AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕವಯಸ್ಸಿನಲ್ಲೆ ಯೋಗದಲ್ಲಿ ಸಾಧನೆ ಮಾಡಿದ ಪೋರಿ: ಬೆಳ್ಳಿ ಸೇರಿ ಹಲವು ಪದಕ ಗೆದ್ದ ದೊಡ್ಡಬಳ್ಳಾಪುರ ಬಾಲಕಿ

ದೊಡ್ಡಬಳ್ಳಾಪುರ ಯೋಗಪಟುಗಳ ತವರೂರಾಗಿದ್ದು, ನಗರದಲ್ಲಿ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಯೋಗಪಟುಗಳಿದ್ದಾರೆ. ಇದೀಗ 10 ನೇ ತರಗತಿ ಮುಗಿಸಿ ಪ್ರಥಮ ಪಿಯುಸಿಗೆ ಕಾಲಿಟ್ಟಿರುವ ಈ ಬಾಲಕಿ ಯೋಗ ಕ್ಷೇತ್ರದಲ್ಲಿ ಸಾಧನೆಗೈದಿದ್ದಾಳೆ. ನಗರದ ಶಾಂತಿನಗರದ ನಿವಾಸಿಗಳಾದ ರವಿಕುಮಾರ್ ಮತ್ತು ರತ್ನ ದಂಪತಿ ಮಗಳಾದ ಜಾಹ್ನವಿ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುನ್ನತ ಸಾಧನೆ ಮಾಡಿದ್ದಾಳೆ.

ಚಿಕ್ಕವಯಸ್ಸಿನಲ್ಲೆ ಯೋಗದಲ್ಲಿ ಸಾಧನೆ ಮಾಡಿದ ಪೋರಿ: ಬೆಳ್ಳಿ ಸೇರಿ ಹಲವು ಪದಕ ಗೆದ್ದ ದೊಡ್ಡಬಳ್ಳಾಪುರ ಬಾಲಕಿ
ಚಿಕ್ಕವಯಸ್ಸಿನಲ್ಲೆ ಯೋಗದ ಸಾಧನೆ ಮಾಡಿದ ಪೋರಿ: ಬೆಳ್ಳಿ ಸೇರಿ ಹಲವು ಪದಕ ಗೆದ್ದ ದೊಡ್ಡಬಳ್ಳಾಪುರ ಬಾಲಕಿ
ನವೀನ್ ಕುಮಾರ್ ಟಿ
| Edited By: |

Updated on:Jun 20, 2024 | 10:54 PM

Share

ಬೆಂಗಳೂರು ಗ್ರಾಮಾಂತರ, ಜೂನ್​ 20: ಆ ಬಾಲಕಿ ಇಗಷ್ಟೆ ಹತ್ತನೇ ತರಗತಿ ಮುಗಿಸಿ ಪಿಯುಸಿ ಸೇರಿದ್ದಾಳೆ. ಚಿಕ್ಕವಯಸ್ಸಿನಲ್ಲೆ ಆ ಬಾಲಕಿ (girl) ಏನಾದ್ರು ಸಾಧನೆ ಮಾಡಬೇಕೆಂಬ ಹಂಬಲದಿಂದ ಯೋಗವನ್ನ (Yoga) ಆಯ್ಕೆ ಮಾಡಿಕೊಂಡು ಯೋಗ ಕ್ಷೇತ್ರದಲ್ಲಿ ಭರವಸೆಯ ಬೆಳಕಾಗಿದ್ದಾಳೆ. ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದಿರೋ ಯೋಗ ಸ್ಫರ್ಧೆಗಳಲ್ಲಿ ಬೆಳ್ಳಿ ಹಾಗೂ ಹಲವು ಪ್ರಶಸ್ತಿಗಳ ಗೆದ್ದು ಸಾಧನೆ ಮಾಡಿರುವ ಈ ಬಾಲಕಿ ಮತ್ತಷ್ಟು ಸಾಧನೆ ಮಾಡುವತ್ತಾ ಹೆಜ್ಜೆ ಹಾಕಿದ್ದಾಳೆ.

ಯೋಗ ಕ್ಷೇತ್ರದಲ್ಲಿ ಸಾಧನೆಗೈದ ಬಾಲಕಿ 

ಅಂದಹಾಗೆ ದೊಡ್ಡಬಳ್ಳಾಪುರ ಯೋಗಪಟುಗಳ ತವರೂರಾಗಿದ್ದು, ನಗರದಲ್ಲಿ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಯೋಗಪಟುಗಳಿದ್ದಾರೆ. ಇದೀಗ 10 ನೇ ತರಗತಿ ಮುಗಿಸಿ ಪ್ರಥಮ ಪಿಯುಸಿಗೆ ಕಾಲಿಟ್ಟಿರುವ ಈ ಬಾಲಕಿ ಯೋಗ ಕ್ಷೇತ್ರದಲ್ಲಿ ಸಾಧನೆಗೈದಿದ್ದಾಳೆ. ನಗರದ ಶಾಂತಿನಗರದ ನಿವಾಸಿಗಳಾದ ರವಿಕುಮಾರ್ ಮತ್ತು ರತ್ನ ದಂಪತಿ ಮಗಳಾದ ಜಾಹ್ನವಿ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುನ್ನತ ಸಾಧನೆ ಮಾಡಿದ್ದಾಳೆ.

ಇದನ್ನೂ ಓದಿ: International Yoga Day 2024: ಜೂನ್‌ 21ರಂದೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವುದು ಏಕೆ?

2019ರ ಸೆಪ್ಟಂಬರ್​ನಲ್ಲಿ ದಕ್ಷಿಣ ಕೊರಿಯದಲ್ಲಿ ನಡೆದ 9ನೇ ಏಷ್ಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಬೆಳ್ಳಿ ಸಾಧನೆ ಮಾಡಿದ್ದಾಳೆ. ಸಾಂಪ್ರದಾಯಿಕ ಯೋಗದಲ್ಲಿ ಬೆಳ್ಳಿ ರಿದಮಿಕ್ ಯೋಗದಲ್ಲಿ ಕಂಚಿನ ಸಾಧನೆ ಮಾಡಿದ್ದಾಳೆ. ಅಲ್ಲದೆ ಮೈಸೂರು ದಸರಾದಲ್ಲಿ ಯೋಗ ಪ್ರದರ್ಶನ ಮಾಡಿರುವ ಜಾಹ್ನವಿ ರಾಜ್ಯ ಮಟ್ಟದ ಯೋಗ ಸ್ವರ್ಥೆಯಲ್ಲಿ ಭಾಗವಹಿಸಿ ಹಲವು ಪದಕಗಳನ್ನ ಮುಡಿಗೇರಿಸಕೊಂಡಿದ್ದು ಮತ್ತೆ ಕ್ಲಿಷ್ಟಕರ ಯೋಗವನ್ನ ಮಾಡಲು ಸಜ್ಜಾಗುತ್ತಿದ್ದಾಳೆ.

ಯೋಗಪಟು ಜಾಹ್ನವಿ ನಗರದ ನಿಸರ್ಗ ಯೋಗ ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ತರಬೇತಿಯನ್ನು ಪಡೆಯುತ್ತಿದ್ದಾಳೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ಸ್ಪರ್ಧೆಯಲ್ಲಿ ಭಾಗವಹಿಸುವ ಯೋಗಪಟುಗಳಿಗೆ ವಿದ್ಯಾಭ್ಯಾಸ ಮತ್ತು ಸರ್ಕಾರಿ ಕೆಲಸ ಸೇರಲು ನೇರವಾಗುತ್ತೆ ಜೊತೆಗೆ ಉತ್ತಮ ಆರೋಗ್ಯವನ್ನು ಹೊಂದಬಹುದು ಎನ್ನುವುದು ಜಾಹ್ನವಿ ಪೋಷಕರ ಮಾತಾಗಿದೆ. ಯೋಗದಲ್ಲೇ ವಿವಿಧ ಕ್ಲಿಷ್ಟಕರ ಆಸನಗಳನ್ನ ಮಾಡುವ ಮೂಲಕ ಎಲ್ಲರನ್ನ ನಿಬ್ಬೆರಗಾಗುವಂತೆ ಮಾಡಿರುವ ಜಾಹ್ನವಿ ತಂದೆ ತಾಯಿ ಮಗಳ ಸಾಧನೆ ಕಂಡು ಖುಷಿಗೊಂಡಿದ್ದಾರೆ.

ಇದನ್ನೂ ಓದಿ: International Yoga Day 2024 : ಯೋಗ ಮಾಡುವ ವೇಳೆ ಪಾಲಿಸಲೇಬೇಕಾದ ನಿಯಮಗಳಿವು

ಫ್ಯಾನ್ಸಿ ಸ್ಟೋರ್ ನಡೆಸಿಕೊಂಡು ಮಗಳನ್ನ ಯೋಗದಲ್ಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿಸಬೇಕೆಂಬ ಹಂಬಲ ಇಟ್ಟುಕೊಂಡಿದ್ದಾರೆ. ಇನ್ನೂ ಸ್ಮರಣ ಶಕ್ತಿ ಮತ್ತು ಸದೃಢ ಆರೋಗ್ಯಕ್ಕಾಗಿ ಚಿಕ್ಕ ವಯಸ್ಸಿಂದ ಮಗಳನ್ನು ಯೋಗ ಕಲಿಯಲು ಸೇರಿಸಿದ್ದು, ಈಗ ಅದೇ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಜಾಹ್ನವಿ ಪೋಷಕರ ಸಂತಸಕ್ಕೆ ಕಾರಣವಾಗಿದೆ.

ಯೋಗವನ್ನ ಅಳವಡಿಸಿಕೊಂಡ್ರೆ ಒಳ್ಳೆಯ ಆರೋಗ್ಯ ವೃದ್ಧಿ ಆಗಬಹುದೆಂದು ಸೇರಿಕೊಂಡ ಈ ಬಾಲಕಿ ಯೋಗ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬೇಕೆಂಬ ಹಂಬಲ ಇಟ್ಟುಕೊಂಡಿದ್ದಾಳೆ. ಇನ್ನೂ ಪ್ರಪಂಚಕ್ಕೆ ಯೋಗವನ್ನು ಪರಿಚಯಿಸಿದ ಭಾರತ ತನ್ನ ನೆಲದಲ್ಲಿ ಹಲವು ಸಾಧಕರನ್ನ ಹೊಂದಿದ್ದು, ಜಾಹ್ನವಿ ಸಹ ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಮತ್ತಷ್ಟು ಪ್ರಶಸ್ತಿ ಗೆದ್ದು ದೇಶಕ್ಕೆ ಹೆಸರು ತರಲಿ ಅನ್ನೋದು ಎಲ್ಲರ ಆಶಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:53 pm, Thu, 20 June 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!