AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರಕ್ಕೆ ದೇಣಿಗೆ ನೀಡದವರು ಬಾಯಿಗೆ ಬಂದ ಹಾಗೆ ಮಾತನಾಡಬಾರದು; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ರಾಮ ಮಂದಿರ ಟ್ರಸ್ಟ್‌ ಸರ್ಕಾರ ರಚಿಸಿದ ಟ್ರಸ್ಟ್​ ಆದ ಕಾರಣ ಎಲ್ಲದಕ್ಕೂ ಲೆಕ್ಕ ಇಟ್ಟಿರುತ್ತಾರೆ. ಪ್ರಚಾರ ಸಿಗುತ್ತದೆ ಎಂದು ವಿರೋದ ಪಕ್ಷದ ನಾಯಕರು ಬಾಲಿಶತನದ ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

ರಾಮ ಮಂದಿರಕ್ಕೆ ದೇಣಿಗೆ ನೀಡದವರು ಬಾಯಿಗೆ ಬಂದ ಹಾಗೆ ಮಾತನಾಡಬಾರದು; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
guruganesh bhat
| Edited By: |

Updated on: Feb 21, 2021 | 1:50 PM

Share

ಹುಬ್ಬಳ್ಳಿ: ರಾಮ ಮಂದಿರಕ್ಕೆ ದೇಣಿಗೆ ನೀಡುವುದು ಕಡ್ಡಾಯವಲ್ಲ. ಇದು ಜನರ ಭಾವನೆಯ ವಿಷಯ. ದೇಣಿಗೆ ನೀಡದವರು ಬಾಯಿಗೆ ಬಂದ ಹಾಗೆ ಮಾತನಾಡುವುದು ಸರಿಯಲ್ಲ. ನೀವು ದೇಣಿಗೆ ಕೊಡದಿದ್ದರೆ ತಕರಾರಿರಲಿಲ್ಲ. ಆದರೆ ನಾನು ನನ್ನ ಊರಲ್ಲಿ ರಾಮಮಂದಿರ ಕಟ್ಟಿಸುತ್ತೇನೆ, ಅಯೋಧ್ಯೆಯಲ್ಲೇ ಏಕೆ ರಾಮ ಮಂದಿರ ಕಟ್ಟಬೇಕೆಂದು ಪ್ರಶ್ನಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಸದ್ಯ ಪ್ರಚಲಿತದಲ್ಲಿರುವ ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿರೋಧ ಪಕ್ಷಗಳ ನಾಯಕರ ಹೇಳಿಕೆಯನ್ನು ಲೇವಡಿ ಮಾಡಿದರು.

ದಿಶಾರವಿ ಬಂಧನದ ಕುರಿತ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಅಸಂಬದ್ಧ ಎಂದು ವ್ಯಾಖ್ಯಾನಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗ್ರೇಟಾ ಥನ್​ಬರ್ಗ್ ಹಂಚಿಕೊಂಡಿದ್ದ ಟೂಲ್​ಕಿಟ್​ನಲ್ಲಿ ಖಾಲಿಸ್ತಾನ್ ಚಳವಳಿ ಬಗ್ಗೆ ಚರ್ಚೆ ಆಗಿರುವುದು ಸ್ಪಷ್ಟವಾಗಿ ಅತ್ಯಂತ ಸ್ಪಷ್ಟವಾಗಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸಲು ಉಗ್ರ ದಾವೂದ್ ಇಬ್ರಾಹಿಂನನ್ನೂ ಸಹ ಬೆಂಬಲಿಸುವ ಮಾನಸಿಕತೆ ಬೆಳೆಸಿಕೊಂಡಿದ್ದಾರೆ. PFI ಸದಸ್ಯರ ಮೇಲಿನ ಪ್ರಕರಣ ಮರಳಿ ಪಡೆದಿರುವುದು ವಿರೋಧ ಪಕ್ಷದವರು ಹಿಂದೂ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ. ರಾಜಕೀಯ ಲಾಭಕ್ಕಾಗಿ ಎಂತಹ ಹೀನಕೃತ್ಯಕ್ಕೆ ಇಳಿಯಲು ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ದರಾಗಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಅವರು ಹರಿಹಾಯ್ದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಾಲಿಶ ಹೇಳಿಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಲೆಕ್ಕ ಕೇಳಿದ ವಿಚಾರವನ್ನೂ ಪ್ರಸ್ತಾಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೇಣಿಗೆ ಸಂಗ್ರಹ ವಿಚಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳಿಕೆ ದುರಾದೃಷ್ಟಕರ. 2 ಬಾರಿ ಸಿಎಂ ಆದವರು ಮಾಹಿತಿ ಪಡೆದು ಹೇಳಿಕೆ ಕೊಡಬೇಕಿತ್ತು. ಸರ್ಕಾರ ರಚಿಸಿದ ಟ್ರಸ್ಟ್‌ ಆದ ಕಾರಣ ಎಲ್ಲದಕ್ಕೂ ಲೆಕ್ಕ ಇಟ್ಟಿರುತ್ತಾರೆ. ಪ್ರಚಾರ ಸಿಗುತ್ತದೆ ಎಂದು ಬಾಲಿಶತನದ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮುಸ್ಲಿಂ ಜನಾಂಗವನ್ನು ತುಷ್ಟೀಕರಣ ಮಾಡುವಂತಹ ಇಂತಹ ಹೇಳಿಕೆಯಿಂದ ಬೇಸತ್ತ ಮುಸಲ್ಮಾನರು ಸಹ ಇವರನ್ನು ನಂಬುವುದಿಲ್ಲ. ರಾಜ್ಯದಲ್ಲಿ ಪಿಎಫ್​ಐ, ಎಸ್​ಡಿಪಿಐಗೆ ಬೆಂಬಲ ಕೊಡುತ್ತಾರೆ. ಶಾಸಕ ಅಖಂಡ ಶ್ರೀನಿವಾಸ ಮನೆ ಮೇಲೆ ದಾಳಿ ಆದಾಗ ಖಂಡಿಸಲಿಲ್ಲ. ಏಕೆಂದರೆ, ಖಂಡಿಸುವ ಧೈರ್ಯ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಇರಲಿಲ್ಲ. ಇವೆಲ್ಲವೂ ಕಾಂಗ್ರೆಸ್ ಪಕ್ಷದವರ ಎಡಬಿಡಂಗಿ ನೀತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಒಂದು ಎಕರೆ ಜಾಗ ಕೊಡುತ್ತೇನೆ.. ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಿ -ಸಿದ್ದರಾಮಯ್ಯಗೆ ರೈತನ ನೇರ ಸವಾಲ್​

Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ