AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ಚಿರತೆಯ ಹಿಡಿತಕ್ಕೆ ಸಿಕ್ಕಿಬಿದ್ದ ನಾಯಿಮರಿ; ಅದೃಷ್ಟವಷಾತ್ ಸಾವಿನ ದವಡೆಯಿಂದ ಪಾರು!

ಸಿಸಿಟಿವಿ ಫೂಟೇಜ್ ಮಾಹಿತಿಯ ಪ್ರಕಾರ, ರಾತ್ರಿ 11.42ರ ವೇಳೆಗೆ ಚಿರತೆ ಹಿಂದಿರುಗಿದೆ. ಆದರೆ, ಘಟನೆಯಿಂದ ಭಯ, ಆತಂಕಕ್ಕೆ ಒಳಗಾಗಿದ್ದ ನಾಯಿಮರಿ ರಾತ್ರಿ 2.30ರ ಬಳಿಕವೇ ಮನೆಯ ಸಿಟ್ ಔಟ್​ಗೆ ಬಂದಿದೆ. ಚಿರತೆಯ ಬಾಯಿಗೆ ಸಿಕ್ಕಿ ಗಾಯಗೊಂಡಿರುವ ನಾಯಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದಕ್ಷಿಣ ಕನ್ನಡ: ಚಿರತೆಯ ಹಿಡಿತಕ್ಕೆ ಸಿಕ್ಕಿಬಿದ್ದ ನಾಯಿಮರಿ; ಅದೃಷ್ಟವಷಾತ್ ಸಾವಿನ ದವಡೆಯಿಂದ ಪಾರು!
ಚಿರತೆ ( ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jul 05, 2021 | 7:42 PM

Share

ಮಂಗಳೂರು: ಏಳು ವರ್ಷದ ನಾಯಿಮರಿಯೊಂದು ಚಿರತೆ ಮುಂದೆ, ಸಾವಿನ ದವಡೆಯಲ್ಲಿ ಕಳೆದು ಅದೃಷ್ಟವಷಾತ್ ಬದುಕಿ ಉಳಿದು ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಗ್ರಾಮವೊಂದರಲ್ಲಿ ನಡೆದಿದೆ. ಸಾಕುನಾಯಿ, ಪುಟಾಣಿ ನಾಯಿಮರಿಯನ್ನು ಕುತ್ತಿಗೆಯ ಮೂಲಕ ಚಿರತೆ ಕಚ್ಚಿ ಹಿಡಿದುಕೊಂಡಿದೆ. ಆದರೆ, ಬಳಿಕ ಅಪ್ಪಿತಪ್ಪಿ ಎಂಬಂತೆ ಚಿರತೆ ಬಾಯಿಯಿಂದ ನಅಯಿಮರಿ ತಪ್ಪಿಸಿಕೊಂಡು ಬಚಾವಾಗಿದೆ.

ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ನಾಯಿಮರಿ ಬದುಕಿದೆಯಾ ಬಡಜೀವವೇ ಎಂಬಂತೆ ಹಿಂದೆಮುಂದೆ ನೋಡದೆ ಓಡಿ ಬಂದಿದೆ. ತನ್ನ ಸುರಕ್ಷ ವಲಯ ಸೇರಿಕೊಂಡಿದೆ. ಈ ಘಟನೆ ಗುರುವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ಸಮೀಪದ ಪಡುಕೊಣಾಜೆ ಎಂಬಲ್ಲಿ ನಡೆದಿದೆ. ಕಾಡಿನ ವಲಯಕ್ಕೆ ಸಮೀಪ ಇರುವ ಸತೀಶ್ ಕೋಟ್ಯಾನ್ ಎಂಬವರ ಮನೆಯಲ್ಲಿ ಹೀಗಾಗಿದೆ.

ಹೊಟೇಲ್ ಕೆಲಸ ಮಾಡುವ ಸತೀಶ್ ಎಂಬವರು ಇದೇ ಮನೆಯಲ್ಲಿ ಸುಮಾರು 20 ವರ್ಷಗಳಿಂದ ಜೀವನ ನಡೆಸುತ್ತಿದ್ದಾರೆ. ಆದರೆ, ಚಿರತೆ ಮನೆಯ ಬಳಿಗೆ ಬಂದ ಘಟನೆ ಇದೇ ಮೊದಲ ಬಾರಿಗೆ ನಡೆದಿದೆ. ಉಪ ಅರಣ್ಯಾಧಿಕಾರಿ ಮಂಜುನಾಥ್ ಗಾಣಿಗ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾತ್ರಿ 11.20 ಸುಮಾರಿಗೆ ಘಟನೆ ನಡೆದಿದೆ. ಮನೆಯ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ.

ಸಿಸಿಟಿವಿ ಫೂಟೇಜ್ ಮಾಹಿತಿಯ ಪ್ರಕಾರ, ರಾತ್ರಿ 11.42ರ ವೇಳೆಗೆ ಚಿರತೆ ಹಿಂದಿರುಗಿದೆ. ಆದರೆ, ಘಟನೆಯಿಂದ ಭಯ, ಆತಂಕಕ್ಕೆ ಒಳಗಾಗಿದ್ದ ನಾಯಿಮರಿ ರಾತ್ರಿ 2.30ರ ಬಳಿಕವೇ ಮನೆಯ ಸಿಟ್ ಔಟ್​ಗೆ ಬಂದಿದೆ. ಚಿರತೆಯ ಬಾಯಿಗೆ ಸಿಕ್ಕಿ ಗಾಯಗೊಂಡಿರುವ ನಾಯಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ

Viral Photo: 20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೆ ಮೇಲೆತ್ತಿ ನೋಡುತ್ತಿದೆ ಚಿರತೆ! ಅದ್ಭುತ ಚಿತ್ರ ವೈರಲ್​

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!