AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Temple Hundi | ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ‌ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ, ಮಲೆ ಮಹದೇಶ್ವರ

Temple Hundi | ನಂಜುಂಡೇಶ್ವರ ದೇಗುಲದ ಹುಂಡಿಯಲ್ಲಿನ ಹಣವನ್ನು ತಹಶಿಲ್ದಾರ್ ಶರ್ಮಿಳಾ ದತ್ತು ಸಮ್ಮುಖದಲ್ಲಿ ಏಣಿಕೆ ಮಾಡಿದ್ದು, ಹುಂಡಿಯಲ್ಲಿ 1,11,64,033 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

Temple Hundi | ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ‌ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ, ಮಲೆ ಮಹದೇಶ್ವರ
ನಂಜನಗೂಡಿನ ನಂಜುಂಡೇಶ್ವರ ದೇಗುಲದ ಹುಂಡಿಯಲ್ಲಿನ ಹಣ ಏಣಿಕೆ
Follow us
preethi shettigar
|

Updated on:Mar 03, 2021 | 12:03 PM

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ದೇಗುಲದ ಹುಂಡಿಯಲ್ಲಿನ ಹಣವನ್ನು ತಹಶೀಲ್ದಾರ್ ಶರ್ಮಿಳಾ ದತ್ತು ಸಮ್ಮುಖದಲ್ಲಿ ಏಣಿಕೆ ಮಾಡಿದ್ದು, ಹುಂಡಿಯಲ್ಲಿ 1,11,64,033 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಅಲ್ಲದೇ 105 ಗ್ರಾಂ ಚಿನ್ನ, 2 ಕೆ.ಜಿ 250 ಗ್ರಾಂ ಬೆಳ್ಳಿ, 6 ವಿದೇಶಿ ಕರೆನ್ಸಿ ಇದ್ದು, ಚಲಾವಣೆ ಇಲ್ಲದ 1 ಸಾವಿರ ಮುಖಬೆಲೆಯ 11 ನೋಟುಗಳು, 500 ಮುಖಬೆಲೆಯ 87 ನೋಟುಗಳು ಸಹ ಹುಂಡಿಯಲ್ಲಿ ಪತ್ತೆಯಾಗಿವೆ.

ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಮಾಡಲಾಗಿದೆ. ಮಾದಪ್ಪನ ಹುಂಡಿಯಲ್ಲಿ 1.48 ಕೋಟಿ ರೂಪಾಯಿ ನಗದು ಸಂಗ್ರಹ. 31 ಗ್ರಾಂ ಚಿನ್ನ, 2 ಕೆಜಿ 82 ಬೆಳ್ಳಿ‌ ಸಂಗ್ರಹ. ಪ್ರತಿ ತಿಂಗಳಿಗೆ ಒಮ್ಮೆ ನಡೆಯುವ ಹುಂಡಿ ಎಣಿಕೆ. ಹುಂಡಿಯಲ್ಲಿ 44 ವಿದೇಶಿ ನೋಟುಗಳು ಪತ್ತೆಯಾಗಿದ್ದು, 9 ಅಮೆರಿಕನ್ ಡಾಲರ್ ನೋಟುಗಳು, 15 ಇಂಗ್ಲೆಂಡ್ ಪೌಂಡ್ಸ್ ಹುಂಡಿಯಲ್ಲಿ ಶೇಖರಣೆಯಾಗಿದೆ.

NANJUNDESHWARA TEMPLE 1

ಹುಂಡಿಯಲ್ಲಿ 1,11,64,033 ರೂಪಾಯಿ ಕಾಣಿಕೆ ಸಂಗ್ರಹ

ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ತಂದು ಕೊಡುವ ದೇಗುಲಗಳ  ಪೈಕಿ ಎರಡನೇ ಸ್ಥಾನವನ್ನು ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇಗುಲದ ಹುಂಡಿ ಹಣ ಎಣಿಕೆ ಪ್ರತಿ ತಿಂಗಳಿನಂತೆ ಈ ಬಾರಿಯೂ ನಡೆದಿದ್ದು, ಪುನಃ ಮಾದಪ್ಪ ಕೋಟಿ ರೂಪಾಯಿ ಒಡೆಯನಾಗಿದ್ದಾನೆ.

Male Mahadeshwara temple

ಮಲೆ ಮಹದೇಶ್ವರ ದೇಗುಲ

ಕೊರೊನಾ ನಂತರದ ದಿನಗಳಲ್ಲಿ ಸದ್ಯ ಎಲ್ಲಾ ದೇವಾಲಯಗಳ ಬಾಗಿಲು ತೆರೆದಿದ್ದು, ಹುಂಡಿಯಲ್ಲಿ ಹಣವು ಕೂಡ ಸಂಗ್ರಹವಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ತಿರುಪತಿ ದೇವರ ಹುಂಡಿಯೂ ಕೂಡ ಕೊರೊನಾ ನಂತರದ ದಿನಗಳಲ್ಲಿ ಮತ್ತೆ ಹೆಚ್ಚು ಹಣವನ್ನು ಸಂಗ್ರಹಿಸಿದ್ದು, ಇದಕ್ಕೆ ನಿದರ್ಶನ ಎನ್ನುವಂತೆ ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿ 24 ಗಂಟೆಗಳಲ್ಲಿ 44 ಲಕ್ಷ ರೂಪಾಯಿ ಶೇಖರಣೆಯಾದ ಉದಾಹರಣೆಗಳಿವೆ.

ಇದನ್ನೂ ಓದಿ: ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ

ತಿರುಮಲ ದೇವಾಲಯದ ಹುಂಡಿ ಏಣಿಕೆ: ಆಂಧ್ರ ಪ್ರದೇಶದ ತಿರುಮಲ ದೇವಸ್ಥಾನದ ಹುಂಡಿಗೆ ಕಳೆದ 24 ಗಂಟೆಗಳಲ್ಲಿ ಭಾರಿ ಆದಾಯ ಸಂಗ್ರಹವಾಗಿದ್ದು, 3.41ಕೋಟಿ ರೂ‌ಪಾಯಿ ನಗದು‌ ಹುಂಡಿಯಲ್ಲಿ ಒಟ್ಟಾಗಿದೆ. ಇನ್ನು ಒಂದು ದಿನದಲ್ಲಿ 52,135 ಭಕ್ತರಿಂದ‌ ಬಾಲಾಜಿಯ ದರ್ಶನವಾಗಿದ್ದು, 22967 ಭಕ್ತರಿಂದ‌ ಬಾಲಾಜಿಗೆ ಮುಡಿ ಸಮರ್ಪಣೆ ಮಾಡಲಾಗಿದೆ.

ಇದನ್ನೂ ಓದಿ: ಕೊರೊನಾ ಸಡಿಲಿಕೆ ಬಳಿಕ ತಿಮ್ಮಪ್ಪನ ಆದಾಯ ಎಷ್ಟು ಗೊತ್ತಾ?

Published On - 12:00 pm, Wed, 3 March 21

ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್