AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ದಾಳಿ: ಕರ್ನಾಟಕದಲ್ಲಿ ಈವರೆಗೂ 12ಕ್ಕೂ ಹೆಚ್ಚು ಜನರು ರೇಬಿಸ್​ಗೆ ಬಲಿ!

ಕರ್ನಾಟಕದಲ್ಲಿ ರೇಬಿಸ್​ ರೋಗ ಕೊಂಚ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಬೀದಿ ನಾಯಿಗಳ ಹಾವಳಿಯಿಂದ ಪೋಷಕರು ಮಕ್ಕಳನ್ನು ಮನೆಯಿಂದ ಹೊರಗಡೆ ಬಿಡಲು ಹಿಂಜರಿಯುತ್ತಿದ್ದಾರೆ. ಬೆಂಗಳೂರಲ್ಲೂ ನಾಯಿಗಳ ದಾಳಿ ಹೆಚ್ಚಾಗಿದೆ. ಕಡಿವಾಣ ಹಾಕುವಂತೆ ಸಾರ್ವಜನಿಕರು ಬಿಬಿಎಂಪಿಗೆ ಮನವಿ ಮಾಡಿದ್ದಾರೆ. ​

ನಾಯಿಗಳ ದಾಳಿ: ಕರ್ನಾಟಕದಲ್ಲಿ ಈವರೆಗೂ 12ಕ್ಕೂ ಹೆಚ್ಚು ಜನರು ರೇಬಿಸ್​ಗೆ ಬಲಿ!
ನಾಯಿಗಳು
Vinay Kashappanavar
| Edited By: |

Updated on:Sep 01, 2024 | 12:41 PM

Share

ಬೆಂಗಳೂರು, ಸೆಪ್ಟೆಂಬರ್​ 01: ಕರ್ನಾಟಕದಲ್ಲಿ (Karnataka) ರೇಬಿಸ್​ ರೋಗ (Rabies disease) ಜೋರಾಗಿದೆ. ಬೆಂಗಳೂರು (Bengaluru) ಸೇರಿದ್ದಂತೆ ರಾಜ್ಯದಲ್ಲಿ ಪ್ರತಿ ವರ್ಷ ರೇಬೀಸ್ ರೋಗಕ್ಕೆ 25ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ವರ್ಷ ಈಗಾಗಲೇ ರಾಜ್ಯದಲ್ಲಿ 12ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 2022ರಲ್ಲಿ 32 ಜನರು ರೇಬಿಸ್​ ರೋಗಕ್ಕೆ ಬಲಿಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರೇಬಿಸ್​ ಪ್ರಕರಣಗಳು ಕೊಂಚ ಏರಿಕೆಯಾಗಿದೆ. ಹೀಗಾಗಿ ರೇಬಿಸ್​ ಇಂಜೆಕ್ಷನ್​ಗೆ ಬೇಡಿಕೆಗೆ ಹೆಚ್ಚಿದೆ.

ರೇಬೀಸ್ ರೋಗ ನಾಯಿ, ಬೆಕ್ಕು, ಮಂಗಗಳು, ಬಾವಲಿ, ದನ, ಮೇಕೆ ಕಡಿತದಿಂದ ಹರಡಬಹುದು. ಸಾಕು ನಾಯಿಯೇ ಇರಲಿ ಅಥವಾ ಬೀದಿ ನಾಯಿಯೇ ಇರಲಿ ಪ್ರಾಣಿಗಳು ಕಚ್ಚಿದರೆ ಕಡೆಗಣಿಸದೆ ತಕ್ಷಣ ಚಿಕಿತ್ಸೆ ಪಡೆಯುವುವಂತೆ ವೈದ್ಯರು ಹೇಳಿದ್ದಾರೆ.

ಎಲ್ಲ ನಾಯಿಗಳ ಕಡಿತದಿಂದ ರೇಬಿಸ್​ ರೋಗ ಕಂಡು ಬರುವುದಿಲ್ಲ. ರೇಬಿಸ್​ ಸೋಂಕಿತ ಅಥವಾ ಹುಚ್ಚು ನಾಯಿ ಕಡಿತದಿಂದ ಈ ರೋಗ ಬರುತ್ತದೆ. ಕಾಯಿಲೆ ಇರುವು ನಾಯಿ, ಬೆಕ್ಕು ಮತ್ತು ಮಂಗಗಳ ಕಡಿತದಿಂದ ಈ ಖಾಯಿಲೆ ಬರುತ್ತದೆ. ಕೊಂಚ ನಿರ್ಲಕ್ಷ್ಯ ವಹಿಸಿದರೆ ಜೀವಹಾನಿ ಕೂಡ ಆಗುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ: Rabies: ನಾಯಿ ಕಚ್ಚಿದ ನಂತರ ರೇಬೀಸ್ ಇಂಜೆಕ್ಷನ್ ಪಡೆದರೂ ಸಾಯುವ ಸಾಧ್ಯತೆ ಉಂಟಾ?

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ

ಬೆಂಗಳೂರಿನ ಕುರಬರಹಳ್ಳಿ, ಲಗ್ಗೇರೆ, ರಾಜಾಜಿನಗರ, ಬಸವೇಶ್ವರನಗರ ಹಾಗೂ ರಾಜಗೋಪಾಲನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ. ಪ್ರತಿ ಏರಿಯಾಗಳಲ್ಲಿ 8 ರಿಂದ 10 ಬೀದಿನಾಯಿಗಳಿವೆ. ಈ ಬೀದಿ ನಾಯಿಗಳು ರಾತ್ರಿ ವೇಳೆ ಬೈಕ್ ಸವಾರರಿಗೆ ಕಾಟ ಕೊಡುತ್ತಿವೆ. ಬೀದಿ ನಾಯಿಗಳ ಕಾಟದಿಂದ ಪೋಷಕರು ಮಕ್ಕಳನ್ನು ಮನೆಯಿಂದ ಹೊರಗಡೆ ಕಳಿಸಲು ಭಯ ಪಡುತ್ತಿದ್ದಾರೆ. ಬೀದಿ ನಾಯಿಗಳು ಗುಂಪು ಗುಂಪಾಗಿ ಬಂದು ಜನರಿಗೆ ತೊಂದರೆ ಕೊಡುತ್ತಿವೆ. ಹೀಗಾಗಿ, ಬೀದಿನಾಯಿಗಳ ನಿಯಂತ್ರಣಕ್ಕೆ ಬಿಬಿಎಂಪಿಗೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಕಳೆದ ಎಂಟು ತಿಂಗಳಲ್ಲಿ 16,888 ನಾಯಿ ದಾಳಿಯ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಶೇ 40 ರಷ್ಟು ಸಾಕು ನಾಯಿಗಳು ದಾಳಿ ಮಾಡಿವೆ ಎಂದು ಬಿಬಿಎಂಪಿ ವರದಿಯಲ್ಲಿ ಬಹಿರಂಗವಾಗಿದೆ. ಬಿಬಿಎಂಪಿ ಪೂರ್ವ-ಪಶ್ಚಿಮ ವಲಯದಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಜನವರಿಯಿಂದ ಜುಲೈವರೆಗಿನ ನಾಯಿಗಳ ದಾಳಿ ವಿವರ ಇಲ್ಲಿದೆ.

ಬೀದಿ ನಾಯಿಗಳ ದಾಳಿ

ಬೊಮ್ಮನಹಳ್ಳಿ: 782, ದಾಸರಹಳ್ಳಿ: 475, ಪೂರ್ವ: 2107, ಮಹದೇವಪುರ: 1359, ಆರ್.ಆರ್.ನಗರ: 1328, ದಕ್ಷಿಣ ವಲಯ: 1258, ಪಶ್ಚಿಮ ವಲಯ: 3479, ಯಲಹಂಕ ವಲಯ: 660, ಒಟ್ಟು: 11448 ಬೀದಿ ನಾಯಿಗಳು ದಾಳಿ ಮಾಡಿವೆ.

ಸಾಕು ನಾಯಿಗಳ ದಾಳಿ

ದಾಸರಹಳ್ಳಿ ವಲಯ: 271, ಪೂರ್ವ ವಲಯ: 975, ಮಹದೇವಪುರ ವಲಯ: 683, ಆರ್.ಆರ್.ನಗರ: 778, ದಕ್ಷಿಣ ವಲಯ: 489, ಪಶ್ಚಿಮ ವಲಯ: 1505, ಯಲಹಂಕ ವಲಯ: 392, ಒಟ್ಟು: 5440 ಸಾಕು ನಾಯಿಗಳು ದಾಳಿ ಮಾಡಿವೆ.

ರೇಬಿಸ್​ ರೋಗದ ಲಕ್ಷಣಗಳು

ತೀವ್ರ ನೋವು, ಸುಸ್ತಾಗುವುದು ತಲೆನೋವು, ತೀವ್ರ ಜ್ವರ, ಸ್ನಾಯುಗಳ ಬಿಗಿತ ಮತ್ತು ನೋವು, ಪಾರ್ಶ್ವವಾಯು, ಲಾಲಾರಸ ಅಥವಾ ಕಣ್ಣೀರು ಹೆಚ್ಚು ಉತ್ಪತ್ತಿಯಾಗಲು ಪ್ರಾರಂಭಿಸುವುದು. ದೊಡ್ಡ ಶಬ್ದಗಳಿಂದ ಕಿರಿಕಿರಿ ಹಾಗೂ ಮಾತನಾಡಲು ತೊಂದರೆಯಾಗುವುದು ಇತಂಹ ಲಕ್ಷಣ ಕಂಡು ಬಂದರೇ ನಿರ್ಲಕ್ಷ್ಯ ಮಾಡದೆ ಕೂಡಲೆ ಚಿಕಿತ್ಸೆ ಪಡೆಯಿರಿ ಎಂದು ವೈದ್ಯರು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:32 pm, Sun, 1 September 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್