
ಶಿವಕುಮಾರಗಿಂತ ಮೊದಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಸೋಂಕಿಗೊಳಗಾಗಿದ್ದರು ಎನ್ನುವುದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದಾಗಿದೆ.
ಪಕ್ಷದ ಕಾರ್ಯಕರ್ತರು ಹಾಗೂ ಜನರೊಂದಿಗೆ ಜಾಸ್ತಿ ಬೆರೆಯುತ್ತಿರುವ ನಾಯಕರೆಲ್ಲ ಒಬ್ಬೊಬ್ಬರಾಗಿ ಕೊವಿಡ್-19 ಸೋಂಕಿಗೀಡಾಗುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ರಾಜ್ಯ ಬಿಜೆಪಿ ಘಟಕದ ಅದ್ಯಕ್ಷ ನಳಿನ್ ಕುಮಾರ್ ಕಟೀಲ್. ಅವರು ಸೋಂಕು ತಗುಲಿಸಿಕೊಂಡಿರುವ ಬಗ್ಗೆ ರವಿರಾರದಂದು ವರದಿಯಾಗಿದೆ.