AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದರುವುದು ಬೇಡ, ಆತ್ಮಸ್ಥೈರ್ಯದಿಂದಿರಿ; ಕೊರೊನಾ ಗೆದ್ದು ಬಂದ ಒಂದೇ ಕುಟುಂಬದ 17 ಮಂದಿ

ಕೊರೊನಾ ಸೋಂಕಿನಿಂದ ಗೆದ್ದು ಬಂದ ಇಡೀ ಕುಟುಂಬ ಜನರಿಗೆ ಧೈರ್ಯ ತುಂಬುತ್ತಿದೆ. ಕೊರೊನಾ ಸೋಂಕಿಗೆ ಹೆದರಬೇಡಿ ಎಂದು ಎಚ್ಚರಿಕೆಯ ಮಾತುಗಳನ್ನಾಡಿ ಧೈರ್ಯ ಹೇಳುತ್ತಿದೆ.

ಹೆದರುವುದು ಬೇಡ, ಆತ್ಮಸ್ಥೈರ್ಯದಿಂದಿರಿ; ಕೊರೊನಾ ಗೆದ್ದು ಬಂದ ಒಂದೇ ಕುಟುಂಬದ 17 ಮಂದಿ
ಅವಿಭಕ್ತ ಕುಟುಂಬ
shruti hegde
|

Updated on: May 07, 2021 | 4:29 PM

Share

ಮೈಸೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಅದೆಷ್ಟೋ ಜನ ಕೊರೊನಾ ಸೋಂಕಿಗೆ ಹೆದರಿದ್ದಾರೆ. ಹೀಗಿರುವಾಗ ಕೊರೊನಾ ಸೋಂಕಿನಿಂದ ಗೆದ್ದು ಬಂದ 17 ಜನರ ಅವಿಭಕ್ತ ಕುಟುಂಬ ಜನರಿಗೆ ಧೈರ್ಯ ತುಂಬುತ್ತಿದೆ. ಕೊರೊನಾ ಸೋಂಕಿಗೆ ಹೆದರಬೇಡಿ ಎಂದು ಧೈರ್ಯ ಹೇಳಿದೆ.

ಕಳೆದ ತಿಂಗಳ 24 ರಂದು ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿರುವ ರೈತ ಸಂಘದ ರಾಜ್ಯಾಧ್ಯಕ್ಷ ನಾಗೇಂದ್ರ ಅವರ ಸಹೋದರ ಲಿಂಗರಾಜೇಗೌಡ ಎಂಬುವರಿಗೆ ಪಾಸಿಟಿವ್ ವರದಿ ದಾಖಲಾಗಿತ್ತು. ತದನಂತರ ಪರೀಕ್ಷೆಗೆ ಒಳಪಟ್ಟ ಕುಟುಂಬದ 17 ಮಂದಿಗೂ ಕೊರೊನಾ ಸೋಂಕು ತಗುಲಿತ್ತು. ಆ ಬಳಿಕ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಲೀಂ ಪಾಷಾ ನೇತೃತ್ವದ ತಂಡ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವೈದ್ಯರ ತಂಡ ಮನೆಯವರಿಗೆ ಆತ್ಮಸ್ಥೈರ್ಯ ತುಂಬಿತ್ತು. ಪ್ರತಿದಿನವೂ ಕೂಡಾ ವೈದ್ಯರು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದರು.

ವಾಸದ ಮನೆಯಲ್ಲೇ ಹೋಮ್ ಐಸೋಲೇಷನ್ ಮಾಡಲಾಗಿತ್ತು. ಇದೀಗ ಹದಿನೇಳು ಮಂದಿಯೂ ಮಹಾಮಾರಿ ಕೊರೊನಾದಿಂದ ಗೆದ್ದು ಬಂದಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಕೂಡಲೇ ಭಯ ಪಡುವುದು ಬೇಡ. ಆತ್ಮಸ್ಥೈರ್ಯದಿಂದ ಎದುರಿಸಿದರೆ ಕೊರೊನಾದಿಂದ ಮುಕ್ತರಾಗಬಹುದು ಎಂದು ಕುಟುಂಬದ ಸದಸ್ಯರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮುಚ್ಚಿಟ್ಟ ಗದಗ ಜಿಲ್ಲಾಡಳಿತ; ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

Follow Us
shruti hegde
shruti hegde
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?