AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಟ್ಟ ಮಾಲೀಕನಿಗೆ ನೌಕರನಿಂದಲೇ ಕೋಟಿ ರೂ. ನಾಮ; ಪ್ರೇಯಸಿ ಜೊತೆ ಸೇರಿ ಜರಿ ದಾರ ಕದ್ದ ಖದೀಮ ಜಹಿದ್ ಖಾನ್

ದೊಡ್ಡಬಳ್ಳಾಪುರದಲ್ಲಿ, ಮಾಲೀಕನಿಗೆ ಇಬ್ಬರು ನಂಬಿಕಸ್ಥ ನೌಕರರು ಸೇರಿ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಕಚ್ಚಾ ವಸ್ತುಗಳನ್ನು ವಂಚಿಸಿದ್ದಾರೆ. ಸೀರೆ ನೇಯುವ ಅಂಗಡಿಯ ಮಾಲೀಕರ ಅನುಪಸ್ಥಿತಿಯಲ್ಲಿ ಜರಿ ದಾರ ಮತ್ತು ಇತರ ವಸ್ತುಗಳನ್ನು ಕದ್ದು ಮಾರಾಟ ಮಾಡಿದ್ದಾರೆ. ದೂರು ನೀಡಿದರೂ ಪೊಲೀಸರಿಂದ ಕ್ರಮವಿಲ್ಲ ಎಂದು ಮಾಲೀಕ ಮೊಹಮ್ಮದ್ ಅಪನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ಅವರ ಹೋರಾಟ ಮುಂದುವರಿದಿದೆ.

ಕೆಲಸ ಕೊಟ್ಟ ಮಾಲೀಕನಿಗೆ ನೌಕರನಿಂದಲೇ ಕೋಟಿ ರೂ. ನಾಮ; ಪ್ರೇಯಸಿ ಜೊತೆ ಸೇರಿ ಜರಿ ದಾರ ಕದ್ದ ಖದೀಮ ಜಹಿದ್ ಖಾನ್
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ
| Edited By: |

Updated on: Jul 07, 2026 | 3:45 PM

Share

ಮುಖ್ಯಾಂಶಗಳು

  • ಮಾಲೀಕನಿಗೆ ಇಬ್ಬರು ನಂಬಿಕಸ್ಥ ನೌಕರರು ಸೇರಿ ಕೋಟ್ಯಂತರ ರೂ. ವಂಚನೆ
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ನಡೆದ ಘಟನೆ
  • ಲಕ್ಷಾಂತರ ರೂಪಾಯಿ ಮೌಲ್ಯದ ಕಚ್ಚಾ ವಸ್ತುಗಳನ್ನು ಕದ್ದು ಮಾರಾಟ

ದೊಡ್ಡಬಳ್ಳಾಪುರ, ಜು.7: ತನಗೆ ಕೆಲಸ ಕೊಟ್ಟು ಸಾಕಿ ಸಲಹಿದ ಮಾಲೀಕನಿಗೆ ಇಬ್ಬರು ನಂಬಿಕಸ್ಥ ನೌಕರರು ಸೇರಿ ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಬೆಳಕಿಗೆ ಬಂದಿದೆ. ಮಾಲೀಕನ ಅನುಪಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡ ಕೆಲಸಗಾರ ಮತ್ತು ಆತನ ಪ್ರೇಯಸಿಯಾಗಿದ್ದ ಅಕೌಂಟೆಂಟ್ ಮಹಿಳೆ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಕಚ್ಚಾ ವಸ್ತುಗಳನ್ನು ಕದ್ದು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ದೊಡ್ಡಬಳ್ಳಾಪುರ ನಗರದಲ್ಲಿ ಉದ್ಯಮಿ ಮಹಮದ್ ಅಪನ್ ಎಂಬುವರು ಸೀರೆ ನೇಯುವ ಮಗ್ಗಗಳಿಗೆ ಬೇಕಾಗುವ ಜರಿ ದಾರ ಸೇರಿದಂತೆ ವಿವಿಧ ಕಚ್ಚಾ ವಸ್ತುಗಳನ್ನು ಮಾರಾಟ ಮಾಡುವ ದೊಡ್ಡ ಅಂಗಡಿಯನ್ನು ನಡೆಸುತ್ತಿದ್ದರು. ಈ ಅಂಗಡಿಯಲ್ಲಿ ಜಹಿದ್ ಖಾನ್ ಎಂಬಾತ ಕೆಲಸಗಾರನಾಗಿದ್ದ ಹಾಗೂ ಅಪ್ಶಿನ್ ಎಂಬ ಮಹಿಳೆ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಳು. ಇವರಿಬ್ಬರ ನಡುವೆ ಪ್ರೇಮ ಸಂಬಂಧವಿತ್ತು ಎನ್ನಲಾಗಿದೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮಾಲೀಕ ಮಹಮದ್ ಅಪನ್ ಅವರು ಅಂಗಡಿಯಲ್ಲಿ ಇಲ್ಲದ ಸಮಯವನ್ನು ನೋಡಿಕೊಂಡು, ಇವರಿಬ್ಬರು ಸೇರಿ ಬರೋಬ್ಬರಿ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಜರಿ ದಾರ ಹಾಗೂ ಇತರ ಕಚ್ಚಾ ವಸ್ತುಗಳನ್ನು ಯಾರಿಗೂ ತಿಳಿಯದಂತೆ ಖದ್ದಾಗಿ ಅವರೇ ಬೇರೆಯವರಿಗೆ ಮಾರಾಟ ಮಾಡಿ ಹಣ ಜೇಬಿಗೆ ಇಳಿಸಿಕೊಂಡಿದ್ದಾರೆ ಎಂದು ಪೊಲೀಸ್​​​​ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನ್ನ ಅಂಗಡಿಯಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳು ಕಳ್ಳತನವಾಗಿರುವುದನ್ನು ಪತ್ತೆಹಚ್ಚಿದ ಮಾಲೀಕ ಮಹಮದ್ ಅಪನ್, ಆರೋಪಿಗಳಾದ ಜಹಿದ್ ಖಾನ್ ಮತ್ತು ಅಪ್ಶಿನ್ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಹುಂಡಿ ಎಣಿಕೆ ಲೂಟಿ ಮಧ್ಯೆ ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ

ಆದರೆ ದೂರು ದಾಖಲಾಗಿ ದಿನಗಳೇ ಕಳೆದರೂ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಲೀಕ ಮಹಮದ್ ಅಪನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟ್ಯಂತರ ರೂಪಾಯಿ ಕಳೆದುಕೊಂಡು ಕಂಗಾಲಾಗಿರುವ ತಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಪೊಲೀಸ್ ಉನ್ನತಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
ಮಹಾ ಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ
ಮಹಾ ಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ
ನರಸಿಂಹವಾಡಿ ದತ್ತ ಮಂದಿರ ಜಲಾವೃತ!
ನರಸಿಂಹವಾಡಿ ದತ್ತ ಮಂದಿರ ಜಲಾವೃತ!
ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ
ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ