AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ: ವಿಧಾನಸಭೆಯಲ್ಲಿ ಶಾಸಕ ವೆಂಕಟರಮಣಯ್ಯ ತೀವ್ರ ಆಕ್ಷೇಪ

ಬೆಂಗಳೂರು ವ್ಯಾಪ್ತಿಯ ಇತರ ಕಾಂಗ್ರೆಸ್ ಸದಸ್ಯರೂ ದನಿಗೂಡಿಸಿ, ಘಟಕ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ದೊಡ್ಡಬಳ್ಳಾಪುರದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ: ವಿಧಾನಸಭೆಯಲ್ಲಿ ಶಾಸಕ ವೆಂಕಟರಮಣಯ್ಯ ತೀವ್ರ ಆಕ್ಷೇಪ
ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ (ಎಡಚಿತ್ರ) ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಚಿಗರೇನಹಳ್ಳಿ ಸಮೀಪದ ಕಸದ ಗುಂಡಿಗಳು (ಸಂಗ್ರಹ ಚಿತ್ರಗಳು)
TV9 Web
| Edited By: |

Updated on: Dec 15, 2021 | 7:33 PM

Share

ಬೆಳಗಾವಿ: ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿ ಸಮೀಪ ಇರುವ ಘನತ್ಯಾಜ್ಯ ಸಂಸ್ಕರಣಾ ಘಟಕದ ಅವೈಜ್ಞಾನಿಕ ಕಾರ್ಯನಿರ್ವಹಣೆ ಮತ್ತು ಅದರಿಂದ ಜನರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಶಾಸಕ ಟಿ.ವೆಂಕಟರಮಣಯ್ಯ ಬುಧವಾರ ಸದನದ ಗಮನ ಸೆಳೆದರು. ಬೆಂಗಳೂರು ವ್ಯಾಪ್ತಿಯ ಇತರ ಕಾಂಗ್ರೆಸ್ ಸದಸ್ಯರೂ ದನಿಗೂಡಿಸಿ, ಘಟಕ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಈ ಕುರಿತು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

ಹಳ್ಳಿ ಜನರ ಜೀವ ಹಿಂಡುತ್ತಿರುವ ಬೆಂಗಳೂರು ಕಸ ದೊಡ್ಡಬಳ್ಳಾಪುರ ತಾಲ್ಲೂಕಿನ ತಣ್ಣೀರನಹಳ್ಳಿ, ಮುಡ್ಲಕಾಳೇನಹಳ್ಳಿ ಹಾಗೂ ಕಾಡತಿಪ್ಪೂರು ಗ್ರಾಮಗಳ ಜನರು ಕಸ ವಿಲೇವಾರಿ ಘಟಕದಿಂದ ಅತಿಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಬೆಂಗಳೂರಿನಿಂದ ಬಂದು ಬೀಳುವ ಲಾರಿಗಟ್ಟಲೆ ಕಸದಿಂದ ಹರಿದುಬರುವ ಕೊಳಕುರಸ ತಣ್ಣೀರನಹಳ್ಳಿ ಗ್ರಾಮದ ಜನವಸತಿ ಪ್ರದೇಶದ ಹಳ್ಳಗಳ ಮೂಲಕವೇ ಹರಿದು ಮುಂದೆ ಸಾಗುತ್ತಿದೆ. ಸತತ ದುರ್ವಾಸನೆಯಿಂದ ಹೈರಾಣಾಗಿರುವ ಇಲ್ಲಿನ ಜನರು ಕುಡಿಯುವ ನೀರೂ ಕಳೆದುಕೊಂಡಿದ್ದಾರೆ.

ವೃದ್ಧರೂ ಸೇರಿದಂತೆ ಬಹುತೇಕರ ಕಾಲುಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಾಲುಗಳು ಕಪ್ಪಾಗುತ್ತಿದ್ದು, ರಕ್ತ ಸೋರುತ್ತಿವೆ. ನಾವು ಎಷ್ಟು ಬೇಡ ಎಂದರೂ ಕೇಳುತ್ತಿಲ್ಲ. ಹಣಬಲ ಇರುವ ಬೆಂಗಳೂರು ಗುತ್ತಿಗೆದಾರರು ಒಂದೇ ಸಮ ಕಸದ ಲಾರಿಗಳನ್ನು ಇಲ್ಲಿಗೆ ತರುತ್ತಲೇ ಇದ್ದಾರೆ. ಏನು ಮಾಡೋದು ಸ್ವಾಮಿ. ಬೆಂಗಳೂರು ವಿಧಾನಸಭೆಯ ಪ್ರತಿ ಅಧಿವೇಶನದಲ್ಲಿಯೂ ನಾವು ರೈತಪರ, ಗ್ರಾಮೀಣ ಬದುಕು ಸುಧಾರಿಸಬೇಕು ಎಂದೆಲ್ಲಾ ನಮ್ಮ ನಾಯಕರು ಉದ್ದುದ್ದ ಭಾಷಣ ಮಾಡುತ್ತಲೇ ಇರುತ್ತಾರೆ. ಅದೇ ವಿಧಾನಸೌಧದ ಕಸ ನಮ್ಮೂರನ್ನು ಹಾಳುತ್ತಿದೆ ಎಂದು ಮಾರ್ಮಿಕವಾಗಿ ನುಡಿಯುತ್ತಾರೆ ದೊಡ್ಡಬಳ್ಳಾಪುರ ತಾಲ್ಲೂಕಿನ ಜನ.

ಇದನ್ನೂ ಓದಿ: ಕಸ-ಕಂಟಕ: ಹಳ್ಳಿ ಜನರ ಜೀವ ಹಿಂಡುತ್ತಿರುವ ಬೆಂಗಳೂರು ಕಸ, ಅವೈಜ್ಞಾನಿಕ ವಿಲೇವಾರಿಗೆ ಗ್ರಾಮೀಣ ಜನಜೀವನ ಅಸ್ತವ್ಯಸ್ತ ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಹೊಸ ಪ್ರಯೋಗ: ಕಸ ವಿಲೇವಾರಿಗೆ ಅತ್ಯಾಧುನಿಕ ತಂತ್ರಜ್ಞಾನದ ವಾಹನ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ