AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ

ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್ ವ್ಯವಸ್ಥೆ ನೀಡಬೇಕು. ಹಾಸ್ಟೆಲ್ ಖಾಲಿ ಮಾಡಲು ಒತ್ತಾಯಿಸಿದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ.

ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)
Follow us
guruganesh bhat
|

Updated on:Apr 22, 2021 | 9:33 PM

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ. ಹೀಗಾಗಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳನ್ನು ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ. ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್ ವ್ಯವಸ್ಥೆ ನೀಡಬೇಕು. ಹಾಸ್ಟೆಲ್ ಖಾಲಿ ಮಾಡಲು ಒತ್ತಾಯಿಸಿದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ವಿಟಿಯು ವಿದ್ಯಾರ್ಥಿಗಳ ಹಾಸ್ಟೆಲ್ ಸಮಸ್ಯೆಗೆ ಪರಿಹಾರ ದೊರಕಿದಂತಾಗಿದೆ.

ರಾಜ್ಯಾದ್ಯಂತ ಕೊವಿಡ್ ತಡೆ ಬಿಗಿ ನಿಯಮಗಳು  ಜಾರಿಯಾಗಲಿವೆ. ಸದ್ಯ ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಆದರೆ ವಿಟಿಯು ಪರೀಕ್ಷೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ  ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಿದ್ದು ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಸೂಚನೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್​ಗಳಿಂದ ಹೊರಹಾಕುವಂತಿಲ್ಲ. ಇಂಜಿನಿಯರಿಂಗ್‌, ಡಿಪ್ಲೊಮಾ, ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಹಾಸ್ಟೆಲ್​ಗಳಿಂದ ಹೊರಗೆ ಕಳುಹಿಸುವಂತಿಲ್ಲ. ಪರೀಕ್ಷೆ ಮುಗಿಯುವವರೆಗೆ ಎಲ್ಲಾ ಸೌಲಭ್ಯ ಮುಂದುವರಿಸಿ ಊಟ, ವಸತಿ ಸೇರಿ ಎಲ್ಲಾ ಸೌಲಭ್ಯ ಒದಗಿಸಬೇಕು. ಹಾಸ್ಟೆಲ್‌ಗಳಲ್ಲಿ ಕೊವಿಡ್‌ ಬಗ್ಗೆ ಎಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಸೂಚನೆ ನೀಡಿದರು.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಕೊರೊನಾ ಓಟಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಕಠಿಣಾತಿ ಕಠಿಣ ರೂಲ್ಸ್ ಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದ್ರೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ. ಬೆಂಗಳೂರಿನಲ್ಲೇ 15 ಸಾವಿರಕ್ಕೂ ಹೆಚ್ಚು ವಿಟಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗುಜರಾತ್, ಮಹಾರಾಷ್ಟ್ರ, ಕೇರಳದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದಾರೆ. ಸದ್ಯದ ಪರಿಸ್ಥಿತಿಗೆ ಪರೀಕ್ಷೆ ಬೇಡ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರೂ ವಿಟಿಯು ಪರೀಕ್ಷೆ ನಡೆಸುತ್ತಿದೆ.  ಮುಂದಿನ ಶೈಕ್ಷಣಿಕ ವರ್ಷಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಿಕೆ ಮಾಡಲ್ಲ. ಆಫ್​ಲೈನಲ್ಲೇ ಪರೀಕ್ಷೆ ಬರೆಯಬೇಕು ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳಿದ್ದರು.

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Covid-19 Karnataka Update: ಕರ್ನಾಟಕದಲ್ಲಿ ಇಂದು 25,795 ಮಂದಿಯಲ್ಲಿ ಕೊರೊನಾ ಸೋಂಕು, 123 ಸಾವು

(Do not vacate VTU students from hostels by end of their exams says chancellor Prof Karisiddappa)

Published On - 8:38 pm, Thu, 22 April 21

ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ