AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಕೃತಿಕಾರೆಡ್ಡಿ ಕೊಲೆ ಕೇಸ್​: ತಪ್ಪೊಪ್ಪಿಕೊಂಡ ಪತಿ; ಮಹೇಂದ್ರರೆಡ್ಡಿ ಪ್ಲ್ಯಾನ್​ ಹೇಗಿತ್ತು?

ಬೆಂಗಳೂರಿನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಡಾ.ಕೃತಿಕಾರೆಡ್ಡಿ ಕೊಲೆ ಕೇಸ್​ನ ಬಗೆದಷ್ಟೂ ಪೊಲೀಸರಿಗೆ ಸ್ಫೋಟಕ ಮಾಹಿತಿಗಳು ದೊರೆಯುತ್ತಿವೆ. ಆರೋಪಿ, ಕೃತಿಕಾ ಪತಿ ಡಾ. ಮಹೇಂದ್ರರೆಡ್ಡಿ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ. ಹೆಂಡತಿ ಸಾಯಬೇಕು, ಆದರೆ ತಾನು ಕೆಟ್ಟವನಾಗಬಾರದು. ಆಸ್ತಿಯೂ ಕೈತಪ್ಪಿ ಹೋಗಬಾರದು ಎಂಬುದು ಆರೋಪಿಯ ಪ್ಲ್ಯಾನ್​ ಆಗಿತ್ತು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಂಡೇ ಡಾ.ಮಹೇಂದ್ರ ರೆ್ಡಿ ಕೃತ್ಯ ಎಸಗಿದ್ದ ಎಂಬುದು ಗೊತ್ತಾಗಿದೆ.

ಡಾ.ಕೃತಿಕಾರೆಡ್ಡಿ ಕೊಲೆ ಕೇಸ್​: ತಪ್ಪೊಪ್ಪಿಕೊಂಡ ಪತಿ; ಮಹೇಂದ್ರರೆಡ್ಡಿ ಪ್ಲ್ಯಾನ್​ ಹೇಗಿತ್ತು?
ತಪ್ಪೊಪ್ಪಿಕೊಂಡ ಆರೋಪಿ.
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 23, 2025 | 11:50 AM

Share

ಬೆಂಗಳೂರು, ಅಕ್ಟೋಬರ್​ 23: ಡಾ. ಕೃತಿಕಾರೆಡ್ಡಿ (Kruthika Reddy) ಕೊಲೆ ಪ್ರಕರಣ ಸಂಬಂಧ ಆರೋಪಿ, ಪತಿ ಡಾ.ಮಹೇಂದ್ರರೆಡ್ಡಿ ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ. ಇದರ ಜೊತೆಗೆ ತನಿಖೆ ವೇಳೆ ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಕೊಲೆ ಹಿಂದಿನ ಕಾರಣ ಮತ್ತು ಅದಕ್ಕಾಗಿ ಆರೋಪಿಯ ಪ್ಲ್ಯಾನ್​ ಹೇಗಿತ್ತು ಎಂಬುದನ್ನೀಗ ಪೊಲೀಸರು ಬಹಿರಂಗಗೊಳಿಸಿದ್ದಾರೆ. ಡಾ. ಕೃತಿಕಾರೆಡ್ಡಿಯದ್ದು ಸಹಜ ಸಾವು ಎಂದು ಬಿಂಬಿಸದರೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮಾಡುವುದಿಲ್ಲ. ಹೀಗಾಗಿ ಸಾವಿಗೆ ಅಸಲಿ ಕಾರಣ ಏನೆಂಬುದು ಗೊತ್ತಾಗಲ್ಲ ಎಂಬುದು ಡಾ. ಮಹೇಂದ್ರ ರೆಡ್ಡಿಯ ಪ್ಲ್ಯಾನ್​ ಆಗಿತ್ತು.

ಕೊಲೆ ಮಾಡಿದ್ದು ಹೇಗೆ?

ಡಾ. ಕೃತಿಕಾರೆಡ್ಡಿಗಿದ್ದ ಆರೋಗ್ಯ ಸಮಸ್ಯೆಯಿಂದ ಪತಿ ಡಾ. ಮಹೇಂದ್ರರೆಡ್ಡಿ ಬೇಸತ್ತಿದ್ದ. ತನಗೆ ವೈಯಕ್ತಿಕ ಜೀವನ ಇಲ್ಲ ಎಂದು ಕೋಪಕೊಂಡಿದ್ದ. ಹೀಗಂತಾ ವಿಚ್ಛೇದನ ಪಡೆದರೆ ತನಗೆ ಏನು ಸಿಗಲ್ಲ ಎಂಬುದು ಆರೋಪಿಗೆ ಗೊತ್ತಿತ್ತು. ಹಾಗಾಗಿ ಹೆಂಡತಿಯ ಆರೋಗ್ಯ ಸಮಸ್ಯೆಯನ್ನೇ ಬಂಡವಾಳವಾಗಿ ಮಾಡಿಕೊಂಡು ಕೊಲೆ ಮಾಡಿ ಅದನ್ನು ಸಹಜ ಸಾವು ಎಂದು ಬಿಂಬಿಸಲು ಯೋಜನೆ ಸಿದ್ಧಪಡಿಸಿದ್ದ. ಇದರ ಭಾಗವಾಗಿ ಡಾ.ಕೃತಿಕಾಗೆ ಅನಸ್ತೇಶಿಯಾ ಕೊಟ್ಟಿದ್ದ. ಆಕೆಯ ದೇಹದ ತೂಕಕ್ಕೆ ಕೇವಲ ಏಳರಿಂದ ಎಂಟು ಎಂ.ಎಲ್. ಅನಸ್ತೇಶಿಯಾ ನೀಡಬಹುದಾಗಿತ್ತು. ಇದು ಗೊತ್ತಿದ್ದರೂ ಆ ದಿನ ಹದಿನೈದು ಎಂ.ಎಲ್​.  ನೀಡಿದ್ದ ಎಂಬುದು ವೈಜ್ಞಾನಿಕ ಸಾಕ್ಷಿಗಳಿಂದ ದೃಢಪಟ್ಟಿವೆ.

ಇದನ್ನೂ ಓದಿ: ವೈದ್ಯೆ ಕೊಲೆ ಕೇಸ್​​: ಮಾರಕ ಡ್ರಗ್ಸ್​​ನ ಮೂಲ ಬಯಲು; ಕೃತಿಕಾಳ ರೂಮ್​ನಲ್ಲಿ ಔಷಧಗಳು ಪತ್ತೆ

ಪ್ರಕರಣ ಸಂಬಂಧ ಬಂಧಿತ ಆರೋಪಿ ಡಾ.ಮಹೇಂದ್ರರೆಡ್ಡಿಯ ಮೊಬೈಲ್​ ನ ಡಾಟಾ ಕೂಡ ಪೊಲೀಸರು ರಿಟ್ರೀವ್​ ಮಾಡಿದ್ದು, ಈ ವೇಳೆ ಹಲವು ಮಹತ್ವದ ಸಾಕ್ಷಿಗಳು ದೊರೆತಿವೆ. I have killed Kruthika ಎಂದು ಆರೋಪಿ ಸಂದೇಶ ಕಳುಹಿಸಿದ್ದ ಬಗ್ಗೆ ಗೊತ್ತಾಗಿದೆ. ಹೆಂಡತಿ ಸಾಯಬೇಕು, ಆದರೆ ತಾನು ಕೆಟ್ಟವನಾಗಬಾರದು. ಆಸ್ತಿಯೂ ಕೈತಪ್ಪಿ ಹೋಗಬಾರದು ಎಂಬುದು ಆರೋಪಿಯ ಪ್ಲ್ಯಾನ್​ ಆಗಿತ್ತು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಂಡೇ ಡಾ.ಮಹೇಂದ್ರ ರೆಡ್ಡಿ ಕೃತ್ಯ ಎಸಗಿದ್ದ ಎಂಬುದು ಗೊತ್ತಾಗಿದೆ. ಇದರ ಜೊತೆಗೆ ಫ್ರೋಫಾಪಾಲ್ ಖರೀದಿ ಮಾಡಿದ್ದಕ್ಕೆ ಸಾಕ್ಷಿ, ಇಂಜೆಕ್ಷನ್ ಕೊಟ್ಟಿದ್ದಕ್ಕೆ ಕ್ಯಾನ್ ಮತ್ತು ಮೃತ ದೇಹದಲ್ಲಿ ಅರವಳಿಕೆ ಅಂಶ ಪತ್ತೆ ಸೇರಿ ಕೊಲೆ ಮಾಡಿರುವ ಬಗ್ಗೆ ಓರ್ವರ ಜೊತೆ ಚಾಟ್​ ಮಾಡಿರುವ ಸಂಗತಿಯನ್ನೀಗ ಪೊಲೀಸರು ಬಟಾಬಯಲು ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:46 am, Thu, 23 October 25

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ