AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ತಿ ಶುಲ್ಕ ಪಾವತಿಗೆ ಒತ್ತಡ ಹೇರಬೇಡಿ ಎಂದು ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ: ಸಚಿವ ಸುರೇಶ್ ಸ್ವಾಗತ

ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಒಕ್ಕೂಟದ ಸದಸ್ಯ ಶಾಲೆಗಳಿಗೆ ಮನವಿ ಮಾಡಿದ್ದಾರೆ. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ ಎಂದು ಕೇಳಿಕೊಂಡಿದ್ದಾರೆ.

ಪೂರ್ತಿ ಶುಲ್ಕ ಪಾವತಿಗೆ ಒತ್ತಡ ಹೇರಬೇಡಿ ಎಂದು ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ: ಸಚಿವ ಸುರೇಶ್ ಸ್ವಾಗತ
ಡಿ. ಶಶಿಕುಮಾರ್
TV9 Web
| Edited By: |

Updated on:Apr 06, 2022 | 10:58 PM

Share

ಬೆಂಗಳೂರು: ಸಂಪೂರ್ಣ ಶುಲ್ಕ ಪಾವತಿಗೆ ಪೋಷಕರಿಗೆ ಒತ್ತಡ ಹೇರಬೇಡಿ. ಈ ವರ್ಷ ಖರ್ಚುವೆಚ್ಚದ ಆಧಾರದಲ್ಲಿ ಶುಲ್ಕ ನಿಗದಿ ಮಾಡಿ. ಬಲವಂತವಾಗಿ ಶುಲ್ಕ ಪಾವತಿ ಮಾಡಿ ಎನ್ನುವುದು ಸರಿಯಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟದಿಂದ (ಕ್ಯಾಮ್ಸ್) ಸದಸ್ಯ ಶಾಲೆಗಳಿಗೆ ಇಂದು (ಜ.6) ಮನವಿ ಮಾಡಿದ್ದಾರೆ.

ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಒಕ್ಕೂಟದ ಸದಸ್ಯ ಶಾಲೆಗಳಿಗೆ ಮನವಿ ಮಾಡಿದ್ದಾರೆ. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ ಎಂದು ಕೇಳಿಕೊಂಡಿದ್ದಾರೆ. ಕೊರೊನಾ ಲಾಕ್​ಡೌನ್ ಕಾರಣದಿಂದ ಶಾಲಾ ಕಾಲೇಜುಗಳ ಮುಚ್ಚಿದ್ದವು. ಆನ್​ಲೈನ್ ತರಗತಿಗಳನ್ನು ನಡೆಸಿದ್ದವು. ಈ ನಡುವೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕ ಪೋಷಕರಿಗೆ ಸಂಪೂರ್ಣ ಪ್ರಮಾಣದ ಶುಲ್ಕ ಭರಿಸುವಂತೆ ತಿಳಿಸಿದ್ದು, ಹೆತ್ತವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಕಾರಣದಿಂದ ಶಾಲಾ ಆಡಳಿತ ಮಂಡಳಿಗಳಿಗೆ ಡಿ. ಶಶಿಕುಮಾರ್ ಮನವಿ ಮಾಡಿದ್ದಾರೆ.

ಈ ವರ್ಷ ಅನೇಕ ಶೈಕ್ಷಣಿಕ ಚಟುವಟಿಕೆಗಳು ನಡೆಯುವುದಿಲ್ಲ. ಹೀಗಾಗಿ ಪಠ್ಯಕ್ರಮ ಅಥವಾ ಪಠ್ಯೇತರ ಚಟುವಟಿಕೆಗಳಿಗೆ ಶುಲ್ಕ ನಿಗಧಿ ಪಡಿಸಿದ್ದರೆ ಅದನ್ನು ಕೈಬಿಡಬೇಕು. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ. ಪಾಲಕ-ಪೋಷಕರಂದಿಗೆ ಚರ್ಚೆ ನಡೆಸಿ ಶುಲ್ಕ ರಿಯಾಯಿತಿ ನೀಡಬೇಕು ಎಂದು ಶಶಿಕುಮಾರ್ ಮನವಿ ಮಾಡಿದ್ದಾರೆ. ಎಲ್ಲಾ ಶಾಲೆಗಳು ತಮ್ಮ ಶಾಲೆಗಳ ಮಕ್ಕಳ ಪೋಷಕರ ಆರ್ಥಿಕ ಸ್ಥಿತಿಯನ್ನು ಅರಿಯಬೇಕು. ಇದರ ಜೊತೆಗೆ ಸಾಧ್ಯವಿರುವ ಪೋಷಕರು ಖಂಡಿತಾ ಶುಲ್ಕ ನೀಡಿ, ಶಾಲೆಗಳ ಉಳಿವಿಗೆ ಸಹಕರಿಸಿ ಎಂದೂ ಅವರು ತಿಳಿಸಿದ್ದಾರೆ.

ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ಶಾಲಾ ಶುಲ್ಕ ರಿಯಾಯಿತಿಗೆ ಮುಂದಾಗಿರುವ ಕ್ಯಾಮ್ಸ್ ನಡೆಗೆ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಸಂಕಷ್ಟದ ಸಂದರ್ಭದಲ್ಲಿ ಲಕ್ಷ ಲಕ್ಷ ಫೀಸ್ ಪಾವತಿ ಕಷ್ಟ.  ಹೀಗಾಗಿ ಖರ್ಚುವೆಚ್ಚದ ಆಧಾರದಲ್ಲಿ ಶಾಲಾ ಶುಲ್ಕ ನಿಗದಿಪಡಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಂಕಷ್ಟದ ಸಂದರ್ಭದಲ್ಲಿ ಲಕ್ಷ ಲಕ್ಷ ಫೀಸ್ ಪಾವತಿಸುವುದು ಕಷ್ಟ. ಹೀಗಾಗಿ ಖರ್ಚು ವೆಚ್ಚದ ಆಧಾರದಲ್ಲಿ ಶಾಲಾ ಶುಲ್ಕ ನಿಗದಿ ಮಾಡಬೇಕು. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟ ಸೂಚನೆ ನೀಡಿರುವ ಕಾರ್ಯಕ್ಕೆ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಬಲವಂತವಾಗಿ ಶುಲ್ಕ ಪಾವತಿ ಮಾಡಿ ಎನ್ನುವುದು ಸರಿಯಲ್ಲ. ಕ್ಯಾಮ್ಸ್ ತನ್ನ ವ್ಯಾಪ್ತಿಯ ಸಂಸ್ಥೆಗಳಿಗೆ ಈ ಕುರಿತು ಮನವಿ ಮಾಡಿದೆ. ನಾನು ಇದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಅತ್ಯಂತ ಸ್ವಾಗತಾರ್ಹ ಘೋಷಣೆ ಎಂದು ಸಚಿವರು ಹೇಳಿದ್ದಾರೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

Published On - 12:58 pm, Wed, 6 January 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ