಬೆಂಗಳೂರು ಗ್ರಾ. ಬಿಜೆಪಿ ಅಭ್ಯರ್ಥಿ ನನಗೇನು ಅಚ್ಚರಿಯಲ್ಲ. ಡಾ.ಮಂಜುನಾಥ್​ H.D.ದೇವೇಗೌಡರ ಕುಟುಂಬದ ಮತ್ತೊಂದು ಭಾಗ. JDS ಪಕ್ಷ ಸರಿಯಿಲ್ಲ ಎಂದು ಅಳಿಯ ಬಿಜೆಪಿ ಸೇರಿದ್ದಾರೆ ಎಂದರು.

ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು. ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ. ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ. ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆ ಎದ್ದಿದೆ. ದೇವೇಗೌಡರ ಪಾರ್ಟಿ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ. ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ ಎಂದು ಡಿಕೆ ಸುರೇಶ್ ತಿಳಿಸಿದರು.

ಇದನ್ನೂ ಓದಿ: ನಮ್ಮ ನೋವು ಅರ್ಥವಾದರೆ ಜೀವಂತವಾಗಿದ್ದೇವೆ, ಬೇರೆಯವರ ನೋವು ಅರ್ಥವಾದರೆ ಮನುಷ್ಯರಾಗಿದ್ದೇವೆ ಅಂತರ್ಥ: ಡಾ ಸಿಎನ್ ಮಂಜುನಾಥ್

ಮಂಜುನಾಥ್ ಅವರ ಸ್ಪರ್ಧೆ ವಿಚಾರವಾಗಿ ಹಾಸನದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಾವ್ಯಾರೂ ಅವರನ್ನ ರಾಜಕೀಯಕ್ಕೆ ತರೋ ಚಿಂತೆಯೇ ಇರಲಿಲ್ಲ. ಆದ್ರೆ ಬಿಜೆಪಿ ಹೈಕಮಾಂಡ್ ನಮ್ಮ ಮೇಲೆ ಒತ್ತಡ ಹೇರಿ, ಸ್ಪರ್ಧೆ ಮಾಡುವಂತೆ ಮನವೊಲಿಸಲು ಹೇಳಿತ್ತು ಎಂದು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಬಾರಿ ಮತ್ತೆ ಹೈವೋಲ್ಟೇಜ್ ಅಖಾಡವಾಗಿ ಬದಲಾಗಿದೆ. ಡಿ.ಕೆ.ಸುರೇಶ್ ಅವರ ಕ್ಷೇತ್ರವಾಗಿರೋದ್ರಿಂದ ಒನ್​ಸೈಡ್ ಮ್ಯಾಚ್, ಅವರೇ ಗೆಲುವಿನ ಫೆವರಿಟ್ ಅನ್ನೋ ಮಾತು ಈ ಬಾರಿ ಕೊಂಚ ಬದಲಾಗ್ತಿದೆ. ಅದಕ್ಕೆ ಕಾರಣ, ಈ ಬಾರಿ ಡಿ.ಕೆ.ಸುರೇಶ್ ವಿರುದ್ಧ ಡಾಕ್ಟರ್ ಮಂಜುನಾಥ್ ಸ್ಪರ್ಧೆ ಮಾಡ್ತಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ಅವರ ಹೆಸರು ಅಧಿಕೃತ ಘೋಷಣೆಗೂ ಮುನ್ನವೇ, ಬಿಜೆಪಿ ಪ್ರಚಾರ ಸಭೆಗಳ ಪೋಸ್ಟರ್​ಗಳಲ್ಲಿ ಮುನಿರತ್ನ ಫೋಟೋ ಜೊತೆ ಮಂಜುನಾಥ್ ಭಾವಚಿತ್ರವೂ ಸೇರ್ಪಡೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:12 pm, Thu, 14 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್