AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯತ್ತ ಒಲವು ತೋರಿದ್ದ ದೊಡ್ಡರಂಗೇಗೌಡರಿಂದ ಕ್ಷಮಾಪಣೆ

ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ತಮ್ಮ ಹಸ್ತಾಕ್ಷರ ಇರುವ, ಕೈಬರಹದ ಪ್ರತಿ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಹಿಂದಿಯತ್ತ ಒಲವು ತೋರಿದ್ದ ದೊಡ್ಡರಂಗೇಗೌಡರಿಂದ ಕ್ಷಮಾಪಣೆ
ಡಾ.ದೊಡ್ಡರಂಗೇಗೌಡ
TV9 Web
| Edited By: |

Updated on:Apr 06, 2022 | 8:38 PM

Share

ಬೆಂಗಳೂರು: ಮುಂದಿನ ತಿಂಗಳು ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ, ಸಾಹಿತಿ ದೊಡ್ಡರಂಗೇಗೌಡರನ್ನು ಸಾಮಾಜಿಕ ಜಾಲತಾಣಿಗರು ವ್ಯಾಪಕವಾಗಿ ಟೀಕಿಸಿದ್ದರು. ಅಣಕವಾಡಿದ್ದರು. ವ್ಯಂಗ್ಯವಾಗಿ ಸಂದೇಶಗಳನ್ನು ಹಂಚಿಕೊಂಡಿದ್ದರು. ಈ ಬಗ್ಗೆ, ದೊಡ್ಡರಂಗೇಗೌಡರು ಬೇಸರಿಸಿಕೊಂಡಂತೆ ಕಾಣುತ್ತಿದೆ. ಸಾಮಾಜಿಕ ಜಾಲತಾಣಗಳ ವಿವಾದಗಳಿಂದ ನೊಂದಿರುವಂತೆ ಕಾಣುತ್ತಿದೆ. ಇಷ್ಟಕ್ಕೂ ‘ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಿಕೊಂಡರೆ ತಪ್ಪೇನು?’ ಎಂಬುದು ಅವರ ಅಭಿಪ್ರಾಯವಾಗಿತ್ತು.

ನೆಟ್ಟಿಗರ ಗಲಾಟೆಗೆ ದೊಡ್ಡರಂಗೇಗೌಡರು ತಮ್ಮ ಕೈಬರಹದ ಮುಖಾಂತರವೇ ಪ್ರತಿಕ್ರಿಯೆ ನೀಡಿದ್ದಾರೆ. ನಾನೇನೂ ಯಾವುದೇ ಭಾಷೆಯನ್ನು ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ. ಕನ್ನಡಿಗರ ಮೇಲೆ ಹಿಂದಿ ಭಾಷೆಯ ಹಾಗೂ ಇಂಗ್ಲಿಷ್ ಹೇರಿಕೆಯ ರೀತಿ-ನೀತಿಯನ್ನು ನಾನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಅವರದೇ ಸ್ವಹಸ್ತಾಕ್ಷರ ಬರಹದ ಪ್ರತಿ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ದೊಡ್ಡರಂಗೇಗೌಡರ ಕ್ಷಮಾಪಣಾ ಪತ್ರ

ಗೌಡರು, 2018ರಲ್ಲಿ ಕನ್ನಡ ದಿನ ಪತ್ರಿಕೆಯೊಂದಕ್ಕೆ ನರೇಂದ್ರ ಮೋದಿ ಬಗ್ಗೆ ಕವಿತೆಯೊಂದನ್ನು ಬರೆದಿದ್ದರು. ಅಲ್ಲದೆ, ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಿಕೊಂಡರೆ ತಪ್ಪೇನು ಎಂದು ಮಾತನಾಡಿದ್ದರು. ಈ ಕಾರಣಗಳಿಗೆ ದೊಡ್ಡರಂಗೇಗೌಡರಿಗೆ ಈ ಬಾರಿಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪಟ್ಟ ಕೊಡಲಾಗಿದೆ. ಹಿಂದಿ ಬಗ್ಗೆ ಒಲವಿರುವ ಸಾಹಿತಿ ಎಂದು ಗೌಡರನ್ನು ನೆಟ್ಟಿಗರು ಬಹುವಾಗಿ ಟೀಕಿಸಿದ್ದರು. ಈ ಬೆಳವಣಿಗೆಗಳಿಂದ ಮನನೊಂದಿರುವ ದೊಡ್ಡರಂಗೇಗೌಡರು ರಾಜ್ಯದ ಜನತೆಯ ಬಳಿ ಇದೀಗ ಬೇಷರತ್ ಕ್ಷಮೆ ಯಾಚಿಸಿದ್ದಾರೆ.

ಸುದ್ದಿ ವಿಶ್ಲೇಷಣೆ| 86 ನೇ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡರ ಟೀಕೆ ಎಷ್ಟು ಸರಿ?

Published On - 1:33 pm, Wed, 27 January 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ