AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ಮಾಹಿತಿ ಹಬ್ಬಿಸಬೇಡಿ.. ಏನೂ ತೊಂದರೆ ಇಲ್ಲ: ಡಾ. ಕೆ.ಸುಧಾಕರ್​

ಕೊವಿಡ್​ 19 ಸೋಂಕು ಹೆಚ್ಚುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಸಹಜವಾಗಿಯೇ ಮಿತಿಮೀರುತ್ತಿದೆ. ಇದರಿಂದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಐಸಿಯು, ಆಕ್ಸಿಜನ್​ಗಳ ಸಮಸ್ಯೆ ಎದುರಾಗುತ್ತಿದೆ.

ರಾಜ್ಯದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ಮಾಹಿತಿ ಹಬ್ಬಿಸಬೇಡಿ.. ಏನೂ ತೊಂದರೆ ಇಲ್ಲ: ಡಾ. ಕೆ.ಸುಧಾಕರ್​
ಆರೋಗ್ಯ ಸಚಿವ ಡಾ.ಕೆ.ಸುಧಾಕರ
Lakshmi Hegde
|

Updated on:Apr 18, 2021 | 5:07 PM

Share

ಬೆಂಗಳೂರು: ಕೊರೊನಾ ಸೋಂಕಿನ ಹರಡುವಿಕೆ ಮಿತಿಮೀರುತ್ತಿರುವ ಬೆನ್ನಲ್ಲೇ ಬೆಂಗಳೂರು ಸೇರಿ ಹಲವು ನಗರಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್​ ಲಭ್ಯವಾಗದೆ ರೋಗಿಗಳು ಒದ್ದಾಡುತ್ತಿದ್ದಾರೆ. ಇವತ್ತಷ್ಟೇ ದೆಹಲಿ, ಮಹಾರಾಷ್ಟ್ರ ಸರ್ಕಾರಗಳು ತಮ್ಮಲ್ಲಿ ಆಕ್ಸಿಜನ್​ ಕೊರತೆ ಇರುವುದಾಗಿ ಹೇಳಿವೆ. ಈ ಮಧ್ಯೆ ಕರ್ನಾಟಕ ರಾಜ್ಯದಲ್ಲಿ ಯಾರೂ ಹೆದರಬೇಕಿಲ್ಲ. ಆಕ್ಸಿಜನ್​ ಕೊರತೆ ಉಂಟಾಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಇಂದು ಟ್ವೀಟ್ ಮಾಡಿರುವ ಡಾ. ಕೆ. ಸುಧಾಕರ್​, ಕರ್ನಾಟಕದಲ್ಲಿ 7 ವೈದ್ಯಕೀಯ ಆಕ್ಸಿಜನ್​ ಉತ್ಪಾದನಾ ಘಟಕಗಳು ಇವೆ. ಇವು ಒಂದು ದಿನಕ್ಕೆ 812 ಟನ್​ಗಳಷ್ಟು ಆಕ್ಸಿಜನ್​ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿವೆ. ಇನ್ನು ಶನಿವಾರ ಬಳಕೆಯಾದ ಆಮ್ಲಜನಕ 272.61 ಟನ್​. ಹೀಗಿರುವಾಗ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇದೆ ಎಂಬ ಗಾಳಿಸುದ್ದಿಯನ್ನು ಅನಗತ್ಯವಾಗಿ ಹಬ್ಬಿಸಿ, ಜನರಲ್ಲಿ ಗಾಬರಿ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.

ಕೊವಿಡ್​ 19 ಸೋಂಕು ಹೆಚ್ಚುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಸಹಜವಾಗಿಯೇ ಮಿತಿಮೀರುತ್ತಿದೆ. ಇದರಿಂದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್​, ಐಸಿಯು, ಆಕ್ಸಿಜನ್​ಗಳ ಸಮಸ್ಯೆ ಎದುರಾಗುತ್ತಿದೆ. ರಾಜ್ಯದಲ್ಲಿರುವ ಆಮ್ಲಜನಕ ಉತ್ಪಾದನಾ ಘಟಕಗಳು ದು:ಸ್ಥಿತಿಯಲ್ಲಿದ್ದು, ಅವುಗಳನ್ನು ಆದಷ್ಟು ಬೇಗ ದುರಸ್ತಿ ಮಾಡಿಸಬೇಕು ಎಂಬ ಮಾತೂ ಕೇಳಿಬರುತ್ತಿದೆ.

ಇದನ್ನೂ ಓದಿ: ರೈಲುಗಳ ಮೂಲಕ ವೈದ್ಯಕೀಯ ಆಕ್ಸಿಜನ್​ ಸಾಗಣೆಗೆ ಅವಕಾಶ ಕೊಡಿ; ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರದ ಮನವಿ

ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ; ಜನರೇ ಜನತಾ ಕರ್ಫ್ಯೂ ಹಾಕಿಕೊಳ್ಳಬೇಕು ಎಂದ ಸಚಿವ ಡಾ. ಕೆ.ಸುಧಾಕರ್

ಕೊರೊನಾ ಎಫೆಕ್ಟ್​: ತಡರಾತ್ರಿ ಕಾರ್ಯಾಚರಣೆಗಿಳಿದ ಸಚಿವ ಡಾ.ಕೆ.ಸುಧಾಕರ್​.. ನಿಯಮ ಪಾಲಿಸದ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

Do not create panic about shortage of medical oxygen in the Karnataka says K.Sudhakar

Published On - 5:05 pm, Sun, 18 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ