AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರಾಗಿದ್ದರೂ ತಂದೆ-ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ.. ಪೋಷಕರ ಕಳೆದುಕೊಂಡು ಕಣ್ಣೀರಿಟ್ಟ ವೈದ್ಯೆ

ಡಾ.ಅಶ್ವಿನಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಡಾ.ಅಶ್ವಿನಿ ಖಾಸಗಿ ಆಸ್ಪತ್ರೆಗೆ ತಮ್ಮ ಪೋಷಕರನ್ನು ದಾಖಲಿಸಲು ಪರದಾಡಿದ್ದಾರೆ. ಬೆಡ್ ಸಿಗದೆ, ರೆಮ್​ಡಿಸಿವಿರ್ ಸಿಗದೆ ಡಾಕ್ಟರ್ ಅಶ್ವಿನಿ ತಂದೆ ತಾಯಿ ಕೊರೊನಾಗೆ ಬಲಿಯಾಗಿದ್ದಾರೆ.

ವೈದ್ಯರಾಗಿದ್ದರೂ ತಂದೆ-ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ.. ಪೋಷಕರ ಕಳೆದುಕೊಂಡು ಕಣ್ಣೀರಿಟ್ಟ ವೈದ್ಯೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Apr 18, 2021 | 11:43 AM

Share

ಬೆಂಗಳೂರು: ವೈದ್ಯರಾಗಿದ್ದರೂ ತನ್ನ ತಂದೆ-ತಾಯಿಗೆ ಚಿಕಿತ್ಸೆಕೊಡಿಸಲಾಗದೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಕರುಳು ಹಿಂಡುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಜೀವ ಉಳಿಸೋ ಪುಣ್ಯ ಕಾರ್ಯ ಮಾಡುವ ಡಾ.ಅಶ್ವಿನಿ ಸ್ವತಃ ತಮ್ಮ ಪೋಷಕರ ಜೀವವನ್ನೇ ಉಳಿಸಿಕೊಳ್ಳಲಾಗಲಿಲ್ಲ. ತಂದೆ ತಾಯಿ ಇಬ್ಬರಿಗೂ ಕೊರೊನಾ ಸೋಂಕು ತಗುಲಿದ್ದು ಇಬ್ಬರೂ ಕೊರೊನಾಗೆ ಬಲಿಯಾಗಿದ್ದಾರೆ.

ಡಾ.ಅಶ್ವಿನಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಡಾ.ಅಶ್ವಿನಿ ಖಾಸಗಿ ಆಸ್ಪತ್ರೆಗೆ ತಮ್ಮ ಪೋಷಕರನ್ನು ದಾಖಲಿಸಲು ಪರದಾಡಿದ್ದಾರೆ. ಬೆಡ್ ಸಿಗದೆ, ರೆಮ್​ಡಿಸಿವಿರ್ ಸಿಗದೆ ಡಾಕ್ಟರ್ ಅಶ್ವಿನಿ ತಂದೆ ತಾಯಿ ಕೊರೊನಾಗೆ ಬಲಿಯಾಗಿದ್ದಾರೆ. ಮೂರು ದಿನದ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ ವೈದ್ಯೆ, ನಿನ್ನೆ ತಾಯಿಯನ್ನೂ ಕಳೆದುಕೊಂಡಿದ್ದಾರೆ. ಏಪ್ರಿಲ್ 13 ರಂದು ಡಾ.ಅಶ್ವಿನಿ ತಂದೆಯವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿತ್ತು. ಈ ವೇಳೆ 70 ವರ್ಷ ವಯಸ್ಸಿನ ತನ್ನ ತಂದೆಗೆ ಚಿಕಿತ್ಸೆ ಕೊಡಿಸಲು ಅಶ್ವಿನಿ ಪರದಾಡಿದ್ದರು. ಖಾಸಗಿ‌ ಆಸ್ಪತ್ರೆಗಳಲ್ಲಿ ಬೆಡ್ ಹುಡುಕಿ ಹುಡಕಿ ನರಳಾಡಿದ್ದರು.

ಕೊನೆಗೆ ತಮ್ಮ ಪರಿಚಯದವರಿಗೆ ಹೇಳಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಪಡೆದು ನಂತರ ತನ್ನ ತಂದೆಗೆ ರೆಮ್​ಡಿಸಿವಿರ್ ಇಂಜೆಕ್ಷನ್ ಕೊಡಿಸಲು ಹರಸಾಹಸ ಪಟ್ಟಿದ್ದರು. ಕೊನೆಗೂ ಚಿಕಿತ್ಸೆ ಫಲಿಸದ ಅಶ್ವಿನಿ ತಂದೆ ಮೃತಪಟ್ಟಿದ್ದರು. ನಿನ್ನೆ ತಾಯಿ ಕೂಡಾ ಕೊರೊನಾಗೆ ಬಲಿಯಾಗಿದ್ದಾರೆ. ರೆಮ್​ಡಿಸಿವಿರ್ ಇಂಜೆಕ್ಷನ್ ಸಿಕ್ಕಿದ್ರೆ ತಂದೆಯನ್ನ ಉಳಿಸಿಕೊಳ್ಳಬಹುದಿತ್ತು. ಆದರೆ ಸಿಗಲಿಲ್ಲ, ತಂದೆನೂ ಉಳಿಲಿಲ್ಲ ಎಂದು ಡಾ.ಅಶ್ವಿನಿ ಕಣ್ಣೀರು ಹಾಕಿದ್ದಾರೆ.

ಕೊರೊನಾ 2ನೇ ಅಲೆ ಮೊದಲ ಅಲೆಗಿಂತ ಭೀಕರವಾಗಿದೆ. ದೇಹ ಸೇರಿದವರ ಜೀವ ಹಿಂಡುತ್ತಿದೆ. ಜನ ಆದಷ್ಟು ಕಾಳಜಿವಹಿಸಬೇಕು. ಈ ಬಾರಿಯ ಕೊರೊನಾ ಸೋಂಕಿನ ಲಕ್ಷಣಗಳು ಜನರನ್ನು ನಿರ್ಲಕ್ಷಿಸುವಂತೆ ಮಾಡುತ್ತವೆ. ಸಾಮಾನ್ಯ ಶೀತ, ಜ್ವರ ಎಂದು ಸುಮ್ಮನಿದ್ದರೇ ಭಾರಿ ದಂಡ ವಿಧಿಸಬೇಕಾಗುತ್ತೆ. ಹಾಗಾಗಿ ಯಾವುದನ್ನೂ ನಿರ್ಲಕ್ಷಿಸಬೇಡಿ ಕೊರೊನಾದ ಮಾರ್ಗಸೂಚಿಗಳನ್ನು ಪಾಲಿಸಿ.

ಇದನ್ನೂ ಓದಿ: ಪ್ರಧಾನಿಯಿಂದ ಕೊರೊನಾ ಸ್ಥಿತಿ ಪರಿಶೀಲನಾ ಸಭೆ; ಮತ್ತೆ ತ್ರಿಬಲ್​ ಟಿ ಸೂತ್ರ ನೆನಪಿಸಿದ ನರೇಂದ್ರ ಮೋದಿ, ಔಷಧ, ಆಕ್ಸಿಜನ್ ಕೊರತೆ ಬಗ್ಗೆ ಚರ್ಚೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ