AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಮುದ್ದಿನ ಸಾಕು ನಾಯಿಯ ಸವಿ ನೆನಪಿಗೆ ಸಮಾಧಿ ಕಟ್ಟಿ ತಿಥಿ ಮಾಡಿ ಜನರಿಗೆ ಊಟ ಹಾಕಿದ ದಂಪತಿ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದಲ್ಲಿ ಸಾಕು ನಾಯಿಯನ್ನು ಕಳೆದುಕೊಂಡ ಮಾಲೀಕ ತನ್ನ ಮುದ್ದಿನ ನಾಯಿಗಾಗಿ ಸಮಾಧಿ ಕಟ್ಟಿಸಿ ತಿಥಿ ಮಾಡಿದ್ದಾರೆ. ಕಳೆದ ಮೇ 24 ರಂದು ಅನಾರೋಗ್ಯದ ಕಾರಣ ನಾಯಿ ಮೃತಪಟ್ಟಿತ್ತು. ಹೀಗಾಗಿ ಮನುಷ್ಯ ಸತ್ತಾಗ ಯಾವ ರೀತಿ ತಿಥಿ ಮಾಡುತ್ತಾರೋ ಅದೇ ರೀತಿ ತಮ್ಮ ಮುದ್ದಿನ ನಾಯಿ ಮೃತಪಟ್ಟ ಬಳಿಕ ಶಾಸ್ತ್ರಬದ್ಧವಾಗಿ ಅಂತ್ಯ ಸಂಸ್ಕಾರ ಮಾಡಿ ನಾಯಿಯ ಸವಿ ನೆನಪಿನಲ್ಲಿ ಮಾಲೀಕ ತಿಥಿ ಮಾಡಿದ್ದಾರೆ.

ತಮ್ಮ ಮುದ್ದಿನ ಸಾಕು ನಾಯಿಯ ಸವಿ ನೆನಪಿಗೆ ಸಮಾಧಿ ಕಟ್ಟಿ ತಿಥಿ ಮಾಡಿ ಜನರಿಗೆ ಊಟ ಹಾಕಿದ ದಂಪತಿ
ಸಾಕು ನಾಯಿ ಸವಿ ನೆನಪಿಗೆ ಸಮಾಧಿ ಕಟ್ಟಿ ತಿಥಿ ಮಾಡಿದ ಮಾಲೀಕ
TV9 Web
| Edited By: |

Updated on: Jun 20, 2021 | 2:55 PM

Share

ತುಮಕೂರು: ಮನುಷ್ಯರ ಜೀವನದಲ್ಲಿ ಸಾಕು ಪ್ರಾಣಿಗಳಿಗೆ ವಿಶೇಷ ಸ್ಥಾನವಿದೆ. ಹೀಗಾಗಿ ಮನುಷ್ಯರು ಶ್ವಾನಕ್ಕೂ ಮನುಷ್ಯರಷ್ಟೇ ಸ್ಥಾನ ನೀಡಿ ಹೆಚ್ಚು ಆತ್ಮೀಯರಾಗುತ್ತಾರೆ, ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಪ್ರಾಣಿಗಳಿಗೆ ಮನುಷ್ಯನ ಮೌನವನ್ನು ಅರ್ಥ ಮಾಡಿಕೊಳ್ಳುವ ವಿಶೇಷ ಗುಣವಿರುತ್ತೆ. ತಮ್ಮವರೂ ತಿಳಿದುಕೊಳ್ಳಲಾಗದ ಅದೆಷ್ಟೂ ಸಂಗತಿಗಳನ್ನು ಶ್ವಾನಗಳು ಬೇಗ ಗುರುತಿಸಿ ಸ್ಪಂದಿಸುತ್ತವೆ. ತಮ್ಮವರ ಜಾಗವನ್ನು ತುಂಬುತ್ತವೆ. ಪ್ರೀತಿ, ನಂಬಿಕೆ-ವಿಶ್ವಾಸಕ್ಕೆ ನಾಯಿಗಳು ಬೆಸ್ಟ್ ಉದಾಹರಣೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದಲ್ಲಿ ಸಾಕು ನಾಯಿಯನ್ನು ಕಳೆದುಕೊಂಡ ಮಾಲೀಕ ತನ್ನ ಮುದ್ದಿನ ನಾಯಿಗಾಗಿ ಸಮಾಧಿ ಕಟ್ಟಿಸಿ ತಿಥಿ ಮಾಡಿದ್ದಾರೆ. ಕಳೆದ ಮೇ 24 ರಂದು ಅನಾರೋಗ್ಯದ ಕಾರಣ ನಾಯಿ ಮೃತಪಟ್ಟಿತ್ತು. ಹೀಗಾಗಿ ಮನುಷ್ಯ ಸತ್ತಾಗ ಯಾವ ರೀತಿ ತಿಥಿ ಮಾಡುತ್ತಾರೋ ಅದೇ ರೀತಿ ತಮ್ಮ ಮುದ್ದಿನ ನಾಯಿ ಮೃತಪಟ್ಟ ಬಳಿಕ ಶಾಸ್ತ್ರಬದ್ಧವಾಗಿ ಅಂತ್ಯ ಸಂಸ್ಕಾರ ಮಾಡಿ ನಾಯಿಯ ಸವಿ ನೆನಪಿನಲ್ಲಿ ಮಾಲೀಕ ತಿಥಿ ಮಾಡಿದ್ದಾರೆ.

ಗ್ರಾಮದ ಕೊಟ್ಟೂರಯ್ಯ ಹಾಗೂ ಜಯಶೀಲ ದಂಪತಿ ತಮಗೆ ಮಕ್ಕಳಿಲ್ಲದ ಕಾರಣ ನಾಯಿಯನ್ನು ಸಾಕಿದ್ದರು. ಮಕ್ಕಳಿದ್ದರೆ ಯಾವ ರೀತಿ ಪ್ರೀತಿಯನ್ನು ಕೊಟ್ಟು ಬೆಳೆಸುತ್ತಿದ್ದರೂ ಅದೇ ರೀತಿ ನಾಯಿಗೆ ಮಕ್ಕಳ ಸ್ಥಾನ ನೀಡಿ ಸಾಕಿದ್ದರು. ಆದ್ರೆ ಅನಾರೋಗ್ಯದ ಕಾರಣ ಮೇ 24ರಂದು ಕೊನೆಯುಸಿರೆಳೆದಿದೆ. ಹೀಗಾಗಿ ಸಮಾಧಿ ಕಟ್ಟಿ ಜೂನ್ 19ರಂದು ತಿಥಿ ಮಾಡಿದ್ದಾರೆ. ಈ ವೇಳೆ ನಾಯಿಯ ಸವಿ ನೆನಪಿಗೆ ಊರಿನ ಗ್ರಾಮಸ್ಥರಿಗೆ ಊಟ ಹಾಕಿದ್ದಾರೆ.

ಇದನ್ನೂ ಓದಿ: ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!