AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಪ್ರಯಾಣ ದರ ಸದ್ಯಕ್ಕೆ ಹೆಚ್ಚಳ ಮಾಡಬೇಡಿ: ಸಿಎಂ ಯಡಿಯೂರಪ್ಪ ಸೂಚನೆ

BMTC Bus Fare: ಕಳೆದ ವರ್ಷ ಕೆಎಸ್ಆರ್ಟಿಸಿ, NWKSRT, NEKSRT ದರ ಪರಿಷ್ಕರಣೆ ಮಾಡಲಾಗಿತ್ತು. ಹೀಗಾಗಿ ಈಗ ತನ್ನ ಸರದಿ ಎಂದು ಬಿಎಂಟಿಸಿ ಪ್ರಯಾಣ ದರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಬಜೆಟ್ ನಲ್ಲಿ ದರ ಪರಿಷ್ಕರಣೆ ಮಾಡುವ ನಿರೀಕ್ಷೆ ಬಿಎಂಟಿಸಿ ಸಂಸ್ಥೆಯದ್ದಾಗಿತ್ತು ಎಂಬುದು ಗಮನಾರ್ಹ.

ಬಿಎಂಟಿಸಿ ಬಸ್ ಪ್ರಯಾಣ ದರ ಸದ್ಯಕ್ಕೆ ಹೆಚ್ಚಳ ಮಾಡಬೇಡಿ: ಸಿಎಂ ಯಡಿಯೂರಪ್ಪ ಸೂಚನೆ
ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: Mar 16, 2021 | 12:03 PM

Share

ಬೆಂಗಳೂರು: ದರ ಏರಿಕೆ ಬರೆಗಳಿಂದ ಜನಸಾಮಾನ್ಯರು ಹೈರಾಗೊಳ್ಳುತ್ತಿದ್ದಾರೆ. ಈ ಮಧ್ಯೆ ದಿನನಿತ್ಯದ ಹಾಲಿನ ದರ ಮತ್ತು ಬಸ್ ಪ್ರಯಾಣ ದರಗಳನ್ನೂ ಹೆಚ್ಚಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಸದ್ಯಕ್ಕೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂಬುದು ಖಚಿತವಾಗಿ ತಿಳಿದುಬಂದಿದೆ. ಇನ್ನು ಹಾಲಿನ ದರ ಹೆಚ್ಚಾಗುತ್ತದಾ ಅಥವಾ ಇಲ್ವಾ ಎಂಬುದು ತಿಳಿದುಬಂದಿಲ್ಲ.

ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ತಡೆಯೊಡ್ಡಿದೆ. ತೈಲ ಬೆಲೆ ಹೆಚ್ಚಳದಿಂದ ದರ ಪರಿಷ್ಕರಣೆ ಮಾಡುವಂತೆ ಬಿಎಂಟಿಸಿ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿತ್ತು. ಶೇ.18ರಿಂದ 20ರಷ್ಟು ಹೆಚ್ಚಳ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಈಗ ಬಸ್ ಪ್ರಯಾಣ ದರ ಹೆಚ್ಚಿಸಿದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತೆ ಎಂದು ತಡೆ ನೀಡಿದೆ.

ಈಗಾಗಲೇ ಬೆಲೆ ಏರಿಕೆಯಿಂದ ಜನ ರೋಸಿ ಹೋಗಿದ್ದಾರೆ. ಈಗ ಬಸ್ ಪ್ರಯಾಣ ದರ ಹೆಚ್ಚಿಸಿದರೆ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತೆ. ಹಾಗಾಗಿ ಸದ್ಯಕ್ಕೆ ದರ ಹೆಚ್ಚಳ ಬೇಡವೆಂದು ಸಾರಿಗೆ ಸಚಿವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಕೆಎಸ್ಆರ್ಟಿಸಿ, NWKSRT, NEKSRT ದರ ಪರಿಷ್ಕರಣೆ ಮಾಡಲಾಗಿತ್ತು. ಹೀಗಾಗಿ ಈಗ ತನ್ನ ಸರದಿ ಎಂದು ಬಿಎಂಟಿಸಿ ಪ್ರಯಾಣ ದರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಬಜೆಟ್ ನಲ್ಲಿ ದರ ಪರಿಷ್ಕರಣೆ ಮಾಡುವ ನಿರೀಕ್ಷೆ ಬಿಎಂಟಿಸಿ ಸಂಸ್ಥೆಯದ್ದಾಗಿತ್ತು ಎಂಬುದು ಗಮನಾರ್ಹ.

ಇದನ್ನೂ ಓದಿ: ಬಿಎಂಟಿಸಿ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ.. ನಾಳಿನ ಬಜೆಟ್​ನಲ್ಲಿ ಬಿಎಂಟಿಸಿ ಪ್ರಯಾಣ ದರ ಏರಿಕೆ ಸಾಧ್ಯತೆ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ